CSK vs GT Final: ಸಾಯಿ ಸುದರ್ಶನ್ ಅಬ್ಬರ, ಸಹಾ ಅರ್ಧಶತಕ; ಚೆನ್ನೈಗೆ ಕಠಿಣ ಗುರಿ

ಕಳೆದ ಮಾರ್ಚ್ ತಿಂಗಳ ಅಂತ್ಯದಲ್ಲಿ ಆರಂಭಗೊಂಡಿದ್ದ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಇಂದು ( ಮೇ 29 ) ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್ ಪಂದ್ಯದ ಮೂಲಕ ಅಂತ್ಯಗೊಳ್ಳುತ್ತಿದೆ.
ಎಲ್ಲಾ ಯೋಜನೆಯಂತೆ ನಡೆದಿದ್ದರೆ ನಿನ್ನೆಯೇ ( ಮೇ 28 ) ಈ ಪಂದ್ಯ ನಡೆಯಬೇಕಿತ್ತು. ಆದರೆ ನಿನ್ನೆ ವಿಪರೀತ ಮಳೆ ಬಂದ ಕಾರಣ ಪಂದ್ಯ ರದ್ದಾಗಿ ಇಂದಿನ ರಿಸರ್ವ್ ಡೇಗೆ ಮುಂದೂಡಲ್ಪಟ್ಟಿತ್ತು. ಅದರಂತೆ ಇಂದು ಮಳೆಯ ಅಡ್ಡಿಯಿಲ್ಲದೇ ಪಂದ್ಯ ಆರಂಭವಾಗಿದ್ದು, ಪಂದ್ಯದಲ್ಲಿ ಟಾಸ್ ಗೆದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ ಎಸ್ ಧೋನಿ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಗುಜರಾತ್ ಟೈಟನ್ಸ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದ್ದರು.
ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ ವೃದ್ಧಿಮಾನ್ ಸಹಾ ಅರ್ಧಶತಕ ಹಾಗೂ ಸಾಯಿ ಸುದರ್ಶನ್ ಅಬ್ಬರದ ಬ್ಯಾಟಿಂಗ್ ನೆರವಿನಿಂದ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್ಗಳ ಕಠಿಣ ಗುರಿಯನ್ನು ನೀಡಿದೆ. ಗುಜರಾತ್ ಟೈಟನ್ಸ್ ತಂಡದ ಪರ ಶುಬ್ಮನ್ ಗಿಲ್ ಹಾಗೂ ವೃದ್ಧಿಮಾನ್ ಸಹಾ ಮೊದಲು ಬ್ಯಾಟಿಂಗ್ ಮಾಡಿದರು. ವೃದ್ಧಿಮಾನ್ ಸಹಾ 39 ಎಸೆತಗಳಲ್ಲಿ 54 ರನ್ ಗಳಿಸಿದರೆ, ಶುಬ್ಮನ್ ಗಿಲ್ 20 ಎಸೆತಗಳಲ್ಲಿ 39 ರನ್ ಗಳಿಸಿದರು.
ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ 47 ಎಸೆತಗಳಲ್ಲಿ 8 ಬೌಂಡರಿ ಹಾಗೂ 6 ಸಿಕ್ಸರ್ ಸಹಿತ 96 ರನ್ ಕಲೆಹಾಕಿ ಅಬ್ಬರಿಸಿ ಶತಕ ವಂಚಿತರಾದರು. ಹಾರ್ದಿಕ್ ಪಾಂಡ್ಯ 12 ಎಸೆತಗಳಲ್ಲಿ ಅಜೇಯ 21 ರನ್ ಗಳಿಸಿದರೆ, ರಶೀದ್ ಖಾನ್ ಡಕ್ಔಟ್ ಆದರು.
ಚೆನ್ನೈ ಸೂಪರ್ ಕಿಂಗ್ಸ್ ಪರ ಮಹೀಶ ಪತಿರಾಣ ಎರಡು ವಿಕೆಟ್ ಪಡೆದರೆ, ದೀಪಕ್ ಚಹಾರ್ ಹಾಗೂ ರವೀಂದ್ರ ಜಡೇಜಾ ತಲಾ ಒಂದೊಂದು ವಿಕೆಟ್ ಪಡೆದರು.
ಇನ್ನು ಎರಡೂ ತಂಡಗಳು ಸಹ ಹಳೆಯ ಪಂದ್ಯದಲ್ಲಿ ಕಣಕ್ಕಿಳಿದ ತಂಡವನ್ನೇ ಕಣಕ್ಕಿಳಿಸಿವೆ. ಈ ಪಂದ್ಯದಲ್ಲಿ ಕಣಕ್ಕಿಳಿದಿರುವ ಆಡುವ ಬಳಗಗಳು ಈ ಕೆಳಕಂಡಂತಿವೆ..
ಗುಜರಾತ್ ಟೈಟಾನ್ಸ್ (ಪ್ಲೇಯಿಂಗ್ XI): ವೃದ್ಧಿಮಾನ್ ಸಹಾ ( ವಿಕೆಟ್ ಕೀಪರ್ ), ಶುಬ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ(ನಾಯಕ), ವಿಜಯ್ ಶಂಕರ್, ಡೇವಿಡ್ ಮಿಲ್ಲರ್, ರಾಹುಲ್ ತೆವಾಟಿಯಾ, ರಶೀದ್ ಖಾನ್, ಮೋಹಿತ್ ಶರ್ಮಾ, ನೂರ್ ಅಹ್ಮದ್ ಹಾಗೂ ಮೊಹಮ್ಮದ್ ಶಮಿ
ಚೆನ್ನೈ ಸೂಪರ್ ಕಿಂಗ್ಸ್ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೇ, ಅಜಿಂಕ್ಯ ರಹಾನೆ, ಮೊಯಿನ್ ಅಲಿ, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂಎಸ್ ಧೋನಿ (ನಾಯಕ ಹಾಗೂ ವಿಕೆಟ್ ಕೀಪರ್), ದೀಪಕ್ ಚಾಹರ್, ಮಥೀಶ ಪತಿರಣ, ತುಷಾರ್ ದೇಶಪಾಂಡೆ ಮತ್ತು ಮಹೇಶ್ ತೀಕ್ಷಣ
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications