ಐಪಿಎಲ್ನಲ್ಲಿ ಭಾರತದ ಈ ಆಟಗಾರನ ಮೇಲೆ ಕಣ್ಣಿಡಿ ಎಂದ ಹರ್ಭಜನ್ ಸಿಂಗ್

16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ತಿಂಗಳಾಂತ್ಯದಲ್ಲಿ ಆರಂಭವಾಗಲಿರುವ ಈ ಮೆಗಾ ಟೂರ್ನಿಯ ಮೇಲೆ ಈಗ ಎಲ್ಲರ ಚಿತ್ತ ನೆಟ್ಟಿದೆ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಬಳಿಕ ಏಕದಿನ ಸರಣಿ ಕೂಡ ಮುಕ್ತಾಯವಾಗಿದ್ದು ಇದರ ಬೆನ್ನಲ್ಲೇ ಐಪಿಎಲ್ ಮೇಲಿನ ಕುತೂಹಲ ಗರಿಗೆದರಿದೆ
ಈ ಬಾರಿಯ ಐಪಿಎಲ್ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಲಿರುವ ಆಟಗಾರನ ಬಗ್ಗೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಮಾತನಾಡಿದ್ದಾರೆ. ಭಾರತದ ಓರ್ವ ಆಟಗಾರನ ಮೇಲೆ ಈ ಬಾರಿಯ ಐಪಿಎಲ್ನಲ್ಲಿ ಎಲ್ಲರೂ ಚಿತ್ತ ನೆಡಬೇಕು ಎಂದಿದ್ದಾರೆ ಹರ್ಭಜನ್ ಸಿಂಗ್. ಅಂದಹಾಗೆ ಹರ್ಭಜನ್ ಸಿಂಗ್ ಹೇಳಿರುವ ಆ ಆಟಗಾರ ಬೇರೆ ಯಾರೂ ಅಲ್ಲ. ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿರುವ ಭಾರತದ ಅನುಭವಿ ಆಲ್ರೌಂಡರ್ ರವೀಂದ್ರ ಜಡೇಜಾ ಬಗ್ಗೆ.
WTC Final: ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಹ್ಯಾಟ್ಸ್ಆಫ್ ಎಂದ ಅನುಭವಿ ಆಟಗಾರ ಆರ್ ಅಶ್ವಿನ್
2023ರ ಐಪಿಎಲ್ ಆವೃತ್ತಿಯಲ್ಲಿ ರವೀಂದ್ರ ಜಡೇಜಾ ವಿಶೇಷ ಪ್ರದರ್ಶನ ನೀಡಲಿದ್ದಾರೆ ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್. ರವೀಂದ್ರ ಜಡೇಜಾ ಜೊತೆಗೆ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಆಡಿರುವ ಅನುಭವ ಹೊಂದಿರುವ ಹರ್ಭಜನ್ ಸಿಂಗ್ ವಿಶ್ವದ ಅತ್ಯುತ್ತಮ ಆಲ್ರೌಂಡರ್ ರವೀಂದ್ರ ಜಡೇಜಾ ಎಂದು ಬಣ್ಣಿಸಿದ್ದು ಭಾರತದ ಕಂಡೀಶನ್ನಲ್ಲಿ ಅವರು ಅತ್ಯಂತ ಯಶಸ್ವಿ ಕ್ರಿಕೆಟಿಗ ಎಂದಿದ್ದಾರೆ.
"ಈ ಬಾರಿಯ ಐಪಿಎಲ್ನಲ್ಲಿ ಎಲ್ಲರೂ ಚಿತ್ತ ನೆಡಬೇಕಾದ ಆಟಗಾರ ಎಂದರೆ ಅದು ಆಲ್ರೌಂಡರ್ ರವೀಂದ್ರ ಜಡೇಜಾ. ವಿಶೇಷವಾಗಿ ಅವರು ಸಿಎಸ್ಕೆ ಪರವಾಗಿ ಯಾವ ರೀತಿಯಾಗಿ ಬ್ಯಾಟಿಂಗ್ ಮಾಡಲಿದ್ದಾರೆ ಎಂಬುದು ಕಾದು ನೋಡಬೇಕಿದೆ. ಈ ಬಾರಿ ಅವರು ಅವರು ಸ್ವಲ್ಪ ಮೇಲಿನ ಕ್ರಮಾಂಕದಲ್ಲಿ ಆಡುವ ಸಾಧ್ಯತೆಯಿದೆ ಅಲ್ಲದೆ ಬೌಲಿಂಗ್ನಲ್ಲಿ ನಾಲ್ಕು ಓವರ್ಗಳ ಬೌಲಿಂಗ್ ದಾಳಿ ಕೂಡ ನಡೆಸಲಿದ್ದಾರೆ" ಎಂದಿದ್ದಾರೆ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್. ಸ್ಟಾರ್ ಸ್ಟೋರ್ಟ್ಸ್ ಜೊತೆಗೆ ಮಾತನಾಡುವ ಸಂದರ್ಭದಲ್ಲಿ ಹರ್ಭಜನ್ ಸಿಂಗ್ ಈ ಅಭಿಪ್ರಾಯ ವ್ಯಕ್ತಪಡಿಸಿದರು.
Tim Paine Retirement: ಆಸ್ಟ್ರೇಲಿಯಾ ತಂಡದ ಮಾಜಿ ನಾಯಕ ಟಿಮ್ ಪೈನ್ ನಿವೃತ್ತಿ
"ವಿಶ್ವ ಮಟ್ಟದಲ್ಲಿ ನೋಡಿದರೂ ಕೂಡ ರವೀಂದ್ರ ಜಡೇಜಾ ಅವರಿಗಿಂತ ಉತ್ತಮ ಆಲ್ರೌಂಡರ್ ಇದ್ದಾರೆ ಎಂದು ನನಗೆ ಅನಿಸುತ್ತಿಲ್ಲ. ಹಾಗಾಗಿ ಐಪಿಎಲ್ನಲ್ಲಿ ರವೀಂದ್ರ ಜಡೇಜಾ ಪ್ರದರ್ಶನ ನೋಡಲು ನಾನು ಎದುರು ನೋಡುತ್ತಿದ್ದೇನೆ. ಭಾರತದ ಕಂಡೀಶನ್ನಲ್ಲಿ ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡು ವಿಭಾಗದಲ್ಲಿಯೂ ಅವರು ಅತ್ಯಂತ ಯಶಸ್ವಿ ಆಟಗಾರ" ಎಂದಿದ್ದಾರೆ ಹರ್ಭಜನ್ ಸಿಂಗ್.
ಇನ್ನು ಕಳೆದ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕನಾಗಿ ನೇಮಕವಾದ ರವೀಂದ್ರ ಜಡೇಜಾ ಆ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ನೀಡಲು ವಿಫಲವಾಗಿದ್ದರು. ಈ ಅವಧಿಯಲ್ಲಿ ತಂಡದಲ್ಲಿ ಸಾಕಷ್ಟು ಗೊಂದಲಕಾರಿ ವಾತಾವರಣಕೂಡ ಉಂಟಾಗಿ ಬಳಿಕ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದರು. ಬಳಿಕ ಎಂಎಸ್ ಧೋನಿ ಮತ್ತೆ ತಂಡದ ನಾಯಕತ್ವ ವಹಿಸಿಕೊಂಡಿದ್ದರು. ಸಿಎಸ್ಕೆ ತಂಡ ಕೂಡ ಕಳೆದ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ 9ನೇ ಸ್ಥಾನವನ್ನು ಪಡೆದು ಆವೃತ್ತಿಯನ್ನು ಅಂತ್ಯಗೊಳಿಸಿತ್ತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications