IPL 2023: ಅತಿಹೆಚ್ಚು 200+ ರನ್ ಹರಿದುಬಂದದ್ದು ಯಾವ ಸೀಸನ್ನಲ್ಲಿ?

ನಿನ್ನೆ ( ಮೇ 29 ) ಅಹ್ಮದಾಬಾದ್ನ ನರೇಂದ್ರ ಮೋದಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದ ಮೂಲಕ ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬಿದ್ದಿದೆ.
ಮೊನ್ನೆಯೇ ಮುಕ್ತಾಯಗೊಳ್ಳಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿ ಉಂಟು ಮಾಡಿದ ಕಾರಣ ನಿನ್ನೆಗೆ ಮುಂದೂಡಲ್ಪಟ್ಟಿತ್ತು. ಆದರೆ ಮೊದಲ ಇನ್ನಿಂಗ್ಸ್ ಮುಕ್ತಾಯಗೊಂಡು ಎರಡನೇ ಇನ್ನಿಂಗ್ಸ್ ಆರಂಭಗೊಳ್ಳುತ್ತಿದ್ದಂತೆ ಮತ್ತೆ ಮಳೆ ಸುರಿಯಲಾರಂಭಿಸಿತು. ಮಳೆಯ ಹೊಡೆತಕ್ಕೆ ಪಂದ್ಯ ಐದು ಓವರ್ ಕಡಿತಗೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟನ್ಸ್ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಕಲೆಹಾಕಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಗೆಲ್ಲಲು 215 ರನ್ಗಳ ಕಠಿಣ ಗುರಿಯನ್ನು ನೀಡಿತ್ತು.
ಆದರೆ ಮಳೆಯ ಕಾರಣದಿಂದಾಗಿ 15 ಓವರ್ಗಳಿಗೆ ಪಂದ್ಯ ಕುಸಿದು ಚೆನ್ನೈ ಸೂಪರ್ ಕಿಂಗ್ಸ್ 15 ಓವರ್ಗಳಲ್ಲಿ 171 ರನ್ ಬಾರಿಸಬೇಕಾದ ಅಗತ್ಯವಿತ್ತು. ಈ ಗುರಿಯನ್ನು ಯಶಸ್ವಿಯಾಗಿ ಬೆನ್ನತ್ತಿದ ಚೆನ್ನೈ ಸೂಪರ್ ಕಿಂಗ್ಸ್ 15 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿ 5 ವಿಕೆಟ್ಗಳ ಗೆಲುವನ್ನು ಕಂಡಿತು.
ಹೀಗೆ ಈ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡ 200ಕ್ಕಿಂತ ಹೆಚ್ಚು ರನ್ ಕಲೆಹಾಕಿದ ಪರಿಣಾಮ ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 37ನೇ ಬಾರಿಗೆ 200ಕ್ಕಿಂತ ಹೆಚ್ಚು ರನ್ಗಳು ಹರಿದುಬಂತು. ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತಿಹೆಚ್ಚು ಬಾರಿ 200ಕ್ಕಿಂತ ಹೆಚ್ಚು ರನ್ ಹರಿದುಬಂದದ್ದು ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಆವೃತ್ತಿಯಲ್ಲಿಯೇ ಎಂಬ ದಾಖಲೆ ಸಹ ಸೃಷ್ಟಿಯಾಯಿತು.
ಹೌದು, ಇಲ್ಲಿಯವರೆಗೂ ನಡೆದಿರುವ ಒಟ್ಟು 16 ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗಳ ಪೈಕಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿಯೇ ಅತಿಹೆಚ್ಚು ಬಾರಿ ಇನ್ನೂರಕ್ಕಿಂತ ಹೆಚ್ಚಿ ರನ್ ಹರಿದುಬಂದಿದೆ.
ಅತಿಹೆಚ್ಚು ಬಾರಿ 200+ ರನ್ ಹರಿದುಬಂದ ಟಾಪ್ 3 ಆವೃತ್ತಿಗಳ ಪಟ್ಟಿ ಈ ಕೆಳಕಂಡಂತಿದೆ..
* ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 37 ಇನ್ನಿಂಗ್ಸ್ನಲ್ಲಿ 200ಕ್ಕಿಂತ ಹೆಚ್ಚಿನ ರನ್ ಹರಿದುಬಂದಿದೆ.
* 2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಒಟ್ಟು 18 ಇನ್ನಿಂಗ್ಸ್ನಲ್ಲಿ 200ಕ್ಕಿಂತ ಹೆಚ್ಚಿನ ರನ್ ಹರಿದುಬಂದಿತ್ತು.
* 2018ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 15 ಇನ್ನಿಂಗ್ಸ್ನಲ್ಲಿ 200ಕ್ಕಿಂತ ಹೆಚ್ಚಿನ ರನ್ ಹರಿದುಬಂದಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications