IPL 2023: CSK ಯಶಸ್ಸಿಗೆ ಧೋನಿ ಮಾತ್ರವಲ್ಲ ಈತನೂ ಕಾರಣ ಎಂದ ಕೆವಿನ್ ಪೀಟರ್ಸನ್!
ಇಂಡಿಯನ್ ಪ್ರೀಮಿಯರ್ ಲೀಗ್ನ 16ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ಗೆ ಪ್ರವೇಶಿಸಿದೆ. ಈ ಮೂಲಕ ಎಂಎಸ್ ಧೋನಿ ನೇತೃತ್ವದ ಸಿಎಸ್ಕೆ ತಂಡ ಆಡಿರುವ 14 ಆವೃತ್ತಿಗಳಲ್ಲಿ 10ನೇ ಬಾರಿಗೆ ಫೈನಲ್ಗೆ ಪ್ರವೇಶಿಸಿದಂತಾಗಿದೆ. ಇದೀಗ ಐಪಿಎಲ್ನಲ್ಲಿ 5ನೇ ಬಾರಿಗೆ ಟ್ರೋಫಿ ಎತ್ತಿ ಹಿಡಿಯುವ ಅದ್ಭುತ ಅವಕಾಶ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮುಂದಿದೆ. ಈ ಹಿನ್ನೆಲೆಯಲ್ಲಿ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಸಿಎಸ್ಕೆ ತಂಡದ ಸಾಧನೆಯ ಬಗ್ಗೆ ವಿಶೇಷ ಮಾತುಗಳನ್ನಾಡಿದ್ದು ಈ ಸಾಧನೆಗೆ ಕಾರಣವಾದ ಇಬ್ಬರು ಪ್ರಮುಖ ವ್ಯಕ್ತಿಗಳ ಬಗ್ಗೆ ಪೀಟರ್ಸನ್ ಕೊಂಡಾಡಿದ್ದಾರೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ನಲ್ಲಿ ಈ ಪ್ರಮಾಣದ ಯಶಸ್ಸು ಸಾಧಿಸಲು ನಾಯಕ ಎಂಎಸ್ ಧೋನಿಯ ರಣತಂತ್ರ ಹಾಗೂ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ಶಾಂತ ಮನೋಭಾವ ಪ್ರಮುಖ ಕಾರಣ ಎಂದಿದ್ದಾರೆ ಕೆವಿನ್ ಪೀಟರ್ಸನ್. "ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ನಾಯಕ ಎಂಎಸ್ ಧೋನಿಯ ರಣತಂತ್ರ ಎಷ್ಟು ಉತ್ತಮ ಪಾತ್ರವಹಿಸಿತೋ ಕೋಚ್ ಸ್ಟೀಫನ್ ಫ್ಲೆಮಿಂಗ್ ಅವರ ಶಾಂತ ಮನೋಭಾವ ಕೂಡ ಅಷ್ಟೇ ಪರಿಣಾಮಕಾರಿಯಾಗಿತ್ತು" ಎಂದಿದ್ದಾರೆ ಕೆವಿನ್ ಪೀಟರ್ಸನ್.

"ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡು ತಂಡಗಳಿಗೂ ಕೂಡ ಅದ್ಭುವಾದ ನಾಯಕತ್ವವಿದೆ. ಸ್ಥೊರವಾದ ನಾಯಕರಿದ್ದಾರೆ. ಅವರು ಹೊಂದಿರುವ ಬೌಲಿಂಗ್ ವಿಭಾಗದಿಮದ ಅದ್ಭುತವಾದ ಪ್ರದರ್ಶನ ಬರುತ್ತಿದೆ. ಟೂರ್ನಿಯುದ್ದಕ್ಕೂ ಅವರಿಂದ ಅದ್ಭುತವಾದ ಪ್ರದರ್ಶನ ಬಂದಿದೆ" ಎಂದು ಕೆವಿನ್ ಪೀಟರ್ಸನ್ ಪ್ರತಿಕ್ರಿಯೆ ನೀಡಿದ್ದಾರೆ.
"ಮುಂಬೈ ಇಂಡಿಯನ್ಸ್ ತಂಡವನ್ನು ನೋಡಿದರೆ ಅವರು ಉತ್ತಮ ಆರಂಭವನ್ನು ಪಡೆದಿರಲಿಲ್ಲ. ಆದರೆ ಅವರು ಒಮ್ಮೆ ಲಯಕಂಡುಕೊಂಡ ಬಳಿಕ ಅದ್ಭುತವಾಗಿ ಕಾಣಿಸುತ್ತಿದ್ದಾರೆ. ಕ್ಯಾಮರೂನ್ ಗ್ರೀನ್ ಅವರನ್ನು ಸೇರ್ಪಡೆಗೊಳಿಸಿರುವುದು ಬಹಳ ದೊಡ್ಡ ಪ್ರಭಾವ ಬೀರಿದೆ. ಜೋಫ್ರಾ ಆರ್ಚರ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂಥಾ ಆಟಗಾರರ ಸೇವೆಯಿಂದ ವಂಚಿತವಾಗಿದ್ದೂ ಅದ್ಭುತವಾಗಿ ಪ್ರದರ್ಶನ ನೀಡುತ್ತಿದೆ" ಎಂದಿದ್ದಾರೆ ಕೆವಿನ್ ಪೀಟರ್ಸನ್.
ಕಳೆದ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಅತ್ಯಂತ ಕಳಪೆ ಪ್ರದರ್ಶನ ನೀಡಿದ ಪರಿಣಾಮ ಐಪಿಎಲ್ ಇತಿಹಾಸದಲ್ಲಿ ಮೊದಲ ಬಾರಿಗೆ ಪ್ಲೇಆಫ್ಗೆ ಪ್ರವೇಶಿಸಲು ವಿಫಲವಾಗಿತ್ತು. ಆದರೆ ಈ ಬಾರಿ ಮತ್ತೆ ಅದ್ಭುತ ಪ್ರದರ್ಶನ ನೀಡಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ಗೆ ಪ್ರವೇಶಿಸಿದ ಮೊದಲ ತಂಡ ಎನಿಸಿಕೊಂಡಿದೆ. ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಫೈನಲ್ಗೆ ನೇರವಾಗಿ ಪ್ರವೇಶ ಗಿಟ್ಟಿಸಿಕೊಂಡಿತ್ತು.
ಇಂದು ಎರಡನೇ ಕ್ವಾಲಿಫಯರ್ ಪಂದ್ಯ ನಡೆಯುತ್ತಿದ್ದು ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಟೈಟನ್ಸ್ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್ಗೆ ಪ್ರವೇಶಿಲಿದ್ದು ಚೆನ್ನೈ ಸೂಪರ್ ಕಿಂಗ್ಸ್ ತಂಡದೊಂದಿಗೆ ಪ್ರಶಸ್ತಿಗಾಗಿ ಸೆಣೆಸಾಡಲಿದೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications