GT Vs MI: ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ಗೆ ರೋಚಕ ಗೆಲುವು; ನಾಯಕನಾಗಿ ಗೆದ್ದ ಗಿಲ್
ಇಂಡಿಯನ್ ಪ್ರೀಮಿಯರ್ ಲೀಗ್ 2024ರಲ್ಲಿ ನಾಯಕನಾಗಿ ಮೊದಲ ಪಂದ್ಯವನ್ನಾಡಿದ ಶುಭಮನ್ ಗಿಲ್ ಗೆದ್ದು ಬೀಗಿದ್ದಾರೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 6 ರನ್ಗಳ ರೋಚಕ ಗೆಲುವ ಸಾಧಿಸಿದೆ.
ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 168 ರನ್ ಕಲೆಹಾಕಿತು. ಈ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 162 ರನ್ ಗಳಿಸುವ ಮೂಲಕ 6 ರನ್ಗಳಿಂದ ಸೋಲೊಪ್ಪಿಕೊಂಡಿತು.

ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ ತಂಡ ಉತ್ತಮ ಆರಂಭವನ್ನೇ ಪಡೆಯಿತು. ವೃದ್ಧಿಮಾನ್ ಸಾಹ ಮತ್ತು ನಾಯಕ ಶುಭಮನ್ ಗಿಲ್ ಮೊದಲ ವಿಕೆಟ್ಗೆ 31ರನ್ ಕಲೆಹಾಕಿದರು. ಆದರೆ ಮುಂಬೈ ವೇಗಿ ಜಸ್ಪ್ರೀತ್ ಬುಮ್ರಾ ಸಾಹಾರನ್ನು ಬೌಲ್ಡ್ ಮಾಡುವ ಮೂಲಕ ಆಘಾತ ನೀಡಿದರು.
ಗಿಲ್ 31 ರನ್ ಗಳಸಿದರೆ, ಸಾಯಿ ಸುದರ್ಶನ್ 45 ರನ್ ಗಳಿಸಿದರು. ರಾಹುಲ್ ತೆವಾಟಿಯಾ 22 ರನ್ ಗಳಿಸುವ ಮೂಲಕ ಸವಾಲಿನ ಮೊತ್ತವನ್ನು ಕಲೆಹಾಕುವಲ್ಲಿ ನೆರವಾದರು. ಮುಂಬೈ ಇಂಡಿಯನ್ಸ್ ಪರವಾಗಿ ವೇಗಿ ಜಸ್ಪ್ರೀತ್ ಬುಮ್ರಾ 4 ಓವರ್ ಗಳಲ್ಲಿ ಕೇವಲ 14 ರನ್ ನೀಡಿ 3 ವಿಕೆಟ್ ಪಡೆದರು. ಗೆರಾಲ್ಡ್ ಕೊಯೆಟ್ಜೆ 2 ವಿಕೆಟ್ ಪಡೆದರು.
ಗೆಲುವಿನ ಸನಿಹದಲ್ಲಿ ಎಡವಿದ ಮುಂಬೈ
ಸವಾಲಿನ ಮೊತ್ತವನ್ನು ಬೆನ್ನತ್ತಿದ ಮುಂಬೈ ಇಂಡಿಯನ್ಸ್ಗೆ ಆರಂಭದಲ್ಲೇ ಆಘಾತ ಎದುರಾಯಿತು. ಇಶಾನ್ ಕಿಶನ್ ಯಾವ ರನ್ ಗಳಿಸದೇ ವಿಕೆಟ್ ಒಪ್ಪಿಸಿದರು. ಬಳಿಕ ಜೊತೆಯಾದ ರೋಹಿತ್ ಶರ್ಮಾ ಮತ್ತು ನಮನ್ ಧಿರ್ ಎರಡನೇ ವಿಕೆಟ್ಗೆ 30 ರನ್ ಕಲೆಹಾಕಿದರು. ಧಿರ್ 20 ರನ್ ಗಳಿಸಿ ಔಟಾದರು.
ಡೆವಾಲ್ಡ್ ಬ್ರೆವಿಸ್ ಮತ್ತು ರೋಹಿತ್ ಶರ್ಮಾ ಮೂರನೇ ವಿಕೆಟ್ಗೆ 77 ರನ್ ಕೆಲಹಾಕಿದರು. ಈ ಹಂತದಲ್ಲಿ ಮುಂಬೈ ಇಂಡಿಯನ್ಸ್ ಸುಲಭ ಗೆಲುವಿನ ನಿರೀಕ್ಷೆಯಲ್ಲಿತ್ತು. ಆದರೆ ರೋಹಿತ್ ಶರ್ಮಾ (43 ರನ್) ಮತ್ತು ಡೆವಾಲ್ಡ್ ಬ್ರೆವಿಸ್ (46 ರನ್) ಔಟಾದ ಬಳಿಕ ತಂಡ ಸಂಕಷ್ಟಕ್ಕೆ ಸಿಲುಕಿತು. ತಿಲಕ್ ವರ್ಮಾ 25 ರನ್, ಪಾಂಡ್ಯ 11 ರನ್, ಟಿಮ್ ಡೇವಿಡ್ 11 ರನ್ ಗಳಿಸಿ ಔಟಾದರು. ಗುಜರಾತ್ ನೀಡಿದ ಗೆಲುವಿನ ಗುರಿಯನ್ನು ಬೆನ್ನತ್ತಲು ವಿಫಲವಾಯಿತು.
ಮುಂಬೈ ಇಂಡಿಯನ್ಸ್ ತಂಡ ಐಪಿಎಲ್ನಲ್ಲಿ ಸತತ 12ನೇ ಬಾರಿಗೆ ಮೊದಲ ಪಂದ್ಯವನ್ನು ಸೋತಿದೆ. 2013ರಿಂದ ಇದುವರೆಗೆ ಮುಂಬೈ ಇಂಡಿಯನ್ಸ್ ಐಪಿಎಲ್ನಲ್ಲಿ ಆಡುವ ಮೊದಲ ಪಂದ್ಯದಲ್ಲಿ ಗೆದ್ದಿಲ್ಲ.
ಮುಂಬೈ ಇಂಡಿಯನ್ಸ್ ತಂಡದ ನಾಯಕನಾಗಿ ಹಾರ್ದಿಕ್ ಪಾಂಡ್ಯ ಸೋತರೆ, ಗುಜರಾತ್ ಟೈಟಾನ್ಸ್ ತಂಡದ ನಾಯಕತ್ವ ವಹಿಸಿಕೊಂಡ ಮೊದಲ ಪಂದ್ಯದಲ್ಲೇ ಶುಭಮನ್ ಗಿಲ್ ಗೆಲುವು ಸಾಧಿಸಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications