IPL 2024 Prize Money: ಕೆಕೆಆರ್ ತಂಡಕ್ಕೆ ₹20 ಕೋಟಿ ಬಹುಮಾನ; ಎಸ್ಆರ್ಎಚ್, ಆರ್ಸಿಬಿ, ಆರ್ಆರ್ ತಂಡಕ್ಕೆ ಸಿಕ್ಕಿದ್ದೆಷ್ಟು
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ಪಂದ್ಯಾವಳಿಗೆ ತೆರೆಬಿದ್ದಿದೆ. ಫೈನಲ್ ಪಂದ್ಯದಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಎಂಟು ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಕೋಲ್ಕತಾ ನೈಟ್ ರೈಡರ್ಸ್ ಮೂರನೇ ಬಾರಿ ಪ್ರಶಸ್ತಿ ಗೆದ್ದು ಸಂಭ್ರಮಿಸಿದೆ.
ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಹಲವು ದಾಖಲೆ ಬರೆದಿದ್ದ ಸನ್ರೈಸರ್ಸ್ ಹೈದರಾಬಾದ್ ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ. ಕೆಕೆಆರ್ ಮಾರಕ ಬೌಲಿಂಗ್ ದಾಳಿಗೆ ನಲುಗಿದ ಸನ್ರೈಸರ್ಸ್ ಕೇವಲ 113 ರನ್ಗಳಿಗೆ ಆಲೌಟ್ ಆಗುವ ಮೂಲಕ ಮೊದಲಾರ್ಧವೇ ಪಂದ್ಯವನ್ನು ಬಿಟ್ಟುಕೊಟ್ಟಿತು.

ಇನ್ನು ಪ್ರಶಸ್ತಿ ಗೆದ್ದ ತಂಡ ಕೋಟಿ ಕೋಟಿ ಹಣವನ್ನು ಬಾಚಿಕೊಂಡಿದೆ. ಐಪಿಎಲ್ ಒಟ್ಟು ಬಹುಮಾನದ ಮೊತ್ತ ₹46.5 ಕೋಟಿ ಆಗಿತ್ತು. ಪ್ರಶಸ್ತಿ ಗೆದ್ದ ಕೆಕೆಆರ್ ತಂಡಕ್ಕೆ ₹20 ಕೋಟಿ ಬಹುಮಾನ ಸಿಕ್ಕಿದೆ. ಎರಡನೇ ಸ್ಥಾನ ಪಡೆದ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ₹13 ಕೋಟಿ ಬಹುಮಾನ ಸಿಕ್ಕಿದೆ.
ಅಂಕಪಟ್ಟಿಯಲ್ಲಿ ಕ್ರಮವಾಗಿ 3 ಮತ್ತು 4ನೇ ಸ್ಥಾನ ಪಡೆದಿದ್ದ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳಿಗೂ ಕೋಟಿ ಕೋಟಿ ಬಹುಮಾನದ ಮೊತ್ತ ಸಿಕ್ಕಿದೆ. ಮೂರನೇ ಸ್ಥಾನ ಪಡೆದ ಸಂಜು ಸ್ಯಾಮ್ಸನ್ ನಾಯಕತ್ವದ ರಾಜಸ್ಥಾನ ರಾಯಲ್ಸ್ ತಂಡಕ್ಕೆ ₹7 ಕೋಟಿ ನೀಡಲಾಯಿತು ಮತ್ತು ಫಾಫ್ ಡು ಪ್ಲೆಸಿಸ್ ನಾಯಕತ್ವದ ಆರ್ ಸಿಬಿ ತಂಡಕ್ಕೆ ₹6.5 ಕೋಟಿ ಬಹುಮಾನ ಸಿಕ್ಕಿದೆ.
ಆರೆಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಯಾರಿಗೆ?
ಆರ್ಸಿಬಿಯ ವಿರಾಟ್ ಕೊಹ್ಲಿ ಆರೆಂಜ್ ಕ್ಯಾಪ್ ಗೆದ್ದರೆ, ಪಂಜಾಬ್ ಕಿಂಗ್ಸ್ ವೇಗಿ ಹರ್ಷಲ್ ಪಟೇಲ್ ಪರ್ಪಲ್ ಕ್ಯಾಪ್ ತಮ್ಮದಾಗಿಸಿಕೊಂಡರು. ಈ ಸಾಧನೆಗಳಿಗಾಗಿ ಇಬ್ಬರೂ ತಲಾ 10 ಲಕ್ಷ ರೂಪಾಯಿ ಬಹುಮಾನವನ್ನು ಪಡೆದರು.
ಕೊಹ್ಲಿ 15 ಪಂದ್ಯಗಳಲ್ಲಿ 61.75 ಸರಾಸರಿಯಲ್ಲಿ ಒಂದು ಶತಕ ಮತ್ತು ಐದು ಅರ್ಧಶತಕಗಳೊಂದಿಗೆ 741 ರನ್ ಗಳಿಸಿದರು. ಅವರ ಅತ್ಯುತ್ತಮ ಸ್ಕೋರ್ 113* ಮತ್ತು ಅವರ ಸ್ಟ್ರೈಕ್ ರೇಟ್ 154.69 ಆಗಿತ್ತು. ವೇಗಿ ಹರ್ಷಲ್ 14 ಪಂದ್ಯಗಳಲ್ಲಿ 9.73 ರ ಆರ್ಥಿಕತೆ ಮತ್ತು 19.87 ರ ಸರಾಸರಿಯಲ್ಲಿ 24 ವಿಕೆಟ್ಗಳೊಂದಿಗೆ ಪಂದ್ಯಾವಳಿಯನ್ನು ಮುಕ್ತಾಯಗೊಳಿಸಿದರು.
ಸನ್ರೈಸರ್ಸ್ನ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್ರೌಂಡ್ ಪ್ರದರ್ಶನಕ್ಕಾಗಿ ಋತುವಿನ ಉದಯೋನ್ಮುಖ ಆಟಗಾರ ಎಂದು ಹೆಸರಿಸಲ್ಪಟ್ಟರೆ, ಕೆಕೆಆರ್ ಅನುಭವಿ ಸುನಿಲ್ ನರೈನ್ ವರ್ಷದ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿಯನ್ನು ಪಡೆದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications