RCB Team: ಹಸರಂಗ, ಹರ್ಷಲ್ ಪಟೇಲ್ ಸೇರಿ 11 ಆಟಗಾರರನ್ನು ಬಿಡುಗಡೆ ಮಾಡಿದ ಆರ್ಸಿಬಿ : ಉಳಿಸಿಕೊಂಡ ಆಟಗಾರರ ಪಟ್ಟಿ
2024ರ ಐಪಿಎಲ್ ಹರಾಜಿಗೆ ಮುನ್ನ ಎಲ್ಲಾ 10 ತಂಡಗಳು ಹಲವು ಆಟಗಾರರನ್ನು ಬಿಡುಗಡೆ ಮಾಡಿದ್ದು, ಕೆಲವು ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ಮೂಡಿಸಿವೆ. ಮೊದಲ ಪ್ರಶಸ್ತಿ ಗೆಲ್ಲುವ ವಿಶ್ವಾಸದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋಬ್ಬರಿ 11 ಆಟಗಾರರನ್ನು ಬಿಡುಗಡೆ ಮಾಡಿದೆ.
ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಿಂದ ವೇಗಿ ಹರ್ಷಲ್ ಪಟೇಲ್ ಜೊತೆಗೆ ವನಿಂದು ಹಸರಂಗ, ಜೋಶ್ ಹ್ಯಾಜಲ್ವುಡ್, ಫಿನ್ ಅಲೆನ್ ಸೇರಿದಂತೆ ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ.

ಇನ್ನು ದಿನೇಶ್ ಕಾರ್ತಿಕ್ ಅವರನ್ನು ಬಿಡುಗಡೆ ಮಾಡಲಾಗುತ್ತದೆ ಎಂದೇ ಎಣಿಸಲಾಗಿತ್ತಾದರೂ, ಅವರನ್ನು ಕೂಡ ತಂಡದಲ್ಲಿ ಉಳಿಸಿಕೊಂಡಿದೆ. ಕಳೆದ ಐಪಿಎಲ್ನಲ್ಲಿ ಗಾಯಗೊಂಡಿದ್ದ ರೀಸ್ ಟೋಪ್ಲೆ ಅವರನ್ನು ಅವರನ್ನು ಕೂಡ ತಂಡದಲ್ಲಿ ಉಳಿಸಿಕೊಂಡಿದ್ದು, ಪ್ರಮುಖ ಆಲ್ರೌಂಡರ್ ವಿಲ್ ಜ್ಯಾಕ್ಸ್ ಅವರನ್ನು ಅವರನ್ನು ಕೂಡ ತಂಡದಲ್ಲಿ ಉಳಿಸಿಕೊಂಡಿದೆ.
ಪ್ರಮುಖ ಆಟಗಾರರನ್ನು ಬಿಡುಗಡೆ ಮಾಡುವ ಮೂಲಕ ಆರ್ ಸಿಬಿ ಪರ್ಸ್ನಲ್ಲಿ 40.75 ಕೋಟಿ ರೂಪಾಯಿಗಳನ್ನು ಉಳಿಸಿಕೊಂಡಿದ್ದು, ಹರಾಜಿನಲ್ಲಿ ಪ್ರಮುಖ ಆಟಗಾರರನ್ನು ಖರೀದಿ ಮಾಡುವ ಸಾಧ್ಯತೆ ಇದೆ.
ಬಿಡುಗಡೆ ಮಾಡಿದ ಆಟಗಾರರು
ಐಪಿಎಲ್ 2024 ರ ಹರಾಜಿಗೆ ಮುಂಚಿತವಾಗಿ, ಆರ್ಸಿಬಿ ವನಿಂದು ಹಸರಂಗ, ಫಿನ್ ಅಲೆನ್, ಕೇದಾರ್ ಜಾಧವ್, ಹರ್ಷಲ್ ಪಟೇಲ್, ಮೈಕೆಲ್ ಬ್ರೇಸ್ವೆಲ್, ಡೇವಿಡ್ ವಿಲ್ಲಿ, ವೇಯ್ನ್ ಪಾರ್ನೆಲ್, ಸೋನು ಯಾದವ್, ಅವಿನಾಶ್ ಸಿಂಗ್ ಮತ್ತು ಸಿದ್ದಾರ್ಥ್ ಕೌಲ್ ಅವರನ್ನು ಬಿಡುಗಡೆ ಮಾಡಿದೆ.
ವನಿಂದು ಹಸರಂಗ, ಹರ್ಷಲ್ ಪಟೇಲ್ ಮತ್ತು ಜೋಶ್ ಹೇಜಲ್ವುಡ್ರನ್ನು ಬಿಡುಗಡೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ನ್ಯೂಜಿಲೆಂಡ್ನ ಆಲ್ರೌಂಡರ್ ಮೈಕೆಲ್ ಬ್ರೇಸ್ವೆಲ್ರನ್ನು ಬಿಡುಗಡೆ ಮಾಡುವ ಮೂಲಕ ಅಚ್ಚರಿ ಮೂಡಿಸಿದೆ. 150 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುತ್ತಾರೆ ಎಂದು ಹೇಳಿದ್ದ ಅವಿನಾಶ್ ಸಿಂಗ್ ಅವರನ್ನು ಕೂಡ ಬಿಡುಗಡೆ ಮಾಡಿದೆ.
ಆರ್ಸಿಬಿ ಉಳಿಸಿಕೊಂಡ ಆಟಗಾರರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್ವೆಲ್, ಮೊಹಮ್ಮದ್ ಸಿರಾಜ್, ದಿನೇಶ್ ಕಾರ್ತಿಕ್, ರಜತ್ ಪಾಟಿದಾರ್, ರೀಸ್ ಟೋಪ್ಲಿ, ವಿಲ್ ಜ್ಯಾಕ್ಸ್, ಸುಯಶ್ ಪ್ರಭುದೇಸಾಯಿ, ಅನುಜ್ ರಾವತ್, ಮಹಿಪಾಲ್ ಲೋಮ್ರೋರ್, ಮನೋಜ್ ಭಾಂಡಗೆ, ಕರ್ಣ್ ಶರ್ಮಾ, ಮಯಾಂಕ್ ದಾಗರ್, ವೈಶಾಕ್ ವಿಜಯಕುಮಾರ್, ಆಕಾಶ್ ದೀಪ್, ರಾಜನ್ ಕುಮಾರ್, ಹಿಮಾಂಶು ಶರ್ಮಾ.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications