DC Vs vs RR: ಸೂಪರ್ ಓವರ್ನಲ್ಲಿ ಆರ್ಆರ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆಲುವು
DC Vs vs RR: ಐಪಿಎಲ್ 2025ನೇ ಆವೃತ್ತಿಯ ಸೂಪರ್ ಓವರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗೆಲುವು ಸಾಧಿಸಿದೆ.ಈ ಮೂಲಕ ಇದುವಗೂ ಆಡಿದ 6ರಲ್ಲಿ 5 ಪಂದ್ಯಗಳನ್ನು ಗೆದ್ದು 10 ಅಂಕಗಳೊಂದಿಗೆ ಪಾಯಿಂಟ್ಸ್ ಟೇಬಲ್ನಲ್ಲಿ ಮೊದಲ ಸ್ಥಾನದಲ್ಲಿದೆ.
ಟಾಸ್ ಗೆದ್ದ ಆರ್ಆರ್ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟಿಂಗ್ ಮಾಡಿದ ಡಿಸಿ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 188 ರನ್ ಕಲೆಹಾಕಿತ್ತು. ಈ ಮೂಲಕ ರಾಜಸ್ಥಾನ್ ರಾಯಲ್ಸ್ಗೆ 189 ಟಾರ್ಗೆಟ್ ನೀಡಿತ್ತು. ಈ ಗುರಿ ಬೆನ್ನತ್ತಿದ್ದ ರಾಜಸ್ಥಾನ್ ರಾಯಲ್ಸ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 188 ರನ್ಗಳಿಸಿ ಸೂಪರ್ ಓವರ್ವರೆಗೂ ಬಂದಿತು.

ಸೂಪರ್ ಓವರ್ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡವು 5 ಬಾಲ್ಗೆ 2 ವಿಕೆಟ್ ಕಳೆದುಕೊಂಡು 11 ರನ್ಗಳನ್ನು ಕಲೆಹಾಕುವ ಮೂಲಕ 12 ರನ್ಗಳ ಟಾರ್ಗೆಟ್ ನೀಡಿತು. ಈ ಗುರಿ ಬೆನ್ನತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ 4 ಬಾಲ್ಗೆ ಯಾವುದೇ ವಿಕೆಟ್ ಇಲ್ಲದೆ 13 ರನ್ ಕಲೆಹಾಕುವ ಮೂಲಕ ಗೆಲುವು ಸಾಧಿಸಿತು.
ಡೆಲ್ಲಿ ಬ್ಯಾಟಿಂಗ್: ಟಾಸ್ ಸೋತು ಮೊದಲು ಡೆಲ್ಲಿ ಮೊದಲು ಬ್ಯಾಟ್ ಮಾಡಿತು. ಜೇಕ್ ಪ್ರೇಸರ್ ಮೆಕ್ಗರ್ಕ್ ಕೇವಲ 9 ರನ್ಗಳಿಸಿ ಜೋಫ್ರಾ ಆರ್ಚರ್ ಬೌಲಿಂಗ್ನಲ್ಲಿ ಜೈಸ್ವಾಲ್ಗೆ ಕ್ಯಾಚ್ ನೀಡಿ ಔಟ್ ಆದರು. ನಂತರ ಬಂದ ಕರುಣ್ ನಾಯರ್ ಒಂದೂ ರನ್ಗಳಿಸದೇ ರನ್ ಔಟ್ ಆಗಿ ಪೆವಿಲಿಯನ್ ಸೇರಿಕೊಂಡರು. 3ನೇ ವಿಕೆಟ್ಗೆ ಅಭಿಷೇಕ್ ಪೊರೆಲ್ ಹಾಗೂ ಕೆಎಲ್ ರಾಹುಲ್ 63 ರನ್ಗಳಿಸಿದರು.
ಪೊರೆಲ್ 37 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ಸಹಿತ 49 ರನ್ಗಳಿಸಿ ಔಟ್ ಆದರು. ಕೆಎಲ್ ರಾಹುಲ್ 32 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ಗಳ ಸಹಿತ 38 ರನ್ಗಳಿಸಿ ಆರ್ಚರ್ಗೆ ವಿಕೆಟ್ ಒಪ್ಪಿಸಿದರು. ನಾಯಕ ಅಕ್ಷರ್ ಪಟೇಲ್ 14 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಿತ 32, ಟ್ರಿಸ್ಟಾನ್ ಸ್ಟಬ್ಸ್ 18 ಎಸೆತಗಳಲ್ಲಿ ತಲಾ 2 ಬೌಂಡರಿ, ಸಿಕ್ಸರ್ ಸಹಿತ ಅಜೇಯ 32, ಅಶುತೋಷ್ ಶರ್ಮಾ 11 ಎಸೆತಗಳಲ್ಲಿ ಅಜೇಯ 15 ರನ್ಗಳಿಸಿ ತಂಡದ ಮೊತ್ತವನ್ನ 180ರ ಗಡಿ ದಾಟಿಸಿದರು.
ಇನ್ನು ರಾಜಸ್ಥಾನ್ ರಾಯಲ್ಸ್ ಪರ ಜೋಫ್ರಾ ಆರ್ಚರ್ 2, ವನಿಂದು ಹಸರಂಗ 1, 1 ವಿಕೆಟ್ ಪಡೆದು ಮಿಂಚಿದರು. ಇನ್ನು 189ರನ್ಗಳ ಗುರಿಯನ್ನ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ಭರ್ಜರಿ ಆರಂಭ ಪಡೆದುಕೊಂಡಿತು. ಸಂಜು ಸ್ಯಾಮ್ಸನ್ ಹಾಗೂ ಯಶಸ್ವಿ ಮೊದಲ ವಿಕೆಟ್ಗೆ 63 ರನ್ಗಳ ಜೊತೆಯಾಟ ಆಡಿದರು. 19 ಎಸೆತಗಳಲ್ಲಿ 2 ಬೌಂಡರಿ, 3 ಸಿಕ್ಸರ್ ಸಹಿತ 31 ರನ್ಗಳಿಸಿದ್ದ ಸಂಜು ಸ್ಯಾಮ್ಸನ್ ರಿಟೈರ್ಟ್ ಹರ್ಟ್ ತೆಗೆದುಕೊಂಡರು. ನಂತರ ಬಂದ ರಿಯಾನ್ ಪರಾಗ್ 11 ಎಸೆತಗಳಲ್ಲಿ ಕೇವಲ 8 ರನ್ಗಳಿಸಿ ಅಕ್ಷರ್ ಪಟೇಲ್ ಬೌಲಿಂಗ್ನಲ್ಲಿ ಕ್ಲೀನ್ ಬೌಲ್ಡ್ ಆದರು.
3ನೇ ವಿಕೆಟ್ಗೆ ನಿತೀಶ್ ರಾಣಾ ಮತ್ತು ಜೈಸ್ವಾಲ್ ಜೊತೆಯಾಟ ಆಡಿ 36 ರನ್ ಕಲೆಹಾಕಿದರು. ಜೈಸ್ವಾಲ್ 37 ಎಸೆತಗಳಲ್ಲಿ 3 ಬೌಂಡರಿ, 4 ಸಿಕ್ಸರ್ಗಳ ಸಹಿತ 51 ರನ್ಗಳಿಸಿ ಔಟ್ ಆದರು. ನಿತೀಶ್ ರಾಣಾ 28 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್ಗಳ ಸಹಿತ 51 ಸಿಡಿಸಿದರು. ಇನ್ನು ನಿತೀಶ್ ರಾಣ ಔಟ್ ಆಗುವ ಮುನ್ನ ಧ್ರುವ್ ಜುರೆಲ್ ಜೊತೆ 26 ಎಸೆತಗಳಲ್ಲಿ 49 ರನ್ಗಳ ಮ್ಯಾಚ್ ವಿನ್ನಿಂಗ್ ಜೊತೆಯಾಟ ಆಡಿದರು.
ನಂತರ ಧ್ರುವ್ ಜುರೆಲ್ ಹಾಗೂ ಹೆಟ್ಮೆಯರ್ 14 ಎಸೆತಗಳಲ್ಲಿ 27 ರನ್ ಜೊತೆಯಾಟ ನಡೆಸಿ ಪಂದ್ಯವನ್ನ ಡ್ರಾ ಮಾಡಿದರು. ಕೊನೆಯ ಓವರ್ಲ್ಲಿ ರಾಜಸ್ಥಾನ್ ಗೆಲುವಿಗೆ 9 ರನ್ಗಳ ಅಗತ್ಯ ಇತ್ತು. ಆದರೆ ಸ್ಟಾರ್ಕ್ ಒಂದೂ ಬೌಂಡರಿ ಕೊಡದೆ ಕೇವಲ 8 ರನ್ ಮಾತ್ರ ಬಿಟ್ಟುಕೊಡುವ ಮೂಲಕ ಪಂದ್ಯ ಟೈ ಆಗಲು ಕಾರಣರಾದರು. ಜುರೆಲ್ 17 ಎಸೆತಗಳಲ್ಲಿ 26, ಶಿಮ್ರಾನ್ ಹೆಟ್ಮೆಯರ್ 9 ಎಸೆತಗಳಲ್ಲಿ 15 ರನ್ಗಳಿಸಿ ಅಜೇಯರಾಗಿ ಉಳಿದರು. ಕೊನೆಯ ಎಸೆತದಲ್ಲಿ 2 ರನ್ಗಳ ಅಗತ್ಯವಿತ್ತು. ಜುರೆಲ್ ಕೇವಲ 1 ರನ್ಗಳಿಸಿ ರನ್ಔಟ್ ಆಗಿ ಪೆವಿಲಿಯನ್ನತ್ತ ತೆರಳಿದರು.
ಡೆಲ್ಲಿ ಕ್ಯಾಪಿಟಲ್ಸ್: ಜೇಕ್ ಫ್ರೇಸರ್-ಮೆಕ್ಗರ್ಕ್, ಅಭಿಷೇಕ್ ಪೊರೆಲ್, ಕರುಣ್ ನಾಯರ್, ಕೆಎಲ್ ರಾಹುಲ್ (ವಿ.ಕೀ), ಅಕ್ಷರ್ ಪಟೇಲ್ (ನಾಯಕ), ಟ್ರಿಸ್ಟಾನ್ ಸ್ಟಬ್ಸ್, ಅಶುತೋಷ್ ಶರ್ಮಾ, ವಿಪ್ರಜ್ ನಿಗಮ್, ಮಿಚೆಲ್ ಸ್ಟಾರ್ಕ್, ಕುಲದೀಪ್ ಯಾದವ್, ಮೋಹಿತ್ ಶರ್ಮಾ
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಸಂಜು ಸ್ಯಾಮ್ಸನ್ (ನಾಯಕ/ವಿ.ಕೀ.), ನಿತೀಶ್ ರಾಣಾ, ರಿಯಾನ್ ಪರಾಗ್, ಧ್ರುವ ಜುರೆಲ್, ಶಿಮ್ರಾನ್ ಹೆಟ್ಮೆಯರ್, ವನಿಂದು ಹಸರಂಗ, ಜೋಫ್ರಾ ಆರ್ಚರ್, ಮಹೇಶ್ ತೀಕ್ಷಣ, ಸಂದೀಪ್ ಶರ್ಮಾ, ತುಷಾರ್ ದೇಶಪಾಂಡೆ
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications