ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಆರ್ಆರ್ 58 ರನ್ಗಳಿಂದ ಸೋಲು
GT Vs RR: ಐಪಿಎಲ್ 2025ರ ಆವೃತ್ತಿಯ 23ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಗುಜರಾತ್ ಟೈಟಾನ್ಸ್ 58 ರನ್ಗಳ ಅಂತರದಿಂದ ಗೆದ್ದು ಬೀಗಿದೆ. ಹಾಗಾದ್ರೆ ಯಾರೆಲ್ಲ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಇಲ್ಲಿ ತಿಳಿಯಿರಿ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ತಂಡವು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಅದರಂತೆಯೇ ಮೊದಲು ಬ್ಯಾಟ್ ಮಾಡಿದ ಮಾಡಿದ ಗುಜರಾತ್ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ನಷ್ಟಕ್ಕೆ 217 ಬೃಹತ್ ರನ್ಗಳನ್ನು ಕಲೆಹಾಕುವ ಮೂಲಕ 218ರನ್ಗಳ ಗುರಿ ನೀಡಿತು. ಇದಕ್ಕೆ ಉತ್ತರವಾಗಿ ರಾಜಸ್ಥಾನ್ ರಾಯಲ್ಸ್ 19.2 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ಗಳನ್ನು ಕಳೆದುಕೊಂಡು 159 ರನ್ಗಳನ್ನಷ್ಟೇ ಕಲೆಹಾಕಿ ಸೋಲನುಭವಿಸಿತು.

ಗುಜರಾತ್ ಟೈಟಾನ್ಸ್ ಪರ ಆರಂಭಿಕ ಬ್ಯಾಟ್ಸ್ಮನ್ ಸಾಯಿ ಸುದರ್ಶನ್ 82 ರನ್ಗಳನ್ನು ಸಿಡಿಸುವ ಮೂಲಕ ತಂಡಕ್ಕೆ ನೆರವಾದರು. ಜೋಸ್ ಬಟ್ಲರ್ 36 ಹಾಗೂ ಶಾರುಖ್ ಖಾನ್ 36 ರನ್ಗಳನ್ನು ಸಿಡಿಸುವ ಮೂಲಕ ಸುದರ್ಶನ್ಗೆ ಸಾಥ್ ನೀಡಿ ಬೃಹತ್ ಮೊತ್ತ ಕಲೆಹಾಕಲು ನೆರವಾದರು.
ಇನ್ನು ನಾಯಕ ಶುಭ್ಮನ್ ಗಿಲ್ 2, ರಥರ್ಫೋರ್ಡ್ 7, ರಾಹುಲ್ ತಿವಾಟಿಯಾ 24, ರಶಿದ್ ಖಾನ್ 12 ರನ್ ಕಲೆಹಾಲಿದರು ಅಷ್ಟೇ. ಇನ್ನೂ ಬೌಲಿಂಗ್ ವಿಭಾಗಕ್ಕೆ ಬಂದರೆ, ರಾಜಸ್ಥಾನ್ ರಾಯಲ್ಸ್ ತಂಡವನ್ನು 159 ರನ್ಗಳನ್ನು ಕಟ್ಟಿಹಾಕುವ ಮೂಲಕ ಗುಜರಾತ್ ಟೈಟಾನ್ಸ್ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.
ಗುಜರಾತ್ ಪರ ಬೌಲಿಂಗ್ ಮಾಡಿದ ಪ್ರಸಿದ್ಧ್ ಕೃಷ್ಣ 3 ವಿಕೆಟ್, ರಶಿದ್ ಖಾನ್ ಹಾಗೂ ಸಾಯಿ ಕಿಶೋರ್ ತಲಾ 2, ಮೊಹಮ್ಮದ್ ಸಿರಾಜ್, ಅರ್ಷದ್ ಖಾನ್ ಹಾಗೂ ಕುಲ್ವಂತ್ ತಲಾ 1 ವಿಕೆಟ್ ಕಬಳಿಸುವ ಮೂಲಕ ಗುಜರಾಜ್ ತಂಡವನ್ನು 159 ರನ್ಗಳನ್ನು ಕಟ್ಟಿಹಾಕುವ ಮೂಲಕ ಗುಜರಾತ್ ಟೈಟಾನ್ಸ್ 58 ರನ್ಗಳಿಂದ ಗೆಲುವು ಸಾಧಿಸಲು ಪ್ರಮುಖ ಪಾತ್ರವಹಿಸಿದರು.
ಗುಜರಾತ್ ನೀಡಿದ 218ರನ್ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಲುಪುವಲ್ಲಿ ವಿಫಲವಾಯಿತು.
ಪವರ್ ಪ್ಲೇನಲ್ಲಿ ಯಶಸ್ವಿ ಜೈಸ್ವಾಲ್ 6, ನಿತೀಶ್ ರಾಣಾ 1 ರನ್ ಕಲೆಹಾಕಿ ವಿಕೆಟ್ ಒಪ್ಪಿಸಿ ಪೆವಿಲಿಯನ್ನತ್ತ ತೆರಳಿದರು. ಇದರಿಂದ ಆರಂಭಿಕದಲ್ಲೇ ಆರ್ಆರ್ ಆಘಾತಕ್ಕೆ ಒಳಗಾಯಿತು. ನಂತರ ರಿಯಾನ್ ಪರಾಗ್ 14 ಎಸೆತಗಳಲ್ಲಿ 1 ಬೌಂಡರಿ, 3 ಸಿಕ್ಸರ್ಗಳ ಸಹಿತ 26ರನ್ಗಳಿಸಿದರು. ಆದರೆ 7ನೇ ಓವರ್ನಲ್ಲಿ ಖೆಜ್ರೋಲಿಯಾ ಬೌಲಿಂಗ್ನಲ್ಲಿ ಕ್ಯಾಚ್ ನೀಡಿ ಔಟಾದರು.
ಬಳಿಕ ಬಂದ ಧ್ರುವ್ ಜುರೆಲ್ ಕೇವಲ 5 ರನ್ಗಳಿಗೆ ಔಟ್ ಆಗಿ ಪೆವಲಿಯನ್ ಸೇರಿಕೊಂಡ್ರು. 68ಕ್ಕೆ 4 ವಿಕೆಟ್ ಕಳೆದುಕೊಂಡು 100 ರನ್ಗಳಿಸುವುದು ಅನುಮಾನ ಎನ್ನುವ ಹಂತಕ್ಕೆ ತಲುಪಿತ್ತು ಆರ್ಆರ್. ಆದರೆ, ನಾಯಕ ಸಂಜು ಸ್ಯಾಮ್ಸನ್ ಹಾಗೂ ಶಿಮ್ರೋನ್ ಹೆಟ್ಮೈರ್ 5ನೇ ವಿಕೆಟ್ಗೆ 48 ರನ್ ಸೇರಿಸಿದರು. ಸಂಜು ಸ್ಯಾಮ್ಸನ್ 28 ಎಸೆತಗಳಲ್ಲಿ 4 ಬೌಂಡರಿ, 2 ಸಿಕ್ಸರ್ ಸಹಿತ 41 ರನ್ಗಳಿಸಿ ಔಟ್ ಆದರು. ಹೆಟ್ಮೈರ್ 32 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಿತ 52 ರನ್ಗಳಿಸಿ ಔಟ್ ಆದರು. ತೀಕ್ಷಣ 5, ಆರ್ಚರ್ 4, ತುಷಾರ್ ದೇಶಪಾಂಡೆ 3 ರನ್ಗಳಿಸಿ ತಂಡದ ಮೊತ್ತವನ್ನು 150 ಗಡಿ ದಾಟಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications