IPL 2025 RCB Vs KKR: ಆರಂಭದಲ್ಲಿ ಅಬ್ಬರಿಸಿದ ಕೆಕೆಆರ್ ಕೊನೆಗೆ ಟುಸ್ ಪಟಾಕಿ: ಆರ್ಸಿಬಿಗೆ ಬರೀ 175 ರನ್ಗಳ ಟಾರ್ಗೆಟ್
RCB Vs KKR: ಐಪಿಎಲ್ 2025ರ ಸೀಸನ್ ಹಬ್ಬಕ್ಕೆ ಇಂದು (ಮಾರ್ಚ್ 22) ಅದ್ಧೂರಿ ಚಾಲನೆ ಸಿಕ್ಕಿದೆ. ಉದ್ಘಾಟನಾ ಪಂದ್ಯದಲ್ಲಿ ಆರ್ಸಿಬಿ ಮತ್ತು ಕೆಕೆಆರ್ ಮುಖಾಮುಖಿಯಾಗಿವೆ. ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 175 ರನ್ಗಳ ಟಾರ್ಗೆಟ್ ನೀಡಿದೆ.
ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಹಾಗೂ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸೆಣಸಾಟ ಆರಂಭಿಸಿದ್ದು, ಈ ಪಂದ್ಯದಲ್ಲಿ ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಇನ್ನು ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ ಪಡೆ ಆರ್ಸಿಗೆ 175 ರನ್ಗಳ ಗುರಿಯನ್ನು ನೀಡಿದೆ.

ಆರಂಭದಲ್ಲಿ ಕೆಕೆಆರ್ ತಂಡದ ಆಟಗಾರರು ಭರ್ಜರಿ ಬ್ಯಾಟಿಂಗ್ ಮಾಡಿದರು. ಆದರೆ ಕೊನೆ ಕೊನೆಗೆ ಆರ್ಸಿಬಿ ಬೌಲರ್ಗಳ ಅಬ್ಬರ ಶುರುವಾಗಿದ್ದು, ಏರುಗತಿಯಲ್ಲಿ ರನ್ಗಳನ್ನು ಇಳಿಸಿದರು. ಮೊದಲಿಗೆ ಕೆಕೆಆರ್ ಪರ ಬ್ಯಾಟ್ ಮಾಡಿದ ಕ್ವಿಂಟನ್ ಡಿ ಕಾಕ್ 4, ಸನೀಲ್ ನರೈನ್ 44, ಅಜಿಂಕ್ಯಾ ರಹಾನೆ 56, ವೆಂಕಟೇಶ್ ಅಯ್ಯರ್ 6, ಅಂಗ್ರಿಶ್ 30, ರಿಂಕು ಸಿಂಗ್ 12, ಆಂಡ್ರೆ ರಸೆಲ್ 4, ರಂದೀಪ್ ಸಿಂಗ್ 6, ಹರ್ಷಿತ್ ರಾಣಾ 5, ಸ್ಪೆನ್ಸರ್ ಜಾನ್ಸನ್ 1 ರನ್ ಕಲೆಹಾಕಿದರು.
ಇನ್ನೂ ಆರ್ಸಿಬಿ ಪರ ಬೌಲಿಂಗ್ ಮಾಡಿದ ಜೋಶ್ ಹೇಜಲ್ವುಡ್ 2, ಯಶ್ ದಯಾಳ್ 1, ರಶಿಕ್ ದಾರ್ ಸಲಾಮ್ 1, ಕ್ರುನಾಲ್ ಪಾಂಡ್ಯ 3, ಸುಯಾಶ್ ಶರ್ಮಾ 1 ವಿಕೆಟ್ ಕೀಳುವ ಮೂಲಕ ಕೆಕೆಆರ್ ಅನ್ನು 175 ರನ್ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಕೆಕೆಆರ್ ಬ್ಯಾಟರ್ಗಳು ಆರಂಭದಲ್ಲಿ ಅಬ್ಬರಿಸಿದ್ದು ನೋಡಿದರೆ 200 ರನ್ಗಳ ಗಡಿ ದಾಟಿಸಲಿದ್ದಾರೆ ಎನ್ನುವಂತಿತ್ತು. ಆದ್ರೆ ಕೊನೆಯಲ್ಲಿ ಇದು ಉಲ್ಟಾ ಹೊಡೆದು ಆರ್ಸಿಬಿ ಬೌಲರ್ಗಳ ಕಡೆ ಲಕ್ ತಿರುಗಿಬಿಟ್ಟಿತು.
ಆರ್ಸಿಬಿ ಪ್ಲೇಯಿಂಗ್ 11: ವಿರಾಟ್ ಕೊಹ್ಲಿ, ಫಿಲಿಪ್ ಸಾಲ್ಟ್, ರಜತ್ ಪಾಟೀದಾರ್(ನಾಯಕ), ಲಿಯಾಮ್ ಲಿವಿಂಗ್ಸ್ಟೋನ್, ಜಿತೇಶ್ ಶರ್ಮಾ, ಟಿಮ್ ಡೇವಿಡ್, ಕ್ರುನಾಲ್ ಪಾಂಡ್ಯ, ರಶಿಕ್ ದಾರ್ ಸಲಾಮ್, ಸುಯಾಶ್ ಶರ್ಮಾ, ಜೋಶ್ ಹೇಜಲ್ವುಡ್, ಯಶ್ ದಯಾಳ್
ಕೆಕೆಆರ್ ಪ್ಲೇಯಿಂಗ್ 11: ಕ್ವಿಂಟನ್ ಡಿ ಕಾಕ್, ವೆಂಕಟೇಶ್ ಅಯ್ಯರ್, ಅಜಿಂಕ್ಯ ರಹಾನೆ(ನಾಯಕ), ರಿಂಕು ಸಿಂಗ್, ಅಂಗ್ರಿಶ್ ರಘುವಂಶಿ, ಸುನಿಲ್ ನರೈನ್, ಆ್ಯಂಡ್ರೆ ರಸೆಲ್, ರಮನ್ದೀಪ್ ಸಿಂಗ್, ಸ್ಪೆನ್ಸರ್ ಜಾನ್ಸನ್, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ,
-
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications