Get Updates
Get notified of breaking news, exclusive insights, and must-see stories!

ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್‌ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ

IPL 2026: ಐಪಿಎಲ್‌ 19ನೇ ಸೀಸನ್‌ ಮಾರ್ಚ್ 28ರಂದು ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಆದರೆ, ಅಂದು ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ನಿರ್ಧರಿಸಿದೆ.

ಮಾಹಿತಿ ಪ್ರಕಾರ, ಕಳೆದ ವರ್ಷ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಮೃತಪಟ್ಟ 11 ಅಮಾಯಕ ಜೀವಗಳಿಗೆ ಗೌರವ ಸೂಚಿಸುವ ಸಲುವಾಗಿ, ಮಾರ್ಚ್ 28ರಂದು ನಡೆಯಬೇಕಿದ್ದ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಲು ಬಿಸಿಸಿಐ ನಿರ್ಧರಿಸಿದೆ.

IPL 2026 BCCI Cancels Opening Ceremony in Bengaluru s M Chinnaswamy to Honor Stampede Victims

ಕಳೆದ ವರ್ಷ ಜೂನ್ 4, 2025ರಂದು ಆರ್‌ಸಿಬಿ ತಂಡವು ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಗೆದ್ದ ಹಿನ್ನೆಲೆ ಬೆಂಗಳೂರಿನಲ್ಲಿ ವಿಜಯೋತ್ಸವ ಕಾರ್ಯಕ್ರಮವನ್ನು ಇಟ್ಟುಕೊಳ್ಳಲಾಗಿತ್ತು. ಈ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಅಪಾರ ಜನಸ್ತೋಮ ಜಮಾಯಿಸಿದ ಪರಿಣಾಮ ಕಾಲ್ತುಳಿತ ದುರತಂ ನಡೆಯಿತು. ಈ ದುರಂತದಲ್ಲಿ 11 ಮಂದಿ ಪ್ರಾಣ ಕಳೆದುಕೊಂಡಿದ್ದರು. ಈ ದುರಂತದ ನೆನಪಿನಲ್ಲಿ ಯಾವುದೇ ಸಾಂಸ್ಕೃತಿಕ ಅಥವಾ ಮನರಂಜನಾ ಕಾರ್ಯಕ್ರಮಗಳನ್ನು ನಡೆಸದಿರಲು ತೀರ್ಮಾನಿಸಲಾಗಿದೆ.

ಐಪಿಎಲ್‌ ಉದ್ಘಾಟನಾ ಪಂದ್ಯದ ಸಮಾರಂಭಕ್ಕೆ ಬ್ರೇಕ್‌

ಮೃತಪಟ್ಟ 11 ಅಭಿಮಾನಿಗಳ ನೆನಪಿಗಾಗಿ ಆರ್‌ಸಿಬಿ ತಂಡದ ಆಟಗಾರರು ಅಭ್ಯಾಸದ ಸಮಯದಲ್ಲಿ 11 ಸಂಖ್ಯೆಯ ಜರ್ಸಿ ಧರಿಸಲಿದ್ದಾರೆ ಮತ್ತು ಪಂದ್ಯದ ವೇಳೆ ಕಪ್ಪು ಪಟ್ಟಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ. ಕ್ರೀಡಾಂಗಣದಲ್ಲಿ 11 ಸೀಟುಗಳನ್ನು ಮೃತಪಟ್ಟವರ ಗೌರವಾರ್ಥವಾಗಿ ಖಾಲಿ ಬಿಡಲಾಗುತ್ತಿದೆ ಎಂದು ಆರ್‌ಸಿಬಿ ಹಾಗೂ ಕೆಎಸ್‌ಸಿಎ ತೀರ್ಮಾನ ಮಾಡಿದ್ದವು. ಆದರೆ, ಚಿನ್ನಸ್ವಾಮಿಯಲ್ಲಿ ಉದ್ಘಾಟನಾ ಪಂದ್ಯದ ಸಮಾರಂಭ ನಡೆಸದಿರಲು ಬಿಸಿಸಿಐ ಸೂಚಿಸಿದೆ.

ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಹೇಳಿದ್ದೇನು?

"ಕಳೆದ ವರ್ಷ ಜೂನ್ 4ರಂದು ನಡೆದ ದುರದೃಷ್ಟಕರ ಘಟನೆಯ ಹಿನ್ನೆಲೆಯಲ್ಲಿ, ಈ ಬಾರಿ ಬೆಂಗಳೂರಿನಲ್ಲಿ ನಡೆಯಲಿರುವ ಐಪಿಎಲ್ 2026ರ ಆರಂಭದ ದಿನದಂದು ಯಾವುದೇ ಉದ್ಘಾಟನಾ ಸಮಾರಂಭ ಇರುವುದಿಲ್ಲ. ಕಳೆದ ವರ್ಷ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟ ಆತ್ಮಗಳಿಗೆ ಗೌರವ ಸಲ್ಲಿಸುವ ಸಲುವಾಗಿ, ಐಪಿಎಲ್ 19ನೇ ಸೀಸನ್‌ ಆರಂಭದಲ್ಲಿ ಯಾವುದೇ ಸಾಂಸ್ಕೃತಿಕ ಅಥವಾ ಮನರಂಜನಾ ಕಾರ್ಯಕ್ರಮಗಳನ್ನು ಬಿಸಿಸಿಐ ಆಯೋಜಿಸುತ್ತಿಲ್ಲ," ಎಂದು ಅವರು ತಿಳಿಸಿದ್ದಾರೆ. ಈ ಮೂಲಕ ಬಿಸಿಸಿಐ ಆಚರಣೆಗಿಂತ ಮಾನವೀಯತೆ ಮತ್ತು ಮೃತರ ಕುಟುಂಬದ ಭಾವನೆಗಳಿಗೆ ಆದ್ಯತೆ ನೀಡಿದೆ.

ಇದು 19ನೇ ಆವೃತ್ತಿಯ ಐಪಿಎಲ್ ಆಗಿದ್ದು, ಅತ್ಯಂತ ಗಂಭೀರತೆಯಿಂದ ಟೂರ್ನಿಯನ್ನು ಆರಂಭಿಸಲಾಗುತ್ತಿದೆ. ಈ ಪಂದ್ಯದ ಸಮಯದಲ್ಲಿ ಮೃತಪಟ್ಟವರ ನೆನಪಿಗಾಗಿ ಕ್ರೀಡಾಂಗಣದಲ್ಲಿ ಮೌನಾಚರಣೆ ಮಾಡುವ ಬಗ್ಗೆ ಏನಾದರೂ ಮಾಹಿತಿ ಬೇಕಿದ್ದಲ್ಲಿ ಕೇಳಬಹುದು. ಸಹಾಯ ಮಾಡಲು ನಾನು ಸಿದ್ಧನಿದ್ದೇನೆ ಎಂದು ದೇವಜಿತ್ ಸೈಕಿಯಾ ಅವರು ಹೇಳಿದ್ದಾರೆ ಅಂತಾ ವರದಿಯಾಗಿದೆ.

2025ರ ಜೂನ್ 4ರಂದು ಕಾಲ್ತುಳಿತ ದುರಂದ

ಐಪಿಎಲ್ 18ನೇ ಸೀಸನ್‌ ಫೈನಲ್ ಫೈನಲ್ ಪಂದ್ಯವು ಜೂನ್‌ 3ರಂದಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿದ್ದು, ಈ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿದ ಆರ್‌ಸಿಬಿ ಚೊಚ್ಚಲ ಐಪಿಎಲ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತು. ಈ ಐತಿಹಾಸಿಕ ಗೆಲುವಿನ ನಂತರ, ಜೂನ್ 4ರ ಬೆಳಿಗ್ಗೆ ಇಡೀ ಆರ್‌ಸಿಬಿ ತಂಡವು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಅಲ್ಲಿಂದ ಆಟಗಾರರು ನೇರವಾಗಿ ವಿಧಾನಸೌಧಕ್ಕೆ ತೆರಳಿದರು.

ವಿಧಾನಸೌಧದ ಮೆಟ್ಟಿಲುಗಳ ಮೇಲೆ ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆಟಗಾರರನ್ನು ಆತ್ಮೀಯವಾಗಿ ಸನ್ಮಾನಿಸಿದರು. ಸುಮಾರು 17 ವರ್ಷಗಳ ಕಾಯುವಿಕೆಯ ನಂತರ ಆರ್‌ಸಿಬಿ ಟ್ರೋಫಿ ಗೆದ್ದಿದ್ದರಿಂದ, ಇಡೀ ರಾಜ್ಯವೇ ಸಂಭ್ರಮದಲ್ಲಿ ಮುಳುಗಿತ್ತು.

ಈ ವಿಜಯೋತ್ಸವವನ್ನು ನೋಡಲು ಲಕ್ಷಾಂತರ ಅಭಿಮಾನಿಗಳು ಜಮಾಯಿಸಿದ್ದರು. ದುರದೃಷ್ಟವಶಾತ್, ಇದೇ ಸಂದರ್ಭದಲ್ಲಿ ಭಾರೀ ಜನಸಂದಣಿಯಿಂದಾಗಿ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ದುರಂತ ಸಂಭವಿಸಿತು. ಆದ್ದರಿಂದ ಈ ಬಾರಿ ಯಾವುದೇ ಅದ್ಧೂರಿ ಉದ್ಘಾಟನಾ ಸಮಾರಂಭವನ್ನು ನಡೆಸದಿರಲು ನಿರ್ಧರಿಸಲಾಗಿದೆ.

ಈ ಘಟನೆಯ ನಂತರ ಬೆಂಗಳೂರು ಪೊಲೀಸರು ಮತ್ತು ಕ್ರೀಡಾಂಗಣದ ಆಡಳಿತ ಮಂಡಳಿಯು ಈ ಬಾರಿ ಹೆಚ್ಚಿನ ಭದ್ರತೆ ಮತ್ತು ಜನಸಂದಣಿ ನಿಯಂತ್ರಣಕ್ಕಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದಾರೆ. ಇನ್ನೂ ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿಯು ಮೇ 31ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭವನ್ನು ನಡೆಸಲು ಯೋಜಿಸುತ್ತಿವೆ. "ಐಪಿಎಲ್‌ನ ಅಂತ್ಯದಲ್ಲಿ, ಅಂದರೆ ಫೈನಲ್ ಪಂದ್ಯದ ದಿನದಂದು ಅದ್ಧೂರಿ ಮನರಂಜನಾ ಕಾರ್ಯಕ್ರಮವನ್ನು ನಡೆಸಲು ಬಿಸಿಸಿಐ ಮತ್ತು ಐಪಿಎಲ್ ಆಡಳಿತ ಮಂಡಳಿ ನಿರ್ಧರಿಸಿದೆ," ಎಂದು ತಿಳಿಸಿದ್ದಾರೆ.

ಹಿಂದಿನ ವರ್ಷಗಳಲ್ಲಿ, ಅಂದರೆ 2019, 2020, 2021 ಮತ್ತು 2022ರ ಆವೃತ್ತಿಗಳಲ್ಲಿ ಐಪಿಎಲ್ ಯಾವುದೇ ಉದ್ಘಾಟನಾ ಸಮಾರಂಭಗಳನ್ನು ಆಯೋಜನೆ ಮಾಡಿರಲಿಲ್ಲ. ಆದರೆ, ಕಳೆದ ವರ್ಷ 2025ರಲ್ಲಿ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ ಉದ್ಘಾಟನಾ ಸಮಾರಂಭದಲ್ಲಿ ಬಾಲಿವುಡ್ ಸೂಪರ್ ಸ್ಟಾರ್‌ಗಳಾದ ಶಾರುಖ್ ಖಾನ್ ಮತ್ತು ದಿಶಾ ಪಟಾನಿ, ಹಾಗೆಯೇ ಗಾಯಕರಾದ ಶ್ರೇಯಾ ಘೋಷಾಲ್ ಮತ್ತು ಕರಣ್ ಔಜ್ಲಾ ಅದ್ಧೂರಿ ಪ್ರದರ್ಶನ ನೀಡಿದ್ದರು.

ಸತತ ನಾಲ್ಕು ವರ್ಷಗಳ ಕಾಲ ವಿವಿಧ ಕಾರಣಗಳಿಂದಾಗಿ, ಮುಖ್ಯವಾಗಿ ಕೋವಿಡ್-19 ಮತ್ತು ಪುಲ್ವಾಮಾ ದಾಳಿಗೆ ಗೌರವ ಸೂಚಿಸಲು ಸಮಾರಂಭಗಳನ್ನು ನಡೆಸಿರಲಿಲ್ಲ. 2025ರಲ್ಲಿ ಕೋಲ್ಕತ್ತಾದಲ್ಲಿ ನಡೆದ ಸಮಾರಂಭವು ಅತ್ಯಂತ ಮನರಂಜನಾತ್ಮಕವಾಗಿತ್ತು. ಆದರೆ, ಕಾಲ್ತುಳಿತ ದುರಂತದ ಘಟನೆ ಹಿನ್ನೆಲೆ ಈ ಬಾರಿ ಬೆಂಗಳೂರಿನಲ್ಲಿ ಬಿಸಿಸಿಐ ಮತ್ತೆ ಉದ್ಘಾಟನಾ ಸಮಾರಂಭವನ್ನು ಕೈಬಿಟ್ಟಿದೆ. 2019ರಲ್ಲಿ ಪುಲ್ವಾಮಾ ದಾಳಿಯ ಹುತಾತ್ಮರಿಗೆ ಗೌರವ ಸಲ್ಲಿಸಲು ಬಿಸಿಸಿಐ ಉದ್ಘಾಟನಾ ಸಮಾರಂಭದ ಬದಲು ಆ ಹಣವನ್ನು ಸೇನಾ ಕಲ್ಯಾಣ ನಿಧಿಗೆ ದೇಣಿಗೆ ನೀಡಿತ್ತು. ಒಟ್ಟಿನಲ್ಲಿ ಹೇಳುವುದಾದರೆ, ಸಾವಿನ ವಿಷಯಗಳು ಮನರಂಜನೆಯಾಗಬಾರದು. ಬದಲಾಗಿ, ಮೃತಪಟ್ಟವರ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸವಾಗಬೇಕು ಎಂಬುದೇ ಬಿಸಿಸಿಐನ ಉದ್ದೇಶವಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+