Get Updates
Get notified of breaking news, exclusive insights, and must-see stories!

IPL 2026: ಐಪಿಎಲ್‌ 2026 ಆರಂಭಕ್ಕೂ ಮುನ್ನ ಕೆಕೆಆರ್‌ಗೆ ಬಿಸಿಸಿಐ ಖಡಕ್‌ ಸೂಚನೆ

IPL 2026: ಈಗಾಗಲೇ ಐಪಿಎಲ್‌ 2026ರ ಆವೃತ್ತಿಯ ಮಿನಿ ಹರಾಜು ಪ್ರಕ್ರಿಯೆ ಮುಗಿದಿದೆ. ಇದೀಗ ಎಲ್ಲಾ ತಂಡಗಳಲ್ಲಿ ಯಾರನ್ನು ಯಾವ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎನ್ನುವ ಪ್ಲ್ಯಾನ್‌ನಲ್ಲಿವೆ. ಈ ನಡುವೆಯೇ ಬಿಸಿಸಿಐ ಕೆಕೆಆರ್‌ಗೆ ಖಡಕ್‌ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಐಪಿಎಲ್ 2026ರ ಆವೃತ್ತಿಗಾಗಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್‌)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜನವರಿ 3ರ ಶನಿವಾರ ಸೂಚನೆ ನೀಡಿದೆ.

IPL 2026 BCCI Directs KKR to Release Bangladesh Player Mustafizur Rahman

ಮಂಡಳಿಯಾದ್ಯಂತ ಇತ್ತೀಚಿನ ಬೆಳವಣಿಗೆಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ದೇವಜಿತ್ ತಿಳಿಸಿದ್ದಾರೆ. ಈ ಕುರಿತು ಎಎನ್‌ಐ ಹಂಚಿಕೊಂಡ ಟ್ವೀಟ್‌ ಇಲ್ಲಿದೆ ನೋಡಿ.

ಕಳೆದ ಕೆಲವು ತಿಂಗಳೂಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ಆಗುತ್ತಿವೆ. ಈ ವಿಚಾರ ದೊಟ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ಇನ್ನೂ ಇದರಿಂದ ಭಾರತ ಮತ್ತು ಬಾಂಗ್ಲಾ ನಡುವಿನ ಸಂಬಂಧಕ್ಕೆ ಭಾರೀ ಬಿಕ್ಕಟ್ಟು ಉಂಟಾಗಿದೆ.

ಮುಸ್ತಾಫಿಜುರ್ ರೆಹಮಾನ್ ಕೈಬಿಡಲು ಸೂಚನೆ: ಬಾಂಗ್ಲಾದಲ್ಲಿ ಭಾರತ ವಿರೋಧಿ ಚುಟುವಟಿಕೆಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಬಾಂಗ್ಲಾದ ಆಟಗಾರರನ್ನು ಖರೀದಿ ಮಾಡಿರುವ ಕೆಕೆಆರ್ ತಂಡದ ಮಾಲೀಕ ಹಾಗೂ ನಟ ಶಾರುಖ್​ ಖಾನ್ ವಿರುದ್ಧ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಬಾಂಗ್ಲಾದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಕೆಕೆಆರ್‌ಗೆ ಸೂಚನೆ ನೀಡಿದೆ.

ಮಿನಿ ಹಾರಾಜಿನಲ್ಲಿ ಖರೀದಿ: ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಡಿಸೆಂಬರ್​ 16ರಂದು ದುಬೈನಲ್ಲಿ ನಡೆದ ಐಪಿಎಲ್​ ಮಿನಿ ಹರಾಜಿನ ವೇಳೆ ಕೆಕೆಆರ್​ ಫ್ರಾಂಚೈಸಿ ಖರೀದಿಸಿತ್ತು. ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಗಿಲೆದ್ದಿದ್ದವು. ಇನ್ನೂ ಉತ್ತರ ಪ್ರದೇಶದ ವಿಧಾನಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಸಂಗೀತ್​ ಸೋಮ್​, ಶಾರುಖ್​ ಖಾನ್​ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.

ಬಾಂಗ್ಲಾ ದೇಶದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಎನ್ನುವ ಗಂಭೀರ ಆರೋಪಗಳಿವೆ. ಈ ನಡುವೆಯೇ ಐಪಿಎಲ್‌ನಲ್ಲಿ ಬಾಂಗ್ಲಾ ಕ್ರಿಕೆಟಿಗರನ್ನು ಖರೀದಿಸಲಾಗುತ್ತಿದೆ. ದೇಶದ್ರೋಹಿ ಶಾರುಖ್ ಖಾನ್, ಬಾಂಗ್ಲಾದೇಶದ ಕ್ರಿಕೆಟಿಗ ರೆಹಮಾನ್ ಅವರನ್ನು 9.20 ಕೋಟಿ ರೂಪಾಯಿಗೆ ಖರೀದಿಸಿ ಮಾಡಿದ್ದಾರೆ. ಅಂತಹ ದೇಶದ್ರೋಹಿಗಳಿಗೆ ಈ ದೇಶದಲ್ಲಿ ವಾಸಿ ಮಾಡುವ ಹಕ್ಕಿಲ್ಲ ಎಂದು ಮೀರತ್‌ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೋಮ್ ಅವರು ವಾಗ್ದಾಳಿ ನಡೆಸಿದರು.

ನೀವು ಈ ಮಟ್ಟಕ್ಕೆ ಬೆಳೆಯಲು ಪ್ರಮುಖ ಕಾರಣ ನಮ್ಮ ಭಾರತದ ಜನರು. ನಿಮ್ಮನ್ನು ಉನ್ನತ ಸ್ಥಾನದಲ್ಲಿ ನೋಡುತ್ತಿದ್ಧಾರೆ. ಇದಕ್ಕೆ ಅವಮಾನ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇವರು ಅಷ್ಟೇ ಅಲ್ಲದೆ, ರೆಹಮಾನ್​ ಅವರನ್ನು ಖರೀದಿ ಮಾಡಿದ್ದಕ್ಕೆ ಬಹುತೇಕ ಮಂದಿ ಕಡಿಕಾರಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಸಿಸಿಐ ಬಾಂಗ್ಲಾ ದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ಕೆಕೆಆರ್‌ಗೆ ಖಡಕ್‌ ಸೂಚನೆ ನೀಡಿದೆ.

ಐಪಿಎಲ್‌ 2026 ಆರಂಭಕ್ಕೂ ಮುನ್ನವೇ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಈ ನಿರ್ದಾರಕ್ಕೆ ಮೆಚ್ಚುಗೆಗಳು ವ್ಯಕ್ತವಾಗಿವೆ. ನೆಟ್ಟಿಗರು ಬಾಂಗ್ಲಾದೇಶದ ಆಟಗಾರರನ್ನು ಕೈಬಿಡಲು ಸೂಚಿಸಿರುವುದು ತುಂಬಾ ಸಂತಸದ ವಿಚಾರ. ಎರಡು ದೇಶದಗಳ ನಡುವೆ ಬಾಂಧವ್ಯ ಅಷ್ಟಕಷ್ಟೇ ಎಂಬಂತಾಗಿದೆ. ಆದ್ದರಿಂದ ಇದೀಗ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಹೇಳುತ್ತಿದ್ದಾರೆ. ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಈ ಹಿನ್ನೆಲೆ ಬಾಂಗ್ಲಾದೇಶದ ಕ್ರಿಕೆಟಿಗರನ್ನು ಐಪಿಎಲ್‌ನಲ್ಲಿ ಆಡಿಸುವಂತಿಲ್ಲ ಎಂಬ ಒತ್ತಾಯಗಳು ಕೇಳಿಬಂದಿದ್ದವು. ಇದಕ್ಕೆ ಮಣಿದ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+