IPL 2026: ಐಪಿಎಲ್ 2026 ಆರಂಭಕ್ಕೂ ಮುನ್ನ ಕೆಕೆಆರ್ಗೆ ಬಿಸಿಸಿಐ ಖಡಕ್ ಸೂಚನೆ
IPL 2026: ಈಗಾಗಲೇ ಐಪಿಎಲ್ 2026ರ ಆವೃತ್ತಿಯ ಮಿನಿ ಹರಾಜು ಪ್ರಕ್ರಿಯೆ ಮುಗಿದಿದೆ. ಇದೀಗ ಎಲ್ಲಾ ತಂಡಗಳಲ್ಲಿ ಯಾರನ್ನು ಯಾವ ಸ್ಥಾನದಲ್ಲಿ ಯಾರನ್ನು ಆಡಿಸಬೇಕು ಎನ್ನುವ ಪ್ಲ್ಯಾನ್ನಲ್ಲಿವೆ. ಈ ನಡುವೆಯೇ ಬಿಸಿಸಿಐ ಕೆಕೆಆರ್ಗೆ ಖಡಕ್ ಸಂದೇಶವನ್ನು ರವಾನೆ ಮಾಡಿದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಐಪಿಎಲ್ 2026ರ ಆವೃತ್ತಿಗಾಗಿ ಬಾಂಗ್ಲಾದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಬಿಡುಗಡೆ ಮಾಡುವಂತೆ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್)ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಜನವರಿ 3ರ ಶನಿವಾರ ಸೂಚನೆ ನೀಡಿದೆ.

ಮಂಡಳಿಯಾದ್ಯಂತ ಇತ್ತೀಚಿನ ಬೆಳವಣಿಗೆಗಳಿಂದಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಂಡಳಿಯ ಕಾರ್ಯದರ್ಶಿ ದೇವಜಿತ್ ತಿಳಿಸಿದ್ದಾರೆ. ಈ ಕುರಿತು ಎಎನ್ಐ ಹಂಚಿಕೊಂಡ ಟ್ವೀಟ್ ಇಲ್ಲಿದೆ ನೋಡಿ.
ಕಳೆದ ಕೆಲವು ತಿಂಗಳೂಗಳಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದಾಳಿಗಳು ಆಗುತ್ತಿವೆ. ಈ ವಿಚಾರ ದೊಟ್ಟ ಮಟ್ಟದಲ್ಲಿ ಸುದ್ದಿಯಾಗಿದೆ. ಇನ್ನೂ ಇದರಿಂದ ಭಾರತ ಮತ್ತು ಬಾಂಗ್ಲಾ ನಡುವಿನ ಸಂಬಂಧಕ್ಕೆ ಭಾರೀ ಬಿಕ್ಕಟ್ಟು ಉಂಟಾಗಿದೆ.
ಮುಸ್ತಾಫಿಜುರ್ ರೆಹಮಾನ್ ಕೈಬಿಡಲು ಸೂಚನೆ: ಬಾಂಗ್ಲಾದಲ್ಲಿ ಭಾರತ ವಿರೋಧಿ ಚುಟುವಟಿಕೆಗಳು ನಡೆಯುತ್ತಿದ್ದು, ಈ ಸಮಯದಲ್ಲಿ ಬಾಂಗ್ಲಾದ ಆಟಗಾರರನ್ನು ಖರೀದಿ ಮಾಡಿರುವ ಕೆಕೆಆರ್ ತಂಡದ ಮಾಲೀಕ ಹಾಗೂ ನಟ ಶಾರುಖ್ ಖಾನ್ ವಿರುದ್ಧ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರ ಬೆನ್ನಲ್ಲೇ ಇದೀಗ ಬಿಸಿಸಿಐ ಬಾಂಗ್ಲಾದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ತಂಡದಿಂದ ಕೈಬಿಡುವಂತೆ ಕೆಕೆಆರ್ಗೆ ಸೂಚನೆ ನೀಡಿದೆ.
ಮಿನಿ ಹಾರಾಜಿನಲ್ಲಿ ಖರೀದಿ: ಬಾಂಗ್ಲಾದೇಶದ ವೇಗಿ ಮುಸ್ತಫಿಜುರ್ ರೆಹಮಾನ್ ಅವರನ್ನು ಡಿಸೆಂಬರ್ 16ರಂದು ದುಬೈನಲ್ಲಿ ನಡೆದ ಐಪಿಎಲ್ ಮಿನಿ ಹರಾಜಿನ ವೇಳೆ ಕೆಕೆಆರ್ ಫ್ರಾಂಚೈಸಿ ಖರೀದಿಸಿತ್ತು. ಇದಕ್ಕೆ ವ್ಯಾಪಕ ಆಕ್ರೋಶಗಳು ಭುಗಗಿಲೆದ್ದಿದ್ದವು. ಇನ್ನೂ ಉತ್ತರ ಪ್ರದೇಶದ ವಿಧಾನಸಭೆಯ ಮಾಜಿ ಸದಸ್ಯ ಹಾಗೂ ಬಿಜೆಪಿ ನಾಯಕ ಸಂಗೀತ್ ಸೋಮ್, ಶಾರುಖ್ ಖಾನ್ ಅವರನ್ನು ದೇಶದ್ರೋಹಿ ಎಂದು ಕರೆದಿದ್ದರು.
ಬಾಂಗ್ಲಾ ದೇಶದಲ್ಲಿ ಹಿಂದೂಗಳನ್ನು ಕೊಲ್ಲಲಾಗುತ್ತಿದೆ ಎನ್ನುವ ಗಂಭೀರ ಆರೋಪಗಳಿವೆ. ಈ ನಡುವೆಯೇ ಐಪಿಎಲ್ನಲ್ಲಿ ಬಾಂಗ್ಲಾ ಕ್ರಿಕೆಟಿಗರನ್ನು ಖರೀದಿಸಲಾಗುತ್ತಿದೆ. ದೇಶದ್ರೋಹಿ ಶಾರುಖ್ ಖಾನ್, ಬಾಂಗ್ಲಾದೇಶದ ಕ್ರಿಕೆಟಿಗ ರೆಹಮಾನ್ ಅವರನ್ನು 9.20 ಕೋಟಿ ರೂಪಾಯಿಗೆ ಖರೀದಿಸಿ ಮಾಡಿದ್ದಾರೆ. ಅಂತಹ ದೇಶದ್ರೋಹಿಗಳಿಗೆ ಈ ದೇಶದಲ್ಲಿ ವಾಸಿ ಮಾಡುವ ಹಕ್ಕಿಲ್ಲ ಎಂದು ಮೀರತ್ನಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸೋಮ್ ಅವರು ವಾಗ್ದಾಳಿ ನಡೆಸಿದರು.
ನೀವು ಈ ಮಟ್ಟಕ್ಕೆ ಬೆಳೆಯಲು ಪ್ರಮುಖ ಕಾರಣ ನಮ್ಮ ಭಾರತದ ಜನರು. ನಿಮ್ಮನ್ನು ಉನ್ನತ ಸ್ಥಾನದಲ್ಲಿ ನೋಡುತ್ತಿದ್ಧಾರೆ. ಇದಕ್ಕೆ ಅವಮಾನ ಮಾಡಬೇಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಇವರು ಅಷ್ಟೇ ಅಲ್ಲದೆ, ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕೆ ಬಹುತೇಕ ಮಂದಿ ಕಡಿಕಾರಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತ ಬಿಸಿಸಿಐ ಬಾಂಗ್ಲಾ ದೇಶದ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಕೈಬಿಡುವಂತೆ ಕೆಕೆಆರ್ಗೆ ಖಡಕ್ ಸೂಚನೆ ನೀಡಿದೆ.
#WATCH | Guwahati | BCCI secretary Devajit Saikia says, "Due to the recent developments that are going on all across, BCCI has instructed the franchise KKR to release one of their players, Mustafizur Rahman of Bangladesh, from their squad and BCCI has also said that if they ask… pic.twitter.com/53oxuRcmZp
— ANI (@ANI) January 3, 2026
ಐಪಿಎಲ್ 2026 ಆರಂಭಕ್ಕೂ ಮುನ್ನವೇ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಈ ನಿರ್ದಾರಕ್ಕೆ ಮೆಚ್ಚುಗೆಗಳು ವ್ಯಕ್ತವಾಗಿವೆ. ನೆಟ್ಟಿಗರು ಬಾಂಗ್ಲಾದೇಶದ ಆಟಗಾರರನ್ನು ಕೈಬಿಡಲು ಸೂಚಿಸಿರುವುದು ತುಂಬಾ ಸಂತಸದ ವಿಚಾರ. ಎರಡು ದೇಶದಗಳ ನಡುವೆ ಬಾಂಧವ್ಯ ಅಷ್ಟಕಷ್ಟೇ ಎಂಬಂತಾಗಿದೆ. ಆದ್ದರಿಂದ ಇದೀಗ ಬಿಸಿಸಿಐ ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಹೇಳುತ್ತಿದ್ದಾರೆ. ಹಸೀನಾ ಸರ್ಕಾರ ಪತನದ ಬಳಿಕ ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧ ಹಾಳಾಗಿದೆ. ಈ ಹಿನ್ನೆಲೆ ಬಾಂಗ್ಲಾದೇಶದ ಕ್ರಿಕೆಟಿಗರನ್ನು ಐಪಿಎಲ್ನಲ್ಲಿ ಆಡಿಸುವಂತಿಲ್ಲ ಎಂಬ ಒತ್ತಾಯಗಳು ಕೇಳಿಬಂದಿದ್ದವು. ಇದಕ್ಕೆ ಮಣಿದ ಬಿಸಿಸಿಐ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದೆ ಎನ್ನಲಾಗುತ್ತಿದೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
ಮೈದಾನಕ್ಕೆ ಬರ್ತಾರಾ ಆರ್ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಕ್ರಿಕೆಟ್ ಆಟ, ಬೆಟ್ಟಿಂಗ್ ದಂಧೆ, ಜೂಜಿನ ಮಜಾ ಇದೇ ಮಾರ್ಚ್ 28ರಿಂದ ಪ್ರಾರಂಭ: ವಿವೇಕಾನಂದ ಎಚ್.ಕೆ. ಮಹತ್ವದ ಸಂದೇಶ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ











Click it and Unblock the Notifications