IPL 2026 RCB: ಆರ್ಸಿಬಿ ಫ್ಯಾನ್ಸ್ಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ರೆ ಮೆಟ್ರೋ ಪ್ರಯಾಣ ಉಚಿತ? ವರದಿ
IPL 2026 RCB: ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಐಪಿಎಲ್ ಹಬ್ಬ ಇನ್ನೂ ಕೆಲವೇ ದಿನಗಳಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (ಬಿಎಂಆರ್ಸಿಎಲ್) ಮತ್ತು ಆರ್ಸಿಬಿ ಮ್ಯಾನೇಜ್ಮೆಂಟ್ ನಡುವೆ ಮಹತ್ವದ ಮಾತುಕತೆ ನಡೆಯುತ್ತಿದೆ. ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಗಳ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಪ್ರಯಾಣದ ಸೌಲಭ್ಯ ನೀಡುವ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ಮನಿಕಂಟ್ರೋಲ್ ವರದಿ ಮಾಡಿದೆ.
ಪಂದ್ಯದ ಟಿಕೆಟ್ ತೋರಿಸುವ ಮೂಲಕ ಅಭಿಮಾನಿಗಳು ಸ್ಟೇಡಿಯಂಗೆ ಹೋಗಲು ಮತ್ತು ಬರಲು ಮೆಟ್ರೋ ಬಳಸಬಹುದು. ಪಂದ್ಯದ ಟಿಕೆಟ್ನಲ್ಲೇ ಮೆಟ್ರೋ ಪ್ರಯಾಣದ ಶುಲ್ಕವನ್ನೂ ಸೇರಿಸುವ ಅಥವಾ ಟಿಕೆಟ್ ಅನ್ನೇ ಮೆಟ್ರೋ ಪಾಸ್ ಆಗಿ ಬಳಸುವ ಬಗ್ಗೆ ಮಾತುಕತೆ ನಡೆಯುತ್ತಿದೆ. ಸ್ಟೇಡಿಯಂ ಸುತ್ತಮುತ್ತ ಉಂಟಾಗುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಸಾರ್ವಜನಿಕ ಸಾರಿಗೆ ಬಳಕೆಯನ್ನು ಉತ್ತೇಜಿಸುವುದು ಇದರ ಮುಖ್ಯ ಗುರಿಯಾಗಿದೆ ಎಂದು ತಿಳಿದುಬಂದಿದೆ.

ಐಪಿಎಲ್ ಟಿಕೆಟ್ ಹೊಂದಿರುವವರಿಗೆ ಉಚಿತ ಮೆಟ್ರೋ ಸೇವೆ?
ಈ ಪ್ರಸ್ತಾವನೆ ಜಾರಿಗೆ ಬಂದರೆ, ಐಪಿಎಲ್ ಟಿಕೆಟ್ ಹೊಂದಿರುವವರು ಯಾವುದೇ ಮೆಟ್ರೋ ನಿಲ್ದಾಣದಿಂದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದವರೆಗೆ (ಕ್ರೀಡಾಂಗಣಕ್ಕೆ ಅತಿ ಹತ್ತಿರದ ನಿಲ್ದಾಣ) ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಪಂದ್ಯದ ಟಿಕೆಟ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ನಮ್ಮ ಮೆಟ್ರೋದ ಸ್ವಯಂಚಾಲಿತ ಟಿಕೆಟ್ ಸಂಗ್ರಹಣಾ ಗೇಟ್ಗಳಲ್ಲಿ ಸ್ಕ್ಯಾನ್ ಮಾಡುವ ಮೂಲಕ ನೀವು ನೇರವಾಗಿ ಪ್ರವೇಶ ಪಡೆಯಬಹುದು.
ಈ ವಿಚಾರಕ್ಕೆ ಸಂಬಂಧಿಸಿದಂತೆ ಬಿಎಂಆರ್ಸಿಎಲ್, ಆರ್ಸಿಬಿ ಮ್ಯಾನೇಜ್ಮೆಂಟ್, ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ನಡುವೆ ಈಗಾಗಲೇ ಪ್ರಾಥಮಿಕ ಹಂತದ ಮಾತುಕತೆಗಳು ನಡೆದಿವೆ ಎಂದು ಮೂಲಗಳಿಂದ ತಿಳಿದುಬಂದಿದೆ. "ಆದರೆ, ಈ ಪ್ರಸ್ತಾವನೆಯು ಇನ್ನೂ ಚರ್ಚೆಯ ಹಂತದಲ್ಲಿದೆ. ಯೋಜನೆಗೆ ಸಂಬಂಧಿಸಿದಂತೆ ಇನ್ನಷ್ಟು ಸ್ಪಷ್ಟವಾದ ಚಿತ್ರಣ ಸಿಗಲು ಇನ್ನೂ ಕೆಲವು ದಿನಗಳು ಬೇಕಾಗಬಹುದು," ಎಂದು ಮೂಲಗಳು ತಿಳಿಸಿವೆ ಎಂದು ಮನಿ ಕಂಟ್ರೋಲ್ ವರದಿ ಮಾಡಿದೆ.
ಇದು ಜಾರಿಗೆ ಬಂದರೆ, ಮಾನ್ಯವಾದ ಪಂದ್ಯ ಟಿಕೆಟ್ ಹೊಂದಿರುವ ಪ್ರೇಕ್ಷಕರು ಕ್ರೀಡಾಂಗಣಕ್ಕೆ ಹೋಗಿ ಬರುವುದಕ್ಕಾಗಿ ಮೆಟ್ರೋ ಟೋಕನ್ ಖರೀದಿಸುವ ಅಗತ್ಯವಿಲ್ಲ ಅಥವಾ ಕಾರ್ಡ್ ಮೂಲಕ ಶುಲ್ಕ ಪಾವತಿಸುವ ಅವಶ್ಯಕತೆಯೂ ಇರದು. ಅವರು ತಮ್ಮ ಪಂದ್ಯದ ಟಿಕೆಟ್ನಲ್ಲಿರುವ ಕ್ಯೂಆರ್ ಕೋಡ್ ಅನ್ನು ಮೆಟ್ರೋ ನಿಲ್ದಾಣದ ಸ್ವಯಂಚಾಲಿತ ಟಿಕೆಟ್ ಸಂಗ್ರಹಣಾ ಗೇಟ್ಗಳಲ್ಲಿ ಸ್ಕ್ಯಾನ್ ಮಾಡಿ ನೇರವಾಗಿ ಪ್ರಯಾಣಿಸಬಹುದಾಗಿದೆ.
ಮತ್ತೊಂದು ಮೂಲದ ಪ್ರಕಾರ, "ಈ ಯೋಜನೆಯಿಂದ ಕ್ರೀಡಾಂಗಣಕ್ಕೆ ಬರುವ ಸಾವಿರಾರು ಜನರು ತಮ್ಮ ಸ್ವಂತ ವಾಹನಗಳನ್ನು ಬಳಸುವ ಬದಲು ಮೆಟ್ರೋವನ್ನು ಅವಲಂಬಿಸುತ್ತಾರೆ. ಇದರಿಂದ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಗಣನೀಯವಾಗಿ ಕಡಿಮೆಯಾಗುತ್ತದೆ. ಜೊತೆಗೆ, ಬಿಎಂಆರ್ಸಿಎಲ್ಗೆ ಹೆಚ್ಚಿನ ಆದಾಯ ಹರಿದುಬರುವ ಸಾಧ್ಯತೆಯಿದೆ," ಎಂದು ವರದಿಯಾಗಿದೆ. ಆದರೆ, ಈ ವಿಷಯಕ್ಕೆ ಸಂಬಂಧಿಸಿದಂತೆ, ಬಿಎಂಆರ್ಸಿಎಲ್ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಅಂತಲೂ ವರದಿಯಾಗಿದೆ.
ಚೆನ್ನೈ ಮೆಟ್ರೋ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ 2023ರಿಂದಲೇ ಇದೇ ರೀತಿಯ ಒಪ್ಪಂದ ಜಾರಿಯಲ್ಲಿದೆ. ಅಲ್ಲಿ ಐಪಿಎಲ್ ಪಂದ್ಯದ ಟಿಕೆಟ್ ಹೊಂದಿರುವ ವೀಕ್ಷಕರಿಗೆ ಮೆಟ್ರೋದಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ನೀಡಲಾಗುತ್ತಿದೆ.
ಬೆಂಗಳೂರಿನಲ್ಲಿ ಉದ್ಘಾಟನಾ ಪಂದ್ಯ
ಐಪಿಎಲ್ನ 19ನೇ ಆವೃತ್ತಿಯ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 28ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ ತಂಡಗಳು ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಲಿವೆ.
ಮೆಟ್ರೋ, ಬಿಎಂಟಿಸಿ ಬಸ್ ಸೇವೆ ವಿಸ್ತರಣೆಗೆ ಪ್ಲ್ಯಾನ್
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯುವ ದಿನಗಳಂದು, ಮೆಟ್ರೋ ರೈಲು ಸೇವೆ ಸಮಯವನ್ನು ರಾತ್ರಿ 1 ಗಂಟೆಯವರೆಗೆ ವಿಸ್ತರಿಸಲಾಗುವುದು. ಇದು ಎಲ್ಲಾ ಆರು ಟರ್ಮಿನಲ್ ನಿಲ್ದಾಣಗಳಿಂದ ಅನ್ವಯವಾಗಲಿದೆ. ಅಲ್ಲದೆ, ಬಿಎಂಟಿಸಿ ಕೂಡ ಪಂದ್ಯದ ದಿನಗಳಲ್ಲಿ ಬಸ್ ಸಮಯವನ್ನು ವಿಸ್ತರಿಸುವುದಲ್ಲದೆ, ಕ್ರೀಡಾಂಗಣಕ್ಕೆ ಬರುವ ಮತ್ತು ಹೋಗುವ ಅಭಿಮಾನಿಗಳಿಗಾಗಿ ಹೆಚ್ಚಿನ ಸಂಖ್ಯೆಯ ವಿಶೇಷ ಬಸ್ಗಳನ್ನು ಓಡಿಸಲು ನಿರ್ಧರಿಸಿದೆ.
ಪಂದ್ಯದ ನಂತರ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಾವಿರಾರು ಅಭಿಮಾನಿಗಳು ಒಂದೇ ಬಾರಿಗೆ ಸೇರುವುದರಿಂದ, ಟೋಕನ್ ನೀಡಲು ಕಷ್ಟವಾಗುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು, ಬಿಎಂಆರ್ಸಿಎಲ್ ಹಿಂದಿನ ಪಂದ್ಯಗಳಂತೆಯೇ 'ರಿಟರ್ನ್ ಜರ್ನಿ ಪೇಪರ್ ಟಿಕೆಟ್'ಗಳನ್ನು ನೀಡುವ ಪದ್ಧತಿಯನ್ನು ಮುಂದುವರಿಸಲಿದೆ ಎಂದು ತಿಳಿದುಬಂದಿದೆ.
-
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications