ವೈಭವ್ ಸೂರ್ಯವಂಶಿಗೆ ರವೀಂದ್ರ ಜಡೇಜಾ ಬ್ಯಾಟಿಂಗ್ ಕ್ಲಾಸ್; Viral Video ಇಲ್ಲಿದೆ
ಐಪಿಎಲ್ 2026ರ ಕ್ರಿಕೆಟ್ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಮಾರ್ಚ್ 28ರಿಂದ ಟೂರ್ನಿ ಅಧಿಕೃತವಾಗಿ ಚಾಲನೆ ಪಡೆಯಲಿದ್ದು, ಎಲ್ಲಾ ತಂಡಗಳು ಸಮರಕ್ಕೆ ಸಜ್ಜಾಗಿವೆ. ಈ ನಡುವೆ ರಾಜಸ್ಥಾನ್ ರಾಯಲ್ಸ್ ತಂಡವು ಜೈಪುರದ ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ತನ್ನ ತರಬೇತಿ ಶಿಬಿರವನ್ನು ಉತ್ಸಾಹದಿಂದ ಆರಂಭಿಸಿದೆ.
ಜಡೇಜಾ-ವೈಭವ್ ಸಂಭಾಷಣೆ ವೈರಲ್
ತಂಡದ ಅಭ್ಯಾಸದ ವೇಳೆ ರಾಜಸ್ಥಾನ್ ರಾಯಲ್ಸ್ ಹಂಚಿಕೊಂಡ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದರಲ್ಲಿ ಅನುಭವಿ ಆಲ್ ರೌಂಡರ್ ರವೀಂದ್ರ ಜಡೇಜಾ ಮತ್ತು 14 ವರ್ಷದ ಪ್ರತಿಭಾನ್ವಿತ ಆಟಗಾರ ವೈಭವ್ ಸೂರ್ಯವಂಶಿ ನಡುವಿನ ಆತ್ಮೀಯ ಮಾತುಕತೆ ಅಭಿಮಾನಿಗಳ ಗಮನ ಸೆಳೆದಿದೆ

ವಿಡಿಯೋದಲ್ಲಿ ಜಡೇಜಾ ಅವರು ವೈಭವ್ ಬಳಿ, "ನೀವು ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಆಡುತ್ತಿದ್ದಿರಲ್ಲವೇ?" ಎಂದು ವಿಚಾರಿಸುತ್ತಾರೆ. ಅದಕ್ಕೆ ಉತ್ತರಿಸಿದ ವೈಭವ್, "ಹೌದು, ನಾನು ನಿನ್ನೆಯಷ್ಟೇ ಅಭ್ಯಾಸಕ್ಕೆ ಬಂದೆ. ನಾನು ಡಿವೈ ಪಾಟೀಲ್ ಬ್ಲೂ ತಂಡದ ಪರವಾಗಿ ಆಡಿದ್ದೆ, ನಮ್ಮ ತಂಡ ಸೆಮಿಫೈನಲ್ವರೆಗೆ ಬಂದಿತ್ತು" ಎಂದು ಮಾಹಿತಿ ಹಂಚಿಕೊಂಡಿದ್ದಾನೆ. ಆದರೆ ಸೆಮಿಫೈನಲ್ನಲ್ಲಿ ಮುಂಬೈ ಕಸ್ಟಮ್ಸ್ ವಿರುದ್ಧ ಸೋಲನುಭವಿಸಿ ಟೂರ್ನಿಯಿಂದ ಹೊರಬಿದ್ದಿದ್ದಾಗಿ ಬೇಸರದಿಂದಲೇ ವಿವರಿಸಿದ್ದಾನೆ. ಈ ಟೂರ್ನಿಯಲ್ಲಿ ಮುಂಬೈ ಕಸ್ಟಮ್ಸ್ ತಂಡವೇ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಹೊಸ ಹುರುಪಿನಲ್ಲಿ ರಾಯಲ್ಸ್ ಪಡೆ
ಸಂಜು ಸ್ಯಾಮ್ಸನ್ ನಾಯಕತ್ವದ ರಾಯಲ್ಸ್ ತಂಡದಲ್ಲಿ ಈ ಬಾರಿ ಅನುಭವಿ ಜಡೇಜಾ ಅವರ ಮಾರ್ಗದರ್ಶನ ವೈಭವ್ ಸೂರ್ಯವಂಶಿ ಅವರಂತಹ ಯುವ ಆಟಗಾರರಿಗೆ ದೊಡ್ಡ ಬಲ ನೀಡಲಿದೆ. ಜಡೇಜಾ ಮತ್ತು ಸ್ಯಾಮ್ ಕರನ್ ಅವರಂತಹ ಆಟಗಾರರ ಸೇರ್ಪಡೆಯಿಂದ ತಂಡದ ಮಧ್ಯಮ ಕ್ರಮಾಂಕ ಮತ್ತು ಬೌಲಿಂಗ್ ವಿಭಾಗ ಬಲಿಷ್ಠಗೊಂಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಒಟ್ಟಿನಲ್ಲಿ ಮಾರ್ಚ್ 28ರ ಮೊದಲ ಪಂದ್ಯಕ್ಕಾಗಿ ರಾಯಲ್ಸ್ ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.
-
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ












Click it and Unblock the Notifications