IPL 2026 RCB: ಆರ್ಸಿಬಿಗೆ ಹೊಸ 8 ಆಟಗಾರರ ಸೇರ್ಪಡೆ: ಇಲ್ಲಿದೆ ಉಳಿದ ಮೊತ್ತದ ವಿವರ
IPL 2026 RCB: ಈಗಾಗಲೇ ಬಲಿಷ್ಠ ತಂಡ ಹೊಂದಿರುವ ಆರ್ಸಿಬಿ ಇಂದು (ಡಿಸೆಂಬರ್ 16) ಐಪಿಎಲ್ 2026 ಮಿನಿ ಹರಾಜಿನಲ್ಲಿ 8 ಆಟಗಾರರನ್ನು ಕೊಂಡುಕೊಂಡಿದೆ. ಹಾಗಾದ್ರೆ, ಅವರು ಯಾರು ಹಾಗೂ ಎಷ್ಟು ಮೊತ್ತಕ್ಕೆ ಖರೀದಿ ಮಾಡಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ರಿಟೈನ್ ಪ್ರಕಿಯೆ ವೇಳೆ ಬಹುತೇಕ ಈ ಬಾರಿಯ ಆಟಗಾರರನ್ನೇ ಮುಂದಿನ ಆವೃತ್ತಿಗೆ ಉಳಿಸಿಕೊಂಡಿತ್ತು. ಒಟ್ಟು 17 ಆಟಗಾರರನ್ನು ಉಳಿಸಿಕೊಂಡಿತ್ತು. ಇದೀಗ ಈ ಪಟ್ಟಿಗೆ ಮಿನಿ ಹಾರಾಜಿನಲ್ಲಿ ಎಂಟು ಮಂದಿಯನ್ನು ಸೇರ್ಪಡೆ ಮಾಡಿಕೊಂಡಿದೆ. ಹಾಗಾದ್ರೆ, ಯಾರೆಲ್ಲಾ ಇದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲದೆ ನೋಡಿ.

ಆರ್ಸಿಬಿ ಐಪಿಎಲ್ 2025 ಫೈನಲ್ ಪಂದ್ಯ ಗೆಲ್ಲಲು ಪ್ರಮುಖ ಕಾರಣವೇ ಬಲಿಷ್ಠ ತಂಡವನ್ನು ಕಟ್ಟಿದ್ದು. ಕಳೆದ ಸೀಸನ್ಗಳಲ್ಲಿ ಕೊನೆಯವರೆಗೂ ಬಂದು ಬ್ಯಾಟಿಂಗ್ ಅಥವಾ ಬೌಲಿಂಗ್ನಲ್ಲಿ ಎಡವಿ ಕೊನೆಗೆ ಸೋಲು ಕಾಣುತ್ತಿತ್ತು. ಆದರೆ, ಈ ಬಾರಿ ಬ್ಯಾಟಿಂಗ್, ಬೌಲಿಂಗ್ ವಿಭಾಗದಲ್ಲೂ ಉತ್ತಮ ಪ್ರದರ್ಶನದ ಮೂಲಕ ಬಲಿಷ್ಠ ತಂಡಗಳನ್ನು ಬಗ್ಗುಬಡಿದು ಟ್ರೋಫಿ ಗೆಲ್ಲುವಲ್ಲಿ ಯಶಸ್ವಿ ಆಯಿತು.
ಒಬ್ಬರು ಗಾಯಗೊಂಡು ಪಂದ್ಯದಿಂದ ಹೊರಗುಳಿದರೆ, ಮತ್ತೊಬ್ಬರು ಬ್ಯಾಕ್ ಅಪ್ ಅಲ್ಲಿ ತಯಾರಿದ್ದರು. ಇಷ್ಟರ ಮಟ್ಟಿಗೆ ಬಲಿಷ್ಠ ತಂಡ ಹೊಂದಿದ್ದರೂ ಸಹ ಇದೀಗ ಐಪಿಎಲ್ 2026 ಮಿನಿ ಹರಾಜಿನಲ್ಲಿ 8 ಆಟಗಾರರನ್ನು ಕೊಂಡುಕೊಂಡಿದೆ. ಅದರಲ್ಲೂ ಹೆಚ್ಚಾಗಿ ಗಾಯಗೊಂಡು ಹೊರಗುಳಿಯುತ್ತಿದ್ದ ಕನ್ನಡಿಗ ದೇವದತ್ ಪಡಿಕ್ಕಲ್ಗೆ ಇದೀಗ ಬ್ಯಾಕ್ ಅಪ್ ಆಗಿ ವೆಂಕಟೇಶ್ ಅಯ್ಯರ್ ಅವರನ್ನು 7 ಕೋಟಿ ರೂಪಾಯಿಗೆ ಖರೀದಿಸಿದೆ. ಇವರನ್ನು ಸೇರಿದಂತೆ ಒಟ್ಟು ಎಂಟು ಮಂದಿಗೆ ಮಿನಿ ಹರಾಜಿನಲ್ಲಿ ಮಣೆ ಹಾಕಿದೆ.
ಯಾರಿಗೆ ಎಷ್ಟು ಮೊತ್ತ ನೀಡಿ ಖರೀದಿಸಿದೆ?
* ವೆಂಕಟೇಶ್ ಅಯ್ಯರ್: ₹7,00,00,000
* ಮಂಗೇಶ್ ಯಾದವ್: ₹5,20,00,000
* ಜಾಕೋಬ್ ಡಫ್ಫಿ: ₹2,00,00,000
* ಜೋರ್ಡಾನ್ ಕಾಕ್ಸ್: ₹75,00,000
* ಸಾತ್ವಿಕ್ ದೇಸ್ವಾಲ್: ₹30,00,000
* ವಿಕಿ ಓಸ್ಟ್ವಾಲ್: ₹30,00,000
* ಕನಿಷ್ಕ್ ಚೌಹಾಣ್: ₹30,00,000
* ವಿಹಾನ್ ಮಲ್ಹೋತ್ರಾ: ₹30,00,000
ಆರ್ಸಿಬಿ ಪರ್ಸ್ನಲ್ಲಿ ಉಳಿದ ಹಣ ಎಷ್ಟು?: ಆರ್ಸಿಬಿ ಮಿನಿ ಹರಾಜಿಗೆಂದು 16.40 ಕೋಟಿ ರೂಪಾಯಿ ಉಳಿಸಿಕೊಂಡಿತ್ತು. ಆದರೆ, ಇದೀಗ ಐದು ಆಟಗಾರರನ್ನು ಕೊಂಡುಕೊಂಡ ಬಳಿಕ ಪರ್ಸ್ನಲ್ಲಿ ಸದ್ಯ ಉಳಿದಿರುವ ಮೊತ್ತ ₹25,00,000 ಮಾತ್ರ. ಅಬುಧಾಬಿಯಲ್ಲಿ ಹರಾಜು ಪ್ರಕ್ರಿಯೆ ನಡೆಯಿತು. ತಂಡವನ್ನು ಮತ್ತಷ್ಟು ಬಲಿಷ್ಠಗೊಳಿಸಲು ಈ ಎಂಟು ಮಂದಿಯನ್ನು ಸೇರ್ಪಡೆ ಮಾಡಿಕೊಂಡಿದೆ.
ಆರ್ಸಿಬಿ ತಂಡ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಟಿದಾರ್ (ನಾಯಕ), ಟಿಮ್ ಡೇವಿಡ್, ಕೃಣಾಲ್ ಪಾಂಡ್ಯ, ರೊಮಾರಿಯೊ ಶೆಫರ್ಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಭುವನೇಶ್ವರ್ ಕುಮಾರ್, ಯಶ್ ದಯಾಳ್, ಜೋಶ್ ಹ್ಯಾಝಲ್ವುಡ್, ಸುಯಾಶ್ ಶರ್ಮಾ, ಅಭಿನಂದನ್ ಸಿಂಗ್, ಜಾಕೋಬ್ ಬೆಥೆಲ್, ನುವಾನ್ ತುಷಾರ, ರಸಿಖ್ ಸಲಾಂ, ಸ್ವಪ್ನಿಲ್ ಸಿಂಗ್. ಇದೀಗ ಈ ಪಟ್ಟಿಗೆ ವೆಂಕಟೇಶ್ ಅಯ್ಯರ್, ಮಂಗೇಶ್ ಯಾದವ್, ಜಾಕೋಬ್ ಡಫ್ಫಿ, ಜೋರ್ಡಾನ್ ಕಾಕ್ಸ್, ಸಾತ್ವಿಕ್ ದೇಸ್ವಾಲ್ ಸೇರ್ಪಡೆಯಾಗಿದ್ದಾರೆ.
-
ಸಿಎಸ್ಕೆ ಕಪ್ 5 ರೂಪಾಯಿ, ಆರ್ಸಿಬಿ ಟ್ರೋಫಿ ಬೆಲೆ 5 ಕೋಟಿ ರೂಪಾಯಿ: ಪುಟ್ಟ ಬಾಲಕನ ಹೇಳಿಕೆ ಭಾರೀ ವೈರಲ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
Virat Kohli: ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ ಕೊಟ್ಟ ಬಳಿಕ ತನ್ನ ಆಟದ ಯಶಸ್ಸಿನ ರಹಸ್ಯ ಬಿಚ್ಚಿಟ್ಟ ವಿರಾಟ್ ಕೊಹ್ಲಿ -
ಚಿನ್ನಸ್ವಾಮಿಯಲ್ಲಿ ಕನ್ನಡಿಗ ದೇವ್, ವಿರಾಟ್ ಅಬ್ಬರದ ಬ್ಯಾಟಿಂಗ್: ಆರ್ಸಿಬಿ ವಿರುದ್ಧ ಎಸ್ಆರ್ಎಚ್ ಹೀನಾಯು ಸೋಲು -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB Vs SHR: ಚಿನ್ನಸ್ವಾಮಿಯಲ್ಲಿ ಎಸ್ಆರ್ಎಚ್ ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಆರ್ಸಿಬಿ -
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್










Click it and Unblock the Notifications