ಐಪಿಎಲ್ 2026: ಆರ್ಸಿಬಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿ
IPL 2026 RCB: ಐಪಿಎಲ್ 2025 ಫೈನಲ್ ಪಂದ್ಯದಲ್ಲಿ ಆರ್ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಚೊಚ್ಚಲ ಟ್ರೋಫಿ ಗೆದ್ದುಕೊಂಡಿತು. ಇದೀಗ ಎಲ್ಲರ ಕಣ್ಣು 2026ರ ಸೀಸನ್ನತ್ತ ನೆಟ್ಟಿದ್ದು, ಮಿನಿ ಹರಾಜಿಗೂ ಮುನ್ನ ಬೆಂಗಳೂರು ರಿಟೈನ್ ಆಟಗಾರರ ಪಟ್ಟಿಯನ್ನು ಪ್ರಟಕ ಮಾಡಿದೆ. ಹಾಗಾದ್ರೆ, ಯಾವೆಲ್ಲಾ ಆಟಗಾರರನ್ನು ಉಳಿಸಿಕೊಂಡಿದೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಹಾಲಿ ಐಪಿಎಲ್ ಚಾಂಪಿಯನ್ ಆರ್ಸಿಬಿ ಮಿನಿ ಹರಾಜಿಗೆ ಮುನ್ನ ರಿಟೈನ್ ಪಟ್ಟಿ ಪ್ರಕಟ ಮಾಡಿದೆ. ತಂಡವು ಎಷ್ಟು ಆಟಗಾರರನ್ನು ಉಳಿಸಿಕೊಂಡಿದೆ ಎನ್ನುವ ಪ್ರಶ್ನೆ ಬಹುತೇಕ ಮಂದಿ ತಲೆಯಲ್ಲಿ ಕಾಡುತ್ತಿರುತ್ತದೆ. ಹಾಗಾದ್ರೆ, ಅದಕ್ಕೆಲ್ಲಾ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಬೇರೆ ತಂಡಗಳಿಗೆ ಹೋಲಿಕೆ ಮಾಡಿದರೆ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಅಷ್ಟೊಂದು ಬದಲಾವಣೆಗಳು ಆಗಿಲ್ಲ. ಯಾಕಂದರೆ, ಅಷ್ಟರ ಮಟ್ಟಿಗೆ ಬಲಿಷ್ಠ ತಂಡವನ್ನು ಹೊಂದಿದ್ದು, ಬಹುತೇಕ ಅದೇ ಆಟಗಾರರನ್ನು ಉಳಿಸಿಕೊಂಡಿದೆ. ಕೆಲವರನ್ನು ಮಾತ್ರ ಕೈಬಿಟ್ಟಿದೆ. ಅಂದ್ರೆ, ಕಳೆದ ಆವೃತ್ತಿಯಲ್ಲಿ ಕಳಪೆ ಪ್ರದರ್ಶನ ತೋರಿದ, ಬದಲಿ ಆಟಗಾರರು ಹಾಗೂ ಒಂದು ಪಂದ್ಯದಲ್ಲೂ ಆಡಿರದ ಆಟಗಾರರನ್ನು ತಂಡದಿಂದ ಕೈಬಿಟ್ಟಿದೆ.
ಉಳಿದಂತೆ ಮಿಕ್ಕಿದ ಎಲ್ಲಾ ಆಟಗಾರರನ್ನು ಉಳಿಸಿಕೊಂಡಿ. ಒಟ್ಟು 17 ಮಂದಿ ಆಟಗಾರರನ್ನು ಉಳಿಸಿಕೊಂಡಿದೆ. ಇನ್ನೂ ಮಿನಿ ಹರಾಜಿನ ವೇಳೆ ಯಾರಾದರೂ ಒಬ್ಬರು ಅಥವಾ ಇಬ್ಬರು ಆಲ್ರೌಂಡರ್ ಆಟಗಾರರನ್ನು ಕೊಂಡುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಇದೀಗ ಸದ್ಯ ಆರ್ಸಿಬಿ 16.4 ಕೋಟಿ ರೂಪಾಯಿ ಉಳಿಸಿಕೊಂಡಿದೆ. ಹಾಗಾದ್ರೆ ತಂಡ ಉಳಿಸಿಕೊಂಡಿರುವ ಆಟಗಾರರ ಪಟ್ಟಿ ಕೆಳಗೆ ನೀಡಲಾಗಿದೆ ಕಣ್ಣಾಡಿಸಿ.
ಆರ್ಸಿಬಿ ಉಳಿಸಿಕೊಂಡ ಆಟಗಾರರು: ರಜತ್ ಪಾಟಿದಾರ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಜಾಕೋಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮ,ಸ್ವಪ್ನಿಲ್ ಸಿಂಗ್, ನುವಾನ್ ತುಷಾರ, ರಸಿಖ್ ದಾರ್ ಸಲಾಮ್, ಅಭಿನಂದನ್ ಸಿಂಗ್ ಅವರನ್ನ ಉಳಿಸಿಕೊಂಡಿದೆ.
ಆರ್ಸಿಬಿ ಉಳಿಸಿಕೊಂಡ ಆಟಗಾರರು
* ರಜತ್ ಪಾಟಿದಾರ್ (ನಾಯಕ)
* ವಿರಾಟ್ ಕೊಹ್ಲಿ
* ದೇವದತ್ ಪಡಿಕ್ಕಲ್
* ಫಿಲ್ ಸಾಲ್ಟ್
* ಜಿತೇಶ್ ಶರ್ಮಾ (ವಿಕೆಟ್ ಕೀಪರ್)
* ಕೃನಾಲ್ ಪಾಂಡ್ಯ
* ಟಿಮ್ ಡೇವಿಡ್
* ರೊಮಾರಿಯೋ ಶೆಫರ್ಡ್
* ಜಾಕೋಬ್ ಬೆಥೆಲ್
* ಜೋಶ್ ಹೇಝಲ್ವುಡ್
* ಯಶ್ ದಯಾಲ್
* ಭುವನೇಶ್ವರ್ ಕುಮಾರ್
* ಸುಯಾಶ್ ಶರ್ಮ
* ಸ್ವಪ್ನಿಲ್ ಸಿಂಗ್
* ನುವಾನ್ ತುಷಾರ
* ರಸಿಖ್ ದಾರ್ ಸಲಾಮ್
* ಅಭಿನಂದನ್ ಸಿಂಗ್
ಹೀಗೆ ಆರ್ಸಿಬಿ 17 ಆಟಗಾರರನ್ನು ಉಳಿಸಿಕೊಂಡು, ಉಳಿದ 8 ಆಟಗಾರರನ್ನು ಕೈಬಿಟ್ಟಿದೆ. ಉಳಿಸಿಕೊಂಡಿರುವವಲ್ಲಿ ಬಹುತೇಕ ಆಟಗಾರರು ಕಳೆದ ಆವೃತ್ತಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದಾರೆ. ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಬಲಿಷ್ಠ ತಂಡಗಳನ್ನು ಬಗ್ಗುಬಡಿದು ಟ್ರೋಫಿ ಮುಡಿಗೇರಿಸಿಕೊಂಡಿತು. ಇಂತಹ ಬಲಿಷ್ಠ ತಂಡ ಹೊಂದಿರುವ ಆರ್ಸಿಬಿ ಮುಂದಿನ ಬಾರಿಯೂ ಕಪ್ ಗೆಲ್ಲುವ ಸಾಧ್ಯತೆಯಿದೆ ಎನ್ನುವ ಕೂಗುಗಳು ಕೇಳಿಬರುತ್ತಿವೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ









Click it and Unblock the Notifications