IPL: ಐಪಿಎಲ್ ಮಾಲೀಕರ ಸಭೆಯಲ್ಲಿ ಶಾರುಖ್ ಖಾನ್ ಮತ್ತು ನೆಸ್ ವಾಡಿಯಾ ನಡುವೆ ವಾಗ್ವಾದ!
ಮುಂಬೈನಲ್ಲಿರುವ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ನಡೆದ ಐಪಿಎಲ್ ಮಾಲೀಕರ ಸಭೆಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡದ ಓನರ್ ಶಾರುಖ್ ಖಾನ್ ಮತ್ತು ಪಂಜಾಬ್ ಕಿಂಗ್ಸ್ ಸಹ- ಮಾಲೀಕ ನೆಸ್ ವಾಡಿಯಾ ನಡುವೆ ವಾಗ್ವಾದ ನಡೆದಿದೆ.
ಸಭೆಯಲ್ಲಿ ಪ್ರಮುಖ ವಿವಾದವೆಂದರೆ ರಿಟೈನ್ ನಡೆಸಬೇಕೇ ಅಥವಾ ಬೇಡವೇ ಎಂಬುದು. ಕೊಲ್ಕತ್ತಾ ನೈಟ್ ರೈಡರ್ಸ್ ಪ್ರಾಂಚೈಸಿಯು ಹೆಚ್ಚಿನ ಆಟಗಾರರ ರಿಟೈನ್ಗಾಗಿ ಬೇಡಿಕೆಯಿಟ್ಟಿದ್ದು, ಈ ವೇಳೆ ಪಂಜಾಬ್ ಕಿಂಗ್ಸ್ ಪ್ರಾಂಚೈಸಿ ಕಡೆಯಿಂದ ಆಕ್ಷೇಪ ವ್ಯಕ್ತವಾಗಿದೆ. ಇದರಿಂದ ಓನರ್ ಶಾರುಖ್ ಖಾನ್ ಮತ್ತು ನೆಸ್ ವಾಡಿಯಾ ನಡುವೆ ವಾಗ್ವಾದ ನಡೆದಿದೆ.

ಐಪಿಎಲ್ 2025 ರ ಮೊದಲು ಜುಲೈ 31 ರಂದು 10 ಐಪಿಎಲ್ ಫ್ರಾಂಚೈಸಿಗಳ ಸಭೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಆಟಗಾರರನ್ನು ಉಳಿಸಿಕೊಳ್ಳುವುದು ಮತ್ತು ಪರಿಣಾಮ ಬೀರುವ ನಿಯಮಗಳನ್ನು ಚರ್ಚಿಸಲಾಗಿದೆ. ರೈಟ್ ಟು ಮ್ಯಾಚ್ ಕಾರ್ಡ್ ಆಯ್ಕೆಯ ಬಗ್ಗೆಯೂ ಚರ್ಚೆ ನಡೆಯಿತು. 2025ರ ರಿಟೈನ್ ಸಂಬಂಧಿಸಿದಂತೆ ಬಿಸಿಸಿಐ ಎಲ್ಲಾ ಐಪಿಎಲ್ ಫ್ರಾಂಚೈಸಿಗಳಿಂದ ಸಲಹೆಗಳನ್ನು ಕೇಳಿತ್ತು.
ಮೆಗಾ ಹರಾಜಿಗೂ ಮುನ್ನ ಹೆಚ್ಚಿನ ಆಟಗಾರರನ್ನು ರಿಟೈನ್ ಮಾಡಿಕೊಳ್ಳಲು ಅವಕಾಶ ನೀಡಬೇಕೆಂದು ಈ ಹಿಂದೆಯೇ ಕೆಕೆಆರ್ ಫ್ರಾಂಚೈಸಿ ಬಿಸಿಸಿಐಗೆ ಮನವಿ ಮಾಡಿತ್ತು. ಇದಕ್ಕೆ ಮುಂಬೈ ಇಂಡಿಯನ್ನ್, ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ಫ್ರಾಂಚೈಸಿಗಳು ಬೆಂಬಲ ವ್ಯಕ್ತಪಡಿಸಿದೆ.

ಆದರೆ ಪಂಜಾಬ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಸೇರಿದಂತೆ ಕೆಲ ಫ್ರಾಚೈಸಿಗಳು ಹೆಚ್ಚಿನ ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಬಾರದೆಂಬ ವಾದವನ್ನು ಮುಂಡಿಟ್ಟಿದ್ದಾರೆ. ಈ ವೇಳೆ ಶಾರುಖ್ ಖಾನ್ ಮತ್ತು ನೆಸ್ ವಾಡಿಯಾ ನಡುವೆ ಏರುಧ್ವನಿಯಲ್ಲಿ ವಾದ ನಡೆದಿದ್ದು ಕಂಡು ಬಂದಿದೆ. ಈ ಸಭೆಯ ನಂತರ ಬಿಸಿಸಿಐ ಯಾವ ತೀರ್ಮಾನಕ್ಕೆ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಶಾರುಖ್ ಖಾನ್ಗೆ ಕಣ್ಣಿನ ಚಿಕಿತ್ಸೆಗಾಗಿ ಅಮೆರಿಕಕ್ಕೆ ಶಿಫ್ಟ್
ಬಾಲಿವುಡ್ ಕಿಂಗ್ ಶಾರುಖ್ಖಾನ್ ಅವರಿಗೆ ಕಣ್ಣಿನ ಸಮಸ್ಯೆ ಇರುವುದು ಗೊತ್ತೇ ಇದೆ. ಇದಕ್ಕಾಗಿ ಅವರು ಈಗ ಚಿಕಿತ್ಸೆಗಾಗಿ ಅಮೆರಿಕಕ್ಕೆ ಹೋಗುತ್ತಿದ್ದಾರೆ. ಈ ವಿಚಾರ ಕೇಳುತ್ತಿದ್ದಂತೆ ಅಭಿಮಾನಿಗಳು ಗಾಬರಿಗೊಂಡಿದ್ದಾರೆ.
ಬಾಲಿವುಡ್ ಮೂಲಗಳಿಂದ ಬಂಧಿರುವ ಮಾಹಿತಿ ಪ್ರಕಾರ ಸೋಮವಾರ ಶಾರುಖ್ ಖಾನ್ ಮುಂಬೈನ ಆಸ್ಪತ್ರೆಗೆ ಹೋಗಿದ್ದರು. ಆಲ್ಲಿಯೇ ಕಣ್ಣಿನ ಚಿಕಿತ್ಸೆಗೆ ಒಳಗಾಗಲು ಬಯಸಿದ್ದರು. ಆದರೆ ಅಂದುಕೊಂಡಂತೆ ಆಗಲಿಲ್ಲ. ಆಗಿರುವ ಹಾನಿ ಸರಿಪಡಿಸಲು ತುರ್ತಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ ಎನ್ನಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications