ಡೆಕ್ಕನ್ ಕೈ ತಪ್ಪಿದ 4,800 ಕೋ.ರೂ, ಬಿಸಿಸಿಐ ಪರ ಬಂದ ತೀರ್ಪು
ಮುಂಬೈ, ಜೂನ್ 16: ಇಂಡಿಯನ್ ಪ್ರೀಮಿಯರ್ ಲೀಗ್ ಪ್ರಕರಣದಿಂದ ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ ಲಿಮಿಟೆಡ್ (ಡಿಸಿಎಚ್ಎಲ್)ಗೆ 4,800 ಕೋ.ರೂ. ಕೈ ತಪ್ಪಿದೆ, ಕಾನೂನು ಹೋರಾಟದಲ್ಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭರ್ಜರಿ ಸಿಕ್ಸರ್ ಬಾರಿಸಿದೆ.
|
ಬಿಸಿಸಿಐ ಹಾಗೂ ಡೆಕ್ಕನ್ ಹೋಲ್ಡಿಂಗ್ಸ್ ನಡುವಿನ ಪರಿಹಾರ ಮೊತ್ತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ನೇಮಿತ ಮಧ್ಯಸ್ಥಗಾರ ನ್ಯಾ ಸಿಕೆ ಠಕ್ಕರ್ ನಿರ್ಣಯವನ್ನು ಇಂದು ಬಾಂಬೆ ಹೈಕೋರ್ಟ್ ಪಕ್ಕಕ್ಕೆ ಸರಿಸಿದೆ. ಈ ಮೂಲಕ ಬಿಸಿಸಿಐಗೆ ರಿಲೀಫ್ ಕೊಟ್ಟಿದೆ.
2008ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ (ಐಪಿಎಲ್) ಉದ್ಘಾಟನಾ ಸೀಸನ್ನಲ್ಲಿ ಆಡಿದ್ದ ಡೆಕ್ಕನ್ ಚಾರ್ಜರ್ಸ್ 2009ರಲ್ಲಿ ಚಾಂಪಿಯನ್ ಆಗಿತ್ತು. 2012ರ ವೇಳೆಗೆ 4,800 ಕೋಟಿ ರೂಪಾಯಿ ಪಾವತಿಸುವಂತೆ ಬಿಸಿಸಿಐ ಹಿಂದೆ ಬಿದ್ದಿತ್ತು. 2012ರ ಸೆಪ್ಟೆಂಬರ್ನಲ್ಲಿಕಾನೂನುಬಾಹಿರವಾಗಿ ತಂಡವನ್ನು ಐಪಿಎಲ್ನಿಂದ ವಜಾ ಮಾಡಲಾಗಿದೆ ಎಂದು ಡೆಕ್ಕನ್ ಕ್ರಾನಿಕಲ್ ಹೋಲ್ಡಿಂಗ್ಸ್ ಲಿಮಿಟೆಡ್ಗೆ (ಡಿಸಿಎಚ್ಎಲ್) ವಾದಿಸಿತ್ತು.

ಡಿಸಿಎಚ್ಎಲ್ನ ಫ್ರಾಂಚೈಸಿ ಡೆಕ್ಕನ್ ಚಾರ್ಜರ್ಸ್ಗೆ ನೋಟಿಸ್ ನೀಡಿದ್ದು ಕಾನೂನುಬಾಹಿರವೇ ಎಂಬುದನ್ನು ನಿರ್ಧರಿಸಲು 2012ರಲ್ಲಿ ಏಕೈಕ ಮಧ್ಯಸ್ಥಿಕೆದಾರರನ್ನಾಗಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಿ ಕೆ ಠಕ್ಕರ್ ಅವರನ್ನು ನೇಮಿಸಲಾಗಿತ್ತು. ಐಪಿಎಲ್ನಿಂದ ಡೆಕ್ಕನ್ ಚಾರ್ಜರ್ಸ್ ತಂಡವನ್ನು ವಜಾ ಮಾಡಿದ್ದು ಕಾನೂನುಬಾಹಿರ, ಡಿಸಿಎಚ್ಎಲ್ಗೆ ರೂ. 4,814.67 ಕೋಟಿ ಪರಿಹಾರದ ಜೊತೆಗೆ 2012ರಿಂದ ಅನ್ವಯವಾಗುವಂತೆ ಶೇ. 10ರಷ್ಟು ಬಡ್ಡಿ ಪಾವತಿಸುವಂತೆ ಎಂದು ಬಿಸಿಸಿಐಗೆ ಸೂಚಿಸಿ ನ್ಯಾಯಮೂರ್ತಿ ಸಿ ಕೆ ಠಕ್ಕರ್ ಆದೇಶ ನೀಡಿದ್ದರು. ಈ ಆದೇಶವನ್ನು ಬಾಂಬೆ ಹೈಕೋರ್ಟ್ನಲ್ಲಿ ಬಿಸಿಸಿಐ ಪ್ರಶ್ನಿಸಿತ್ತು. ನ್ಯಾ. ಗೌತಮ್ ಪಟೇಲ್ ಇಂದು ಬದಿಗೆ ಸರಿಸಿದ್ದಾರೆ.
-
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್











Click it and Unblock the Notifications