ಕೊರೊನಾ ಭೀತಿಯಿಂದ ಐಪಿಎಲ್ 2021 ರದ್ದು: ಬಿಸಿಸಿಐ
ನವದೆಹಲಿ, ಮೇ 4: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಉಳಿದ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಹೇಳಿದ್ದಾರೆ.
Recommended Video
ಮೂರು ಫ್ರಾಂಚೈಸಿಯ ನಾಲ್ಕು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಈ ನಡುವೆ ಐಪಿಎಲ್ ರದ್ದುಕೋರಿ ಬಾಂಬೆ ಹೈಕೋರ್ಟ್, ದೆಹಲಿ ಹೈಕೋರ್ಟ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ. ಆಟಗಾರರ ಬಯೋ ಬಬಲ್, ಕೊವಿಡ್ ಸುರಕ್ಷತೆಗೆ ಬಳಸಿರುವ ಸಂಪನ್ಮೂಲಗಳನ್ನು ಹಿಂಪಡೆದು ಜನ ಸಾಮಾನ್ಯರಿಗೆ ಒದಗಿಸುವುದು ಸೂಕ್ತ ಎಂದು ಪಿಐಎಲ್ ನಲ್ಲಿ ಕೋರಲಾಗಿದೆ.
ಐಪಿಎಲ್ ತೊರೆದು ಕೊವಿಡ್ 19 ಹೋರಾಟಕ್ಕೆ ಅಶ್ವಿನ್ ಸಾಥ್
ಮೊದಲ ಹಂತದಲ್ಲಿ ಮುಂಬೈ, ಚೆನ್ನೈನಲ್ಲಿ ಐಪಿಎಲ್ ಪಂದ್ಯಗಳು ನಡೆಸಲಾಗಿತ್ತು. ನಂತರ ದೆಹಲಿ, ಅಹಮದಾಬಾದ್ ಕ್ರೀಡಾಂಗಣಗಳಲ್ಲಿ ನಿಗದಿಯಾಗಿತ್ತು.
ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ ಅವರಿಗೆ ಮೊದಲಿಗೆ ಸೋಂಕು ಕಾಣಿಸಿಕೊಂಡಿದೆ. ನಂತರ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿಗೂ ಕೋವಿಡ್ ಪಾಸಿಟಿವ್ ಬಂದಿತ್ತು.
ಇದಾದ ಬಳಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಮಿತ್ ಮಿಶ್ರಾ, ಸನ್ ರೈಸರ್ಸ್ ಹೈದರಾಬಾದಿನ ವೃದ್ಧಿಮಾನ್ ಸಹಾ ಅವರಿಗೂ ಸೋಂಕು ತಗುಲಿಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಬಯೋ ಬಬಲ್ ಸುರಕ್ಷತೆ ಮೀರಿ ಸೋಂಕು ಕಾಣಿಸಿಕೊಂಡಿದ್ದರಿಂದ ಮೇ 3ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಮುಂದೂಡಲಾಗಿತ್ತು.

ಮೇ 4ರಂದು ಕ್ರಿಕೆಟರ್ಸ್ ಅಲ್ಲದೆ ಸಹಾಯಕ ಸಿಬ್ಬಂದಿ, ಕ್ರೀಡಾಂಗಣದ ಸಿಬ್ಬಂದಿಗಳಿಗೂ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ.
ಆದರೆ, ಪರಿಸ್ಥಿತಿ ತಿಳಿಗೊಂಡರೆ ಮುಂಬೈಗೆ ಉಳಿದ ಪಂದ್ಯಾವಳಿಗಳನ್ನು ಶಿಫ್ಟ್ ಮಾಡಲು ಬಿಸಿಸಿಐ ಸಜ್ಜಾಗಿದೆ. ಜೊತೆಗೆ ಯುಎಇಯಲ್ಲಿ ಮತ್ತೊಮ್ಮೆ ಐಪಿಎಲ್ ನಡೆಸುವ ಸಾಧ್ಯತೆ ಬಗ್ಗೆ ಕೂಡಾ ಚರ್ಚಿಸಲಾಗುತ್ತಿದೆ. ಆದರೆ, ಕೋವಿಡ್ ಭೀತಿಯಿಂದ ಕೆಲ ಫ್ರಾಂಚೈಸಿಗಳು ಮೈದಾನಕ್ಕಿಳಿಯಲು ಹಿಂದೇಟು ಹಾಕಿರುವ ಕಾರಣ ಬಿಸಿಸಿಐ ಗೊಂದಲದಲ್ಲಿದೆ.
ದುರದೃಷ್ಟವಶಾತ್ ಕೆಲವು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಸೋಂಕು ತಗುಲಿದೆ. ಮಾರ್ಗಸೂಚಿಯಂತೆ ಐಸೋಲೇಷನ್ನಲ್ಲಿರಿಸಲಾಗಿದೆ ಹಾಗೂ ಸೂಕ್ತ ನಿಗಾ ವಹಿಸಲಾಗಿದೆ. ಮೈದಾನದ ಸಿಬ್ಬಂದಿಗಳಿಗೂ ನಿಯಮ ಅನ್ವಯವಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗಿದೆ. ಕ್ರಿಕೆಟರ್ಸ್, ಕೋಚ್, ಸಹಾಯಕ ಸಿಬ್ಬಂದಿ, ಅಂಪೈರ್, ಕಾಮೆಂಟೆಟರ್ಸ್ ಸೇರಿದಂತೆ ಎಲ್ಲರೂ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ವಕ್ತಾರರು ಈ ಹಿಂದೆ ಪ್ರತಿಕ್ರಿಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications