ಕೊರೊನಾ ಭೀತಿಯಿಂದ ಐಪಿಎಲ್ 2021 ರದ್ದು: ಬಿಸಿಸಿಐ
ನವದೆಹಲಿ, ಮೇ 4: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 14ನೇ ಆವೃತ್ತಿ ಉಳಿದ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಹೇಳಿದ್ದಾರೆ.
Recommended Video
ಮೂರು ಫ್ರಾಂಚೈಸಿಯ ನಾಲ್ಕು ಆಟಗಾರರು ಹಾಗೂ ಸಹಾಯಕ ಸಿಬ್ಬಂದಿಗಳಿಗೆ ಕೊರೊನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ ತಕ್ಷಣದಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಈ ನಡುವೆ ಐಪಿಎಲ್ ರದ್ದುಕೋರಿ ಬಾಂಬೆ ಹೈಕೋರ್ಟ್, ದೆಹಲಿ ಹೈಕೋರ್ಟ್ ಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ. ಆಟಗಾರರ ಬಯೋ ಬಬಲ್, ಕೊವಿಡ್ ಸುರಕ್ಷತೆಗೆ ಬಳಸಿರುವ ಸಂಪನ್ಮೂಲಗಳನ್ನು ಹಿಂಪಡೆದು ಜನ ಸಾಮಾನ್ಯರಿಗೆ ಒದಗಿಸುವುದು ಸೂಕ್ತ ಎಂದು ಪಿಐಎಲ್ ನಲ್ಲಿ ಕೋರಲಾಗಿದೆ.
ಐಪಿಎಲ್ ತೊರೆದು ಕೊವಿಡ್ 19 ಹೋರಾಟಕ್ಕೆ ಅಶ್ವಿನ್ ಸಾಥ್
ಮೊದಲ ಹಂತದಲ್ಲಿ ಮುಂಬೈ, ಚೆನ್ನೈನಲ್ಲಿ ಐಪಿಎಲ್ ಪಂದ್ಯಗಳು ನಡೆಸಲಾಗಿತ್ತು. ನಂತರ ದೆಹಲಿ, ಅಹಮದಾಬಾದ್ ಕ್ರೀಡಾಂಗಣಗಳಲ್ಲಿ ನಿಗದಿಯಾಗಿತ್ತು.
ಕೋಲ್ಕತಾ ನೈಟ್ ರೈಡರ್ಸ್ ತಂಡದ ವರುಣ್ ಚಕ್ರವರ್ತಿ ಹಾಗೂ ಸಂದೀಪ್ ವಾರಿಯರ್ ಅವರಿಗೆ ಮೊದಲಿಗೆ ಸೋಂಕು ಕಾಣಿಸಿಕೊಂಡಿದೆ. ನಂತರ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಕೋಚ್ ಲಕ್ಷ್ಮೀಪತಿ ಬಾಲಾಜಿಗೂ ಕೋವಿಡ್ ಪಾಸಿಟಿವ್ ಬಂದಿತ್ತು.
ಇದಾದ ಬಳಿ ಡೆಲ್ಲಿ ಕ್ಯಾಪಿಟಲ್ಸ್ ಆಟಗಾರ ಅಮಿತ್ ಮಿಶ್ರಾ, ಸನ್ ರೈಸರ್ಸ್ ಹೈದರಾಬಾದಿನ ವೃದ್ಧಿಮಾನ್ ಸಹಾ ಅವರಿಗೂ ಸೋಂಕು ತಗುಲಿಸಿಕೊಂಡಿರುವುದು ಪತ್ತೆಯಾಗಿದೆ. ಹೀಗಾಗಿ ಬಯೋ ಬಬಲ್ ಸುರಕ್ಷತೆ ಮೀರಿ ಸೋಂಕು ಕಾಣಿಸಿಕೊಂಡಿದ್ದರಿಂದ ಮೇ 3ರಂದು ನಡೆಯಬೇಕಿದ್ದ ಕೋಲ್ಕತ್ತಾ ನೈಟ್ ರೈಡರ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯ ಮುಂದೂಡಲಾಗಿತ್ತು.

ಮೇ 4ರಂದು ಕ್ರಿಕೆಟರ್ಸ್ ಅಲ್ಲದೆ ಸಹಾಯಕ ಸಿಬ್ಬಂದಿ, ಕ್ರೀಡಾಂಗಣದ ಸಿಬ್ಬಂದಿಗಳಿಗೂ ಸೋಂಕು ಇರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಸದ್ಯಕ್ಕೆ ಪಂದ್ಯಾವಳಿಗಳನ್ನು ರದ್ದುಗೊಳಿಸಲಾಗಿದೆ.
ಆದರೆ, ಪರಿಸ್ಥಿತಿ ತಿಳಿಗೊಂಡರೆ ಮುಂಬೈಗೆ ಉಳಿದ ಪಂದ್ಯಾವಳಿಗಳನ್ನು ಶಿಫ್ಟ್ ಮಾಡಲು ಬಿಸಿಸಿಐ ಸಜ್ಜಾಗಿದೆ. ಜೊತೆಗೆ ಯುಎಇಯಲ್ಲಿ ಮತ್ತೊಮ್ಮೆ ಐಪಿಎಲ್ ನಡೆಸುವ ಸಾಧ್ಯತೆ ಬಗ್ಗೆ ಕೂಡಾ ಚರ್ಚಿಸಲಾಗುತ್ತಿದೆ. ಆದರೆ, ಕೋವಿಡ್ ಭೀತಿಯಿಂದ ಕೆಲ ಫ್ರಾಂಚೈಸಿಗಳು ಮೈದಾನಕ್ಕಿಳಿಯಲು ಹಿಂದೇಟು ಹಾಕಿರುವ ಕಾರಣ ಬಿಸಿಸಿಐ ಗೊಂದಲದಲ್ಲಿದೆ.
ದುರದೃಷ್ಟವಶಾತ್ ಕೆಲವು ಆಟಗಾರರು ಹಾಗೂ ಸಿಬ್ಬಂದಿಗಳಿಗೆ ಸೋಂಕು ತಗುಲಿದೆ. ಮಾರ್ಗಸೂಚಿಯಂತೆ ಐಸೋಲೇಷನ್ನಲ್ಲಿರಿಸಲಾಗಿದೆ ಹಾಗೂ ಸೂಕ್ತ ನಿಗಾ ವಹಿಸಲಾಗಿದೆ. ಮೈದಾನದ ಸಿಬ್ಬಂದಿಗಳಿಗೂ ನಿಯಮ ಅನ್ವಯವಾಗಿದ್ದು, ಸೂಕ್ತ ಕ್ರಮ ಜರುಗಿಸಲಾಗಿದೆ. ಕ್ರಿಕೆಟರ್ಸ್, ಕೋಚ್, ಸಹಾಯಕ ಸಿಬ್ಬಂದಿ, ಅಂಪೈರ್, ಕಾಮೆಂಟೆಟರ್ಸ್ ಸೇರಿದಂತೆ ಎಲ್ಲರೂ ನಿಯಮಕ್ಕನುಸಾರವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಬಿಸಿಸಿಐ ವಕ್ತಾರರು ಈ ಹಿಂದೆ ಪ್ರತಿಕ್ರಿಯಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications