ಕಾಲ್ತುಳಿತ 11 ಸಾವು: ಬಿಸಿಸಿಐ ಶನಿವಾರ ಮಹತ್ವದ ಸಭೆ, ಮಾರ್ಗ ಸೂಚಿ ಚರ್ಚೆ
18ನೇ ಆವೃತ್ತಿಯ ಐಪಿಎಲ್ನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಗೆದ್ದುಕೊಂಡಿದೆ. ಆರ್ಸಿಬಿ ಪ್ರಶಸ್ತಿ ಬರವನ್ನು ಕೊನೆಗಳಿಸಿದ ಬಳಿಕ ಅಭಿಮಾನಿಗಳ ಜೊತೆಗೆ ಮ್ಯಾನೇಜ್ಮೆಂಟ್ ಸಂಭ್ರಮಾಚರಣೆಗೆ ಮುಂದಾಯಿತು. ಈ ವೇಳೆ ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರಿಂದ ಕಾಲ್ತುಳಿತ ಸಂಭವಿಸಿದ್ದು, 11 ಜನರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆ ನಡೆದು ದಿನಗಳೇ ಕಳೆದಿವೆ. ಈಗ ಬಿಸಿಸಿಐ ಈ ಬಗ್ಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ.
ಬಿಸಿಸಿಐ, ಐಪಿಎಲ್ ವಿಜೇತ ತಂಡ ವಿಕ್ಟರಿ ಪೆರೇಡ್ ನಡೆಸಿದರೆ, ಯಾವೆಲ್ಲಾ ಮಾನದಂಡಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಶೀಘ್ರದಲ್ಲೇ ಸಭೆಯನ್ನು ಕರೆದು ನಿರ್ಧಾರವನ್ನು ಕೈಗೊಳ್ಳಲಿದೆ. ಇದೇ ವೇಳೆ ಬಿಸಿಸಿಐ ಸಭೆಯಲ್ಲಿ ಇನ್ನು ಹತ್ತು ಹಲವು ವಿಷಯಗಳ ಬಗ್ಗೆ ಚರ್ಚೆಗಳನ್ನು ಸಭೆಯಲ್ಲಿ ನಡೆಸುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಸಿಸಿಐ, ಕಟ್ಟು ನಿಟ್ಟಿನ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಈ ಮೊದಲೇ ತಿಳಿಸಿತ್ತು. ಈಗ ಬಿಸಿಸಿಐ ಸಭೆಯಲ್ಲಿ ವಿಕ್ಟರಿ ಪೆರೆಡ್ ನಡೆಸುವ ಬಗ್ಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳುವ ಸಾಧ್ಯತೆ ಇದೆ. ಈ ಸಭೆಯನ್ನು ಬಿಸಿಸಿಐ ಶನಿವಾರ ನಡೆಸುವ ಸಂಭವವಿದೆ. ಈ ಸಭೆಯಲ್ಲಿ ಬಿಸಿಸಿಐ ಐಪಿಎಲ್ ಗೆದ್ದ ಬಳಿಕ ತಂಡಗಳು ನಡೆಸಬಹುದಾದ ವಿಕ್ಟರ್ ಪೆರೆಡ್ (ಸಂಭ್ರಮಾಚರಣೆ) ಬಗ್ಗೆ ಕಟ್ಟು ನಿಟ್ಟಿನ ನಿರ್ದೇಶನವನ್ನು ಜಾರಿ ಮಾಡಲಿದೆ. ಇಷ್ಟೇ ಅಲ್ಲದೆ ಭಾರತ ಹಾಗೂ ನ್ಯೂಜಿಲೆಂಡ್ ನಡವುಣ ಸರಣಿಯ ಸ್ಥಳಗಳನ್ನು ಸ್ಥಳ ಈ ಸಭೆಯಲ್ಲಿ ಫೈನಲ್ ಮಾಡಲಾಗುತ್ತದೆ.
ಸಭೆಯಲ್ಲಿ ಈ ವಿಷಯಗಳ ಬಗ್ಗೆ ಚರ್ಚೆ
ಬಿಸಿಸಿಐ ಅಪೆಕ್ಸ್ ಕೌನ್ಸಿಲ್ ಮೀಟಿಂಗ್ನಲ್ಲಿ ಐಪಿಎಲ್ನ ಸಂಭ್ರಮಾಚರಣೆಯ ಮಾರ್ಗಸೂಚಿಗಳ ಬಗ್ಗೆ ಚರ್ಚಿಸಲಾಗುತ್ತದೆ. ಇನ್ನು ಭಾರತದಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಇದೇ ಸಭೆಯಲ್ಲಿ ಸ್ಥಳವನ್ನು ನಿರ್ಧರಿಸುವ ಸಾಧ್ಯತೆ ಇದೆ. ದೇಶೀಯ ಋತುವಿನ ವೇಳಾಪಟ್ಟಿಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ದೇಶೀಯ ಋತುವಿಗಾಗಿ ನೀತಿ ಸಂಹಿತಿ ಹಾಗೂ ಆಟಗಾರರಿಗೆ ನೀಡುವ ಭತ್ಯೆಯ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ತಿಳಿದು ಬಂದಿದೆ.

ಜೂನ್ 3 ರಂದು ಅಹಮದಾಬಾದ್ನಲ್ಲಿ ನಡೆದ ಐಪಿಎಲ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 6 ರನ್ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಈ ಸಂಭ್ರಮಾಚರಣೆಯನ್ನು ಆಚರಿಸಲು ಅಭಿಮಾನಿಗಳಿಗೆ ಆರ್ಸಿಬಿ ಕರೆ ನೀಡಿತ್ತು. ಚಿನ್ನಸ್ವಾಮಿ ಮೈದಾನದಲ್ಲಿ ಲಭ್ಯ ಇರುವ ಸ್ಥಳಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಜಮ ಜಮಾವಣೆ ಆಗಿದ್ದರಿಂದ ಕಾಲ್ತುಳಿತ ಸಂಭವಿಸಿ ದುರಂತ ನಡೆದಿದೆ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications