KL Rahul: ಕನ್ನಡಿಗ ಕೆಎಲ್ ರಾಹುಲ್ರನ್ನು ಭಾರತ ತಂಡದಿಂದ ಹೊರಗಿಡಲು ಒಳಸಂಚು?
ಕೆಎಲ್ ರಾಹುಲ್ ಭಾರತ ಕ್ರಿಕೆಟ್ ತಂಡದಲ್ಲಿರುವ ಪ್ರತಿಭಾವಂತ ಆಟಗಾರ. ಅದರಲ್ಲೂ ಏಕದಿನ ಮಾದರಿ ಕ್ರಿಕೆಟ್ನಲ್ಲಿ ಕೆಎಲ್ ರಾಹುಲ್ ಭಾರತ ತಂಡದ ಮಧ್ಯಮ ಕ್ರಮಾಂಕದ ದೊಡ್ಡ ಶಕ್ತಿ. ಅವರು ಮಧ್ಯಮ ಕ್ರಮಾಂಕದಲ್ಲಿ ಆಡಿರುವ ಸಂದರ್ಭದಲ್ಲಿ ಗಳಿಸಿರುವ ರನ್, ಸರಾಸರಿ ನೋಡಿದರೆ ಸಾಕು ಅವರ ಕೊಡುಗೆ ಏನೆಂದು ತಿಳಿಯುತ್ತದೆ. ಕೆಎಲ್ ರಾಹುಲ್ ಒಬ್ಬ ಕ್ಲಾಸ್ ಪ್ಲೇಯರ್, ಅದೇ ಕಾರಣಕ್ಕೆ ಅವರ ಆಟ ತುಂಬಾ ಜನರಿಗೆ ಇಷ್ಟ, ಇಂತಹ ಆಟಗಾರನ ಕ್ರಿಕೆಟ್ ಭವಿಷ್ಯವನ್ನೇ ಮುಗಿಸಲು ಸಂಚು ನಡೆಯುತ್ತಿದೆಯಾ ಎನ್ನುವ ಅನುಮಾನ ಶುರುವಾಗಿದೆ.
ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ತಕ್ಕ ಮಟ್ಟಿಗೆ ಪ್ರದರ್ಶನ ನೀಡಿದ್ದ ಕೆಎಲ್ ರಾಹುಲ್ ರಣಜಿ ಟ್ರೋಫಿಯಲ್ಲಿ ಕರ್ನಾಟಕ ತಂಡದ ಪರ ಒಂದು ಪಂದ್ಯ ಆಡಿದ್ದರು. ಅದಾದ ಬಳಿಕ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಎರಡೂ ಪಂದ್ಯಗಳಲ್ಲಿ ಆಡಿದ್ದರೂ ಅವರಿಂದ ದೊಡ್ಡ ಸ್ಕೋರ್ ಬಂದಿಲ್ಲ.

ಆದರೆ ಕೆಎಲ್ ರಾಹುಲ್ರನ್ನು ಕಡೆಗಣಿಸಲಾಗುತ್ತಿದ್ದು, ಆತನ ಮೇಲೆ ಸುಮ್ಮನೆ ಒತ್ತಡ ಹೇರುವಂತೆ ನಡೆದುಕೊಳ್ಳಲಾಗುತ್ತಿದೆಯಾ ಅನ್ನುವ ಪ್ರಶ್ನೆಗಳು ಹುಟ್ಟಿಕೊಂಡಿವೆ. ಐದನೇ ಕ್ರಮಾಂಕದಲ್ಲಿ ಅದ್ಭುತ ಅಂಕಿ ಸಂಖ್ಯೆಗಳನ್ನು ಹೊಂದಿದ್ದರು ಅವರನ್ನು ಆರನೇ ಕ್ರಮಾಂಕದಲ್ಲಿ ಆಡುವಂತೆ ಮಾಡಲಾಗಿದೆ.
ಅಕ್ಷರ್ ಪಟೇಲ್ಗೆ ಪ್ರಮೋಷನ್ ಕೊಟ್ಟಿದ್ದು ಕೆಎಲ್ ರಾಹುಲ್ರನ್ನು 6ನೇ ಕ್ರಮಾಂಕದಲ್ಲಿ ಆಡಿಸುತ್ತಿರುವುದು ಸಾಕಷ್ಟು ಟೀಕೆಗೆ ಕಾರಣವಾಗಿದೆ. ಇದಕ್ಕೆ ಕೋಚ್ ಗೌತಮ್ ಗಂಭೀರ್ ಕೊಟ್ಟಿರುವ ಕಾರಣ ಎಡಗೈ ಮತ್ತು ಬಲಗೈ ಆಟಗಾರರ ಕಾಂಬಿನೇಷನ್ ಎಂದು. ಟಾಪ್ ಆರ್ಡರ್ ನಲ್ಲಿ ಆಡುತ್ತಿದ್ದ ಜೈಸ್ವಾಲ್ರನ್ನು ಕೈಬಿಟ್ಟು ಶುಭಮನ್ ಗಿಲ್ರನ್ನು ಉಳಿಸಿಕೊಂಡಾಗ ಕಾಂಬಿನೇಷನ್ ಬೇಕಿರಲಿಲ್ವಾ ಅಲ್ಲಿ ಇಲ್ಲದ ನಿಯಮ ಕೆಎಲ್ ರಾಹುಲ್ ವಿಚಾರದಲ್ಲಿ ಮಾತ್ರ ಯಾಕೆ ಎನ್ನುವ ಅನುಮಾನ ಶುರುವಾಗಿದೆ.
ಒಂದು ಕಾಲದಲ್ಲಿ ಕನ್ನಡಿಗರೇ ಪ್ರಾಬಲ್ಯ ಹೊಂದಿದ್ದ ಟೀಂ ಇಂಡಿಯಾದಲ್ಲಿ ಇಂದು ಸ್ಥಾನ ಪಡೆಯುವುದು ಕೂಡ ಕಷ್ಟವಾಗಿದೆ. ರಣಜಿಯಲ್ಲಿ ಉತ್ತಮವಾಗಿ ಆಡಿದರೆ ಭಾರತ ತಂಡದಲ್ಲಿ ಅವಕಾಶ ಎನ್ನುತ್ತಾರೆ, ಆದರೆ ಅದೇ ರಣಜಿಯಲ್ಲಿ 7 ಶತಕ ಸಿಡಿಸಿ ಮಿಂಚಿರುವ ಕರುಣ್ ನಾಯರ್ ಗೆ ಭಾರತ ತಂಡದಲ್ಲಿ ಅವಕಾಶ ಇಲ್ಲ ಎನ್ನುತ್ತಾರೆ. ಇದು ಕೇವಲ ಕರ್ನಾಟಕ ಆಟಗಾರರಿಗೆ ಮಾತ್ರ ಆಗುತ್ತಿರುವ ಅನ್ಯಾಯವಲ್ಲ, ಬಹುತೇಕ ದಕ್ಷಿಣ ಭಾರತದ ರಾಜ್ಯಗಳ ಆಟಗಾರರ ಪರಿಸ್ಥಿತಿ ಇದೇ ಎನ್ನುವ ಆರೋಪ ಕೂಡ ಇದೆ.
ಎರಡು ಪಂದ್ಯಗಳಲ್ಲಿ ರನ್ ಗಳಿಸಿಲ್ಲ ಎನ್ನುವ ಕಾರಣಕ್ಕೆ ಮೂರನೇ ಪಂದ್ಯದಲ್ಲಿ ಕೆಎಲ್ ರಾಹುಲ್ರನ್ನು ಕೈಬಿಟ್ಟರೂ ಅಚ್ಚರಿ ಪಡಬೇಕಿಲ್ಲ. ಕೆಎಲ್ ರಾಹುಲ್ಗೆ ಈ ರೀತಿ ಮಾಡುತ್ತಿರುವುದು ಇದೇ ಮೊದಲೇನಲ್ಲ.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ











Click it and Unblock the Notifications