Mayank Yadav: ಟಿ20 ವಿಶ್ವಕಪ್ ಭಾರತ ತಂಡದಲ್ಲಿ ಮಯಾಂಕ್ ಯಾದವ್?
ಮಯಾಂಕ್ ಯಾದವ್, ಐಪಿಎಲ್ 2024ರ ಸಾಕಷ್ಟು ಸದ್ದು ಮಾಡಿದ ಬೌಲರ್. ತಮ್ಮ ಚೊಚ್ಚಲ ಪಂದ್ಯದಲ್ಲೇ ಗಂಟೆಗೆ 155 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಎದುರಾಳಿಗಳಿಗೆ ಭಯ ಬೀಳಿಸಿದ್ದರು. ಮೊದಲ ಪಂದ್ಯದಲ್ಲೇ ಮೂರು ವಿಕೆಟ್ ಪಡೆದು ಲಕ್ನೋ ಸೂಪರ್ ಜೈಂಟ್ಸ್ ಗೆಲುವಿಗೆ ಕಾರಣವಾಗಿದ್ದರು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೂಡ ಆರ್ ಸಿಬಿ ವಿರುದ್ಧ ಕೂಡ ಗಂಟೆಗೆ 155.8 ಕಿ.ಮೀ. ವೇಗದಲ್ಲಿ ಬೌಲಿಂಗ್ ಮಾಡಿದ್ದರು. ಎರಡನೇ ಪಂದ್ಯದಲ್ಲಿ ಕೂಡ ಮೂರು ವಿಕೆಟ್ ಪಡೆದುಕೊಂಡರು.

ಮಯಾಂಕ್ ಯಾದವ್ ಬೌಲಿಂಗ್ ನೋಡಿದ ಮಾಜಿ ಕ್ರಿಕೆಟಿಗರು, ಹಾಲಿ ಕ್ರಿಕೆಟಿಗರು ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ಪ್ರತಿಭೆ ಶೀಘ್ರದಲ್ಲೇ ಭಾರತ ತಂಡಕ್ಕಾಗಿ ಆಡಲಿದೆ ಎಂದು ಭವಿಷ್ಯ ನುಡಿದಿದ್ದಾರೆ.
ಟಿ20 ವಿಶ್ವಕಪ್ ಆಡೋದು ಪಕ್ಕಾ?
ಐಪಿಎಲ್ ಮುಗಿಯುತ್ತಿದ್ದಂತೆ ಟಿ20 ವಿಶ್ವಕಪ್ ಪಂದ್ಯಾವಳಿ ಆರಂಭವಾಗಲಿದೆ. ಐಪಿಎಲ್ ತಂಡದಲ್ಲಿ ಆಟಗಾರರ ಪ್ರದರ್ಶನ ಭಾರತ ತಂಡದಲ್ಲಿ ಸ್ಥಾನ ಪಡೆಯಲು ಅರ್ಹತೆಯಾಗಿದೆ. ಮಯಾಂಕ್ ಯಾದವ್ ಅವರು ಟಿ20 ವಿಶ್ವಕಪ್ಗೆ ಭಾರತ ತಂಡಕ್ಕೆ ಆಯ್ಕೆಯಾಗುತ್ತಾರಾ ಎನ್ನುವ ಪ್ರಶ್ನೆ ಇದೆ.
ಐಪಿಎಲ್ನಲ್ಲಿ ಉತ್ತಮ ಪ್ರದರ್ಶನ ನೀಡಿಯೇ ಜಸ್ಪ್ರೀತ್ ಬುಮ್ರಾ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್ ಮತ್ತು ರಿಂಕು ಸಿಂಗ್ ಅವರಂತಹ ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿದ್ದು.
ಮಯಾಂಕ್ ಯಾದವ್ ಕೂಡ ಬಿಸಿಸಿಐ ಆಯ್ಕೆದಾರರ ಗಮನ ಸೆಳೆದಿದ್ದಾರೆ ಎಂದು ಮುಖ್ಯ ಆಯ್ಕೆದಾರ ಅಜಿತ್ ಅಗರ್ಕರ್ ಹೇಳಿದ್ದಾರೆ. ಅಲ್ಲದೆ ಅವರು ಭಾರತ ತಂಡಕ್ಕಾಗಿ ಆಡುವುದು ಬಹುತೇಕ ಖಚಿತ ಎನ್ನುವ ಸೂಚನೆ ಕೂಡ ಕೊಟ್ಟರಾ ಎನ್ನುವ ಪ್ರಶ್ನೆ ಕೂಡ ಮೂಡಿದೆ.
ಮಯಾಂಕ್ ಯಾದವ್ ಅವರನ್ನು ಟಿ20 ವಿಶ್ವಕಪ್ಗೆ ಪರಿಗಣಿಸುವ ಸಾಧ್ಯತೆಯ ಬಗ್ಗೆ ಅಗರ್ಕರ್ ಸುಳಿವು ಕೊಟ್ಟಿದ್ದಾರೆ. ಐಪಿಎಲ್ನ ಚೊಚ್ಚಲ ಋತುವಿನಲ್ಲಿ, ಯಾದವ್ ಅವರ ವೇಗದ ಬಗ್ಗೆ ವ್ಯಾಪಕ ಮೆಚ್ಚುಗೆಯನ್ನು ಗಳಿಸಿದ್ದಾರೆ. ಅವರ ಪ್ರಭಾವಶಾಲಿ ಪ್ರದರ್ಶನಗಳು ಅಭಿಮಾನಿಗಳು ಮತ್ತು ಪರಿಣತರ ಮೆಚ್ಚುಗೆಯನ್ನು ಗಳಿಸಿವೆ, ಭಾರತದ ಮಾಜಿ ವೇಗದ ಬೌಲರ್ ಮತ್ತು ಬೌಲಿಂಗ್ ಕೋಚ್ ಟಿ.ಎ. ಸೇಕರ್, ಇಯಾನ್ ಬಿಷಪ್ ಮತ್ತು ಮಾಜಿ ರಾಷ್ಟ್ರೀಯ ಆಯ್ಕೆಗಾರ ಜತಿನ್ ಪರಂಜ್ಪೆ ಟಿ20 ವಿಶ್ವಕಪ್ ತಂಡದಲ್ಲಿ ಮಯಾಂಕ್ ಇರಬೇಕು ಎಂದು ಒತ್ತಾಯಿಸಿದ್ದಾರೆ.
ಹೆಚ್ಚಿನ ಆಟಗಾರರು ಕ್ಯೂನಲ್ಲಿ ಇರುವ ಕಾರಣ ಇದು ದೊಡ್ಡ ವೇದಿಕೆಯಾಗಿದೆ. ನೀವು ವಿಶ್ವದ ಅಗ್ರ ಬ್ಯಾಟರ್ಗಳಿಗೆ ಬೌಲಿಂಗ್ ಮಾಡುತ್ತಿದ್ದೀರಿ ಅಥವಾ ಅಗ್ರ ಬೌಲರ್ಗಳಲ್ಲಿ ಒಬ್ಬರನ್ನು ಎದುರಿಸುತ್ತಿರಬಹುದು, ಇಲ್ಲಿ ನೀವು ಆಟಗಾರನ ಮನೋಧರ್ಮವನ್ನು ನಿರ್ಣಯಿಸಬಹುದು ಮತ್ತು ಅವನು ಅದನ್ನು ಎಷ್ಟು ಸ್ಥಿರವಾಗಿ ಮಾಡಬಹುದು ಅಷ್ಟು ಉತ್ತಮ ಎಂದು ಅಗರ್ಕರ್ ಹೇಳಿದ್ದಾರೆ.
-
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Petrol Diesel Shortage: ಪೆಟ್ರೋಲ್, ಡೀಸೆಲ್ ಖಾಲಿಯಾಗುತ್ತೆ ಅನ್ನೋ ಸುಳ್ಳು ವದಂತಿಗಳಿಗೆ ಕಿವಿಕೊಡಬೇಡಿ; ಇಂಡಿಯನ್ ಆಯಿಲ್ -
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ











Click it and Unblock the Notifications