Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ
Ish Sodhi: ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಆರಂಭವಾಗುವ ಮುನ್ನ ನ್ಯೂಜಿಲೆಂಡ್ ತಂಡದ ಪ್ರಮುಖ ಲೆಗ್-ಸ್ಪಿನ್ನರ್ ಇಶ್ ಸೋಧಿ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ಈ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡುತ್ತಿದೆ.
ಪಂದ್ಯ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹೇಳುವ ಸಮಯದಲ್ಲಿ ಈ ಘಟನೆ ನಡೆದಿದೆ. ಇನ್ನೂ ನ್ಯೂಜಿಲೆಂಡ್ ತಂಡದ ಇಶ್ ಸೋಧಿ ಅವರ ಈ ಭಾವನಾತ್ಮಕ ಕ್ಷಣ ಜಗತ್ತಿನಾದ್ಯಂತ ಕ್ರೀಡಾಭಿಮಾನಿಗಳ ಗಮನ ಸೆಳೆದಿದೆ. ಇಶ್ ಸೋಧಿ ಅವರು ಜನಿಸಿದ್ದು ಪಂಜಾಬ್ನ ಲೂಧಿಯಾನದಲ್ಲಿ. ತಮ್ಮ ಬಾಲ್ಯದ ಆರಂಭಿಕ ದಿನಗಳನ್ನು ಭಾರತದಲ್ಲಿ ಕಳೆದ ಅವರು, ನಂತರ ತಮ್ಮ ಕುಟುಂಬದೊಂದಿಗೆ ನ್ಯೂಜಿಲೆಂಡ್ಗೆ ತೆರಳಿದರು.

ಇದೀಗ ಅದೇ ಭಾರತದ ಮಣ್ಣಿನಲ್ಲಿ, ಅಹಮದಾಬಾದ್ನ ಐತಿಹಾಸಿಕ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ವಿಶ್ವಕಪ್ ಫೈನಲ್ ಪಂದ್ಯವನ್ನು ಆಡುವುದು ಅವರ ಪಾಲಿಗೆ ದೊಡ್ಡ ಕನಸಾಗಿತ್ತು. ಅದರಂತೆಯೇ ಕನಸು ನೆರವೇರಿದಾಗ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ವರದಿಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿ ಕ್ರೀಡಾಭಿಮಾನಿಗಳ ಮನ ಗೆದ್ದಿದೆ.
ಕಣ್ಣೀರಿಡಲು ಕಾರಣ ಏನು?
ತನ್ನ ಹುಟ್ಟಿದ ನೆಲದಲ್ಲಿ ಆಡುತ್ತಿರುವ ಹೆಮ್ಮೆ, ಪಂದ್ಯದ ಮಹತ್ವ ಮತ್ತು ನ್ಯೂಜಿಲೆಂಡ್ ತಂಡವನ್ನು ಪ್ರತಿನಿಧಿಸುತ್ತಿರುವ ಜವಾಬ್ದಾರಿ, ಈ ಎಲ್ಲಾ ಭಾವನೆಗಳು ಆ ಕ್ಷಣದಲ್ಲಿ ಇಶ್ ಸೋಧಿ ಅವರನ್ನು ಭಾವುಕರನ್ನಾಗಿಸಿದವು. ತನ್ನ ತಾಯ್ನಾಡಿನಲ್ಲೇ ಇಂತಹ ದೊಡ್ಡ ವೇದಿಕೆಯಲ್ಲಿ ನಿಂತು ದೇಶಕ್ಕಾಗಿ ಹೋರಾಡಲು ಸಿದ್ಧರಾದಾಗ, ಅವರು ತನ್ನ ಬಾಲ್ಯದ ನೆನಪುಗಳನ್ನು ಮೆಲುಕು ಹಾಕಿರಬಹುದು ಎಂಬುದು ಅಭಿಮಾನಿಗಳ ಅಭಿಪ್ರಾಯ.
ಇಶ್ ಸೋಧಿ ಕಣ್ಣೀರಿಟ್ಟ ವಿಡಿಯೋ ವೈರಲ್
ಇಶ್ ಸೋಧಿ ಅವರ ಈ ಭಾವುಕ ದೃಶ್ಯವನ್ನು ಕ್ಯಾಮೆರಾಗಳು ಸೆರೆಹಿಡಿದಿದ್ದು, ಆ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಒಬ್ಬ ಆಟಗಾರ ತನ್ನ ವೃತ್ತಿಜೀವನದಲ್ಲಿ ಬೆಳೆದು ಬಂದ ಹಾದಿಯನ್ನು ಮತ್ತು ತನ್ನ ಬೇರುಗಳನ್ನು ಮರೆಯುವುದಿಲ್ಲ ಎಂಬುದಕ್ಕೆ ಇದು ಸಾಕ್ಷಿಯಾಗಿದೆ. ಅಭಿಮಾನಿಗಳು ಸೋಧಿ ಅವರ ಈ ನಡವಳಿಕೆಯನ್ನು ಶ್ಲಾಘಿಸಿದ್ದು, ಕ್ರೀಡೆಯು ಗಡಿಗಳನ್ನು ಮೀರಿ ಹೇಗೆ ಮನುಷ್ಯನನ್ನು ಭಾವನಾತ್ಮಕವಾಗಿ ಬಂಧಿಸುತ್ತದೆ ಎಂಬುದಕ್ಕೆ ಇದು ಅತ್ಯುತ್ತಮ ಉದಾಹರಣೆ ಎಂದು ಬಣ್ಣಿಸಿದ್ದಾರೆ.
ಅಭಿಮಾನಿಗಳಿಂದ ಮೆಚ್ಚುಗೆಗಳ ಸುರಿಮಳೆ
"ಕ್ರೀಡಾಪಟುವಾಗಿ ಯಶಸ್ಸಿನ ಉತ್ತುಂಗದಲ್ಲಿದ್ದರೂ, ತನ್ನ ಹುಟ್ಟಿದ ನಾಡಿನ ಮೇಲೆ ಇಶ್ ಸೋಧಿ ಹೊಂದಿರುವ ಗೌರವ ಮತ್ತು ಪ್ರೀತಿ ನಿಜಕ್ಕೂ ಮೆಚ್ಚುವಂತಹದ್ದು," ಎಂದು ಸಾಮಾಜಿಕ ಜಾಲತಾಣಗಳಲ್ಲಿ ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ. ಪಂದ್ಯ ಮುಗದರೂ ಸಹ ಈ ವಿಡಿಯೋ ಮಾತ್ರ ಇದೀಗ ಎಲ್ಲೆಡೆ ವೈರಲ್ ಆಗುತ್ತಲಿದೆ. ತುಂಬಾ ಮಂದಿ ಇದನ್ನು ವ್ಯಾಟ್ಸಪ್, ಇನ್ಸ್ಟಾಗ್ರಾಂ ಸೇರಿದಂತೆ ಇನ್ನಿತರೆ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡು, ಮೆಚ್ಚುಗೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.
ಇಶ್ ಸೋಧಿ ಜನನದ ವಿವರ
ಇಶ್ ಸೋಧಿ ನ್ಯೂಜಿಲೆಂಡ್ ತಂಡದ ಪ್ರಮುಖ ಲೆಗ್-ಸ್ಪಿನ್ನರ್. ಇವರು ಮೂಲತಃ ಭಾರತೀಯ ಮೂಲದವರಾಗಿದ್ದು, ಪಂಜಾಬ್ನ ಲೂಧಿಯಾನದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲೇ ಕುಟುಂಬದೊಂದಿಗೆ ನ್ಯೂಜಿಲೆಂಡ್ಗೆ ವಲಸೆ ಹೋದ ಇಶ್ ಸೋಧಿ, ಅಲ್ಲಿನ ಕ್ರಿಕೆಟ್ ವ್ಯವಸ್ಥೆಯಲ್ಲಿ ಬೆಳೆದು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡರು. ಐಸಿಸಿ ರ್ಯಾಂಕಿಂಗ್ನಲ್ಲಿ ಹಲವು ಬಾರಿ ಅಗ್ರಗಣ್ಯ ಸ್ಪಿನ್ನರ್ಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿರುವ ಅವರು, ಕಿವೀಸ್ ತಂಡದ ಕಠಿಣ ಪರಿಸ್ಥಿತಿಯಲ್ಲಿ ಉತ್ತಮ ಬೌಲಿಂಗ್ ದಾಳಿ ಮಾಡುವ ಆಟಗಾರರಲ್ಲಿ ಒಬ್ಬರು.
Bro mirgated to New Zealand to become a cricketer, now he is the cricketer of kiwis but playing against his nation India, made him cry on the national anthem. 💔pic.twitter.com/XQojhJMgqk
— (@wokenupkohli) March 8, 2026
ವಾಸ್ತವವೇನು?
ಇಶ್ ಸೋಧಿ ಅತ್ತಿರುವುದು ನಿಜವೇ ಆದರೂ ಇದು ಎಲ್ಲರೂ ಈಗ ಚರ್ಚಿಸುತ್ತಿರುವಂತೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಭಾನುವಾರ ಟಿ20 ವಿಶ್ವಕಪ್ ಫೈನಲ್ ಪಂದ್ಯ ಆರಂಭವಾಗುವ ಮುನ್ನ ನಡೆದ ಘಟನೆ ಅಲ್ಲ. ಫೆ 14 ರಂದು ದಕ್ಷಿಣ ಆಫ್ರಿಕಾ ವಿರುದ್ಧ ನಡೆದಿದ್ದ ಪಂದ್ಯದಲ್ಲಿ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದರು. ಅದೇ ವಿಡಿಯೊ ಇದೀಗ ಎಲ್ಲೆಡೆ ಹರಿದಾಡುತ್ತಿದೆ ಎಂದು ಫ್ಯಾಕ್ಟ್ಚೆಕ್ ಮಾಡುವ ವೆಬ್ಸೈಟ್ 'ನ್ಯೂಸ್ಮೀಟರ್' ವರದಿ ಮಾಡಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications