ರೋಹಿತ್ಗೆ ಕೊರೊನಾ... ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯಕ್ಕೆ ಈತನೇ ನಾಯಕ
ಲಂಡನ್, ಜೂನ್ 29: ಭಾರತ ತಂಡದ ರೋಹಿತ್ ಶರ್ಮಾ ಕೋವಿಡ್ 19ಗೆ ತುತ್ತಾಗಿರುವುದಿರಂದ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯಕ್ಕೆ ವೇಗಿ ಜಸ್ಪ್ರೀತ್ ಬುಮ್ರಾ ನಾಯಕನಾಗಿವ ಸಾಧ್ಯತೆಯಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಕಳೆದ ವರ್ಷ ಅಪೂರ್ಣಗೊಂಡಿದ್ದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕೊನೆಯ ಪಂದ್ಯ ಬಾಕಿ ಉಳಿದುಕೊಂಡಿದೆ. ಇದೀಗ ಸೀಮಿತ ಓವರ್ಗಳ ಸರಣಿಗೆ ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲಿಗೆ ಮುಂದೂಡಲ್ಪಟ್ಟಿದ್ದ ಟೆಸ್ಟ್ ಪಂದ್ಯವನ್ನು ಜುಲೈ 1 ರಿಂದ ಬರ್ಮಿಂಗ್ಹ್ಯಾಮ್ನಲ್ಲಿ ಎಡ್ಬಸ್ಟನ್ನಲ್ಲಿನ ಆಡಲಿದೆ.
ಕಳೆದ ವಾರ ತಂಡದ ನಾಯಕ ರೋಹಿತ್ ಶರ್ಮಾಗೆ ಕೊರೊನಾ ಸೋಂಕು ತಗುಲಿದ್ದು, ಇನ್ನೂ ಸಂಪೂರ್ಣವಾಗಿ ಚೇತಿಸಿಕೊಳ್ಳದ ಕಾರಣ ವೇಗಿ ಜಸ್ಪ್ರೀತ್ ಬುಮ್ರಾಗೆ ತಂಡದ ನಾಯಕತ್ವವನ್ನು ನೀಡಲಾಗಿದೆ. ಬುಧವಾರ ನಡೆದ ತಂಡದ ಮೀಟಿಂಗ್ನಲ್ಲಿ ಈ ವಿಚಾರವನ್ನು ಮ್ಯಾನೇಜ್ಮೆಂಟ್ ಬುಮ್ರಾಗೆ ತಿಳಿಸಿದೆ ಎಂದು ಮೂಲಗಳು ಮಾಧ್ಯಮಕ್ಕೆ ತಿಳಿಸಿವೆ.

ಬುಮ್ರಾ ಕಳೆದ ಸರಣಿಯಲ್ಲಿ 4 ಪಂದ್ಯಗಳಿಂದ 18 ವಿಕೆಟ್ ಪಡೆದು ಭಾರತದ ಗರಿಷ್ಠ ವಿಕೆಟ್ ಟೇಕರ್ ಆಗಿದ್ದರು. ಬುಮ್ರಾ ಈ ಹಿಂದೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉಪನಾಯಕನಾಗಿದ್ದರು. ಈ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ನಾಯಕನಾಗಿ ತಂಡವನ್ನು ಮುನ್ನಡೆಸಿದ್ದರು. ಇದೀಗ ಟೆಸ್ಟ್ ತಂಡವನ್ನು ಮುನ್ನಡೆಸುವ ಅವಕಾಶ ಒದಗಿ ಬಂದಿದೆ.
ಇನ್ನು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡಕ್ಕೆ ಸೇರಿಕೊಂಡಿದ್ದಾರೆ. ಇನ್ನು ಸರಣಿಗೂ ಮುನ್ನವೇ ತಂಡದ ಅಗ್ರ ಆರಂಭಿಕ ಬ್ಯಾಟರ್ ಕೆಎಲ್ ರಾಹುಲ್ ಗಾಯದಿಂದ ಹೊರಬಿದ್ದಿದ್ದಾರೆ. ಹಾಗಾಗಿ ಯುವ ಆರಂಭಿಕ ಬ್ಯಾಟರ್ ಶುಬ್ಮನ್ ಗಿಲ್, ಮಯಾಂಕ್ ಅಗರ್ವಾಲ್ ಜೊತೆಗೆ ಇನ್ನಿಂಗ್ಸ್ ಆರಂಭಿಸುವ ಅನಿವಾರ್ಯತೆ ಎದುರಾಗಿದೆ. ಪೂಜಾರ ಹಾಗೂ ಕೊಹ್ಲಿ ತಮ್ಮ 3 ಮತ್ತು 4ರಲ್ಲಿ, ಹನುಮ ವಿಹಾರಿ 5, ರಿಷಭ್ ಪಂತ್ 6ರಲ್ಲಿ ಆಡುವ ಸಾಧ್ಯತೆಯಿದೆ.
ಇನ್ನು ಸರಣಿಯಲ್ಲಿ ಭಾರತ ಈಗಾಗಲೇ 2-1ರಲ್ಲಿ ಸರಣಿಯಲ್ಲಿ ಮುನ್ನಡೆ ಪಡೆದುಕೊಂಡಿದೆ. ಸರಣಿಯನ್ನು ಉಳಿಸಿಕೊಳ್ಳಲು ಈ ಪಂದ್ಯದಲ್ಲಿ ಡ್ರಾ ಸಾಧಿಸುವ ಅನಿವಾರ್ಯತೆಯಿದೆ. ಆದರೆ ಇಂಗ್ಲೆಂಡ್ ಪ್ರಸ್ತುತ ವಿಶ್ವಟೆಸ್ಟ್ ಚಾಂಪಿಯನ್ ನ್ಯೂಜಿಲ್ಯಾಂಡ್ ವಿರುದ್ಧ 3-0ಯಲ್ಲಿ ಟೆಸ್ಟ್ ಸರಣಿ ಜಯಿಸಿರುವುದನ್ನು ನೋಡಿದರೆ ಭಾರತಕ್ಕೆ ಈ ಪಂದ್ಯವನ್ನು ಉಳಿಸಿಕೊಳ್ಳುವುದು ಖಂಡಿತ ಕಬ್ಬಿಣದ ಕಡಲೆಯಾಗಿದೆ.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications