Jasprit Bumrah: ಜೂನಿಯರ್ ಬುಮ್ರಾನ ಫಸ್ಟ್ ಲುಕ್ ಲೀಕ್: ಸಾಮಾಜಿಕ ತಾಣಾಗಳಲ್ಲಿ ಫೋಟೋ ಸಖತ್ ವೈರಲ್
ಐಪಿಎಲ್ 2024ರ ಪಂದ್ಯಗಳು ನಡೆಯುತ್ತಿವೆ. ಈ ವೇಳೆ ಮುಂಬೈ ಇಂಡಿಯನ್ಸ್ ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡದ ನಡುವೆ ಫೈಟ್ ನಡೆದಿತ್ತು. ಈ ಪಂದ್ಯದಲ್ಲಿ ಮತ್ತೆ ಮುಂಬೈ ಗೆಲುವಿನ ಟ್ರ್ಯಾಕ್ಗೆ ಮರಳಿತು. ಎಂಐ ಏಳು ವಿಕೆಟ್ಗಳಿಂದ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮತ್ತೊಮ್ಮೆ ಮುಂಬೈ ವೇಗಿ ಜಸ್ಪ್ರೀತ್ ಬುಮ್ರಾ ಅದ್ಭುತ ಬೌಲಿಂಗ್ ಮಾಡಿದರು.
ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ತಮ್ಮ ಬಿಗುವಿನ ದಾಳಿಯಿಂದ ಗಮನ ಸೆಳೆದಿದ್ದಾರೆ. ಎಸ್ಆರ್ಎಚ್ ಹಾಗೂ ಎಂಐ ಪಂದ್ಯವನ್ನು ವೀಕ್ಷಿಸಲು, ಬುಮ್ರಾ ಪತ್ನಿ ಸಂಜನಾ ಗಣೇಶನ್ ಕೂಡ ವಾಂಖೆಡೆ ಸ್ಟೇಡಿಯಂಗೆ ಆಗಮಿಸಿದ್ದರು. ಈ ಸಮಯದಲ್ಲಿ, ಬುಮ್ರಾ ಅವರ ಮಗನ ಒಂದು ನೋಟವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಯಿತು.

ಸಾಮಾಜಿಕ ತಾಣದಲ್ಲಿ ಫೋಟೋ ವೈರಲ್
ಜಸ್ಪ್ರಿತ್ ಬುಮ್ರಾ ಅವರ ಮಗ ಅಂಗದ್ ತನ್ನ ತಾಯಿ ಸಂಜನಾಳ ಮಡಿಲಲ್ಲಿ ಕುಳಿತಿದ್ದ. ಮೊದಲ ಬಾರಿಗೆ, ಅಭಿಮಾನಿಗಳು ಬುಮ್ರಾ ಅವರ ಮಗನ ಮುಖವನ್ನು ನೋಡಿದರು. ಈ ಪಂದ್ಯದ ದಿನ ಬುಮ್ರಾ ಪತ್ನಿ ಸಂಜನಾ ಅವರ ಹುಟ್ಟುಹಬ್ಬವೂ ಆಗಿತ್ತು. ಅಂಗದ್ ಅವರು 4 ಸೆಪ್ಟೆಂಬರ್ 2023 ರಂದು ಜನಿಸಿದ್ದರು.
ಮುಂಬೈ ಇಂಡಿಯನ್ಸ್ ಈ ಋತುವಿನ ತನ್ನ 12 ನೇ ಪಂದ್ಯವನ್ನು ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ವಾಂಖೆಡೆ ಸ್ಟೇಡಿಯಂನಲ್ಲಿ ಆಡಿತು. ಮುಂಬೈ ತಂಡವು ಹೈದರಾಬಾದ್ ಅನ್ನು ಸೋಲಿಸುವ ಮೂಲಕ ಋತುವಿನ ನಾಲ್ಕನೇ ಗೆಲುವು ದಾಖಲಿಸಿತು. ಈ ಪಂದ್ಯದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರ ಪುತ್ರ ಅಂಗದ್ ಅವರ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

ಮುಂಬೈಗೆ ಭರ್ಜರಿ ಜಯ
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 173 ರನ್ ಗಳಿಸಿತು. ಈ ಪಂದ್ಯದಲ್ಲಿ ಬಲಿಷ್ಠ ಎನಿಸಿದ್ದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ವಿಫಲವಾಯಿತು. ಅಭಿಷೇಕ್ ಶರ್ಮಾರಿಂದ ಹಿಡಿದು ಹೆನ್ರಿಚ್ ಕ್ಲಾಸೆನ್ ವರೆಗೆ ವಿಶೇಷ ಸಾಧನೆ ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಪರ ಪಿಯೂಷ್ ಚಾವ್ಲಾ ಮತ್ತು ಹಾರ್ದಿಕ್ ಪಾಂಡ್ಯ ತಲಾ 3 ವಿಕೆಟ್ ಪಡೆದರು.
ಸೂರ್ಯ ಶತಕ
ಇದಾದ ಬಳಿಕ ಮುಂಬೈ ಇಂಡಿಯನ್ಸ್ 17.2 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು ಜಯ ಸಾಧಿಸಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ನಡೆಸಿ ಶತಕ ಸಿಡಿಸಿದ್ದರು. ಈ ಪಂದ್ಯದಲ್ಲಿ ಸೂರ್ಯ ಕೇವಲ 51 ಎಸೆತಗಳಲ್ಲಿ 102 ರನ್ ಗಳಿಸಿದರು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications