ಕಪಿಲ್ ದೇವ್ ಬಳಿಕ ಭಾರತ ಟೆಸ್ಟ್ ತಂಡಕ್ಕೆ ನಾಯಕನಾದ 2ನೇ ವೇಗಿ ಬುಮ್ರಾ
ಎಡ್ಜ್ಬಾಸ್ಟನ್ ,ಜೂನ್ 30: ಇಂಗ್ಲೆಂಡ್ ವಿರುದ್ಧ ಶುಕ್ರವಾರದಿಂದ ಆರಂಭಗೊಳ್ಳಲಿರುವ 5ನೇ ಹಾಗೂ ಟೆಸ್ಟ್ ಪಂದ್ಯದಲ್ಲಿ ಖಾಯಂ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ವೇಗಿ ಜಸ್ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಗುರುವಾರ ಭಾರತೀಯ ಕ್ರಿಕೆಟ್ ಮಂಡಳಿ ಟ್ವಿಟರ್ನಲ್ಲಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದೆ. ಈ ಪಂದ್ಯಕ್ಕೆ ಉಪನಾಯಕನಾಗಿ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂಥ್ರನ್ನು ನೇಮಕ ಮಾಡಲಾಗಿದೆ. ಕಳೆದ ವಾರ ರೋಹಿತ್ ಶರ್ಮಾ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದು, ಸಂಪೂರ್ಣ ಗುಣಮುಖರಾಗದ ಕಾರಣ ಅವರು ವಿಶ್ರಾಂತಿಯಲ್ಲಿರಲಿದ್ದಾರೆ.
35 ವರ್ಷಗಳ ನಂತರ ವೇಗದ ಬೌಲರ್ಗೆ ನಾಯಕತ್ವ; ಜಸ್ಪ್ರೀತ್ ಬುಮ್ರಾ ನಾಯಕನಾಗಿ ಆಯ್ಕೆಯಾಗುವ ಮೂಲಕ 35 ವರ್ಷಗಳ ಬಳಿಕ ಭಾರತದ ನಾಯಕನಾದ ವೇಗದ ಬೌಲರ್ ಎಂಬ ಹಿರಿಮೆ ಪಾತ್ರರಾಗಿದ್ದಾರೆ. ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ನಾಯಕ ಕಪಿಲ್ ದೇವ್ ಈ ಹಿಂದೆ ಕೊನೆಯ ಬಾರಿ ಭಾರತ ತಂಡವನ್ನು ಮುನ್ನಡೆಸಿದ್ದ ವೇಗದ ಬೌಲರ್ ಆಗಿದ್ದರು.

ಎರಡು ತಂಡಗಳಿಗೂ ಹೊಸ ನಾಯಕರು; ಕಳೆದ ವರ್ಷ ಕೋವಿಡ್ 19 ಕಾರಣ 5 ಪಂದ್ಯಗಳ ಸರಣಿ ಇನ್ನು ಒಂದು ಪಂದ್ಯ ಇದ್ದಂತೆಯೇ ಮುಂದೂಡಲ್ಪಟ್ಟಿತ್ತು. ಆಗ ವಿರಾಟ್ ಕೊಹ್ಲಿ ಭಾರತ ತಂಡವನ್ನು ಮುನ್ನಡೆಸಿದ್ದರೆ, ಇಂಗ್ಲೆಂಡ್ ತಂಡವನ್ನು ಜೋ ರೂಟ್ ಮುನ್ನಡೆಸಿದ್ದರು. ಇದೀಗ ಇಂಗ್ಲೆಂಡ್ ತಂಡಕ್ಕೆ ಬೆನ್ ಸ್ಟೋಕ್ಸ್ ಮತ್ತು ಭಾರತ ತಂಡವನ್ನು ಬುಮ್ರಾ ಮುನ್ನಡೆಸಲಿದ್ದಾರೆ.
ಇನ್ನೂ ಭಾರತ ತಂಡ ಈಗಾಗಲೇ 2-1ರಲ್ಲಿ ಮುನ್ನಡೆ ಪಡೆದುಕೊಂಡಿದೆ. ಸರಣಿಯ ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯವಾದರೆ, 2ನೇ ಟೆಸ್ಟ್ ಪಂದ್ಯವನ್ನು ಭಾರತ ಗೆಲುವು ಸಾಧಿಸಿ ಮುನ್ನಡೆ ಪಡೆದುಕೊಂಡಿತ್ತು. 3ನೇ ಪಂದ್ಯದಲ್ಲಿ ಇಂಗ್ಲೆಡ್ ಇನ್ನಿಂಗ್ಸ್ ಮತ್ತು 76 ರನ್ಗಳಿಂದ ಗೆದ್ದು 1-1ರಲ್ಲಿ ಸಮಬಲ ಸಾಧಿಸಿತ್ತು. ಆದರೆ ಲಂಡನ್ನಲ್ಲಿ ನಡೆದಿದ್ದ 4ನೇ ಪಂದ್ಯದಲ್ಲಿ 157 ರನ್ಗಳ ಭರ್ಜರಿ ಜಯ ಸಾಧಿಸಿ ಭಾರತ 2-1ರಲ್ಲಿ ಸರಣಿಯಲ್ಲಿ ಮುನ್ನಡೆ ಸಾಧಿಸಿತ್ತು.

ಭಾರತ ತಂಡ: ಜಸ್ಪ್ರೀತ್ ಬುಮ್ರಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರಿಷಭ್ ಪಂತ್ (ಉಪನಾಯಕ) (WK), ಕೆ.ಎಸ್.ಭರತ್ (WK), ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಪ್ರಸಿದ್ಧ್ ಕೃಷ್ಣ, ಮಯಾಂಕ್ ಅಗರ್ವಾಲ್
ಇಂಗ್ಲೆಂಡ್ ತಂಡ: ಅಲೆಕ್ಸ್ ಲೀಸ್, ಝಾಕ್ ಕ್ರಾಲಿ, ಓಲಿ ಪೋಪ್, ಜೋ ರೂಟ್, ಬೆನ್ ಸ್ಟೋಕ್ಸ್ (ನಾಯಕ), ಜಾನಿ ಬೈರ್ಸ್ಟೋ, ಸ್ಯಾಮ್ ಬಿಲ್ಲಿಂಗ್ಸ್ (ವಿಕೆಟ್ ಕೀಪರ್), ಜ್ಯಾಕ್ ಲೀಚ್, ಮ್ಯಾಟಿ ಪಾಟ್ಸ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications