ಏಷ್ಯಾ ಬಾಸ್ಕೆಟ್ಬಾಲ್ ಅಧ್ಯಕ್ಷ ಹುದ್ದೆಗೇರಿದ ಮೊದಲ ಭಾರತೀಯ ಕೆ. ಗೋವಿಂದರಾಜು
ಕೌಲಾಲಂಪುರ, ಮೇ 24: ಫೆಡರೇಶನ್ ಆಫ್ ಇಂಟರ್ನ್ಯಾಷನಲ್ ಬಾಸ್ಕೆಟ್ ಬಾಲ್ ಅಸೋಸಿಯೇಷನ್ (ಎಫ್ಐಬಿಎ) ಏಷ್ಯಾದ ನೂತನ ಅಧ್ಯಕ್ಷರಾಗಿ ಕನ್ನಡಿಗ, ವಿಧಾನ ಪರಿಷತ್ ಸದಸ್ಯ ಡಾ. ಕೆ. ಗೋವಿಂದರಾಜು ಅಧಿಕೃತವಾಗಿ ಆಯ್ಕೆಯಾಗಿದ್ದಾರೆ.
ಫಿಬಾ ಏಷಿಯಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ @Iam_KGovindaraj ಅವರಿಗೆ ಅಭಿನಂದನೆಗಳು.
— Siddaramaiah (@siddaramaiah) May 23, 2023
ಮೊದಲ ಬಾರಿಗೆ ಕನ್ನಡಿಗನೊಬ್ಬ ಫಿಬಾ ಏಷಿಯಾದ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದು ನಾಡಿಗೆ ಹೆಮ್ಮೆಯ ಸಂಗತಿ. #FIBAAsia pic.twitter.com/Y9Zvdm5gyV
ಮಂಗಳವಾರ, ಮೇ 23ರಂದು ಕೌಲಾಲಂಪುರದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಕೆ. ಗೋವಿಂದರಾಜು ಸೇರಿ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಏಷ್ಯಾ ಬಾಸ್ಕೆಟ್ಬಾಲ್ ಅಧ್ಯಕ್ಷ ಸ್ಥಾನಕ್ಕೇರಿದ ಮೊದಲ ಭಾರತೀಯ ಎನ್ನುವ ಹಿರಿಮೆಗೆ ಕೆ. ಗೋವಿಂದರಾಜು ಪಾತ್ರರಾಗಿದ್ದಾರೆ.

ಈ ವರ್ಷ ಫೆಬ್ರವರಿಯಲ್ಲಿ ಫಿಬಾ ಏಷ್ಯಾ ಅಧ್ಯಕ್ಷ ಹುದ್ದೆಗೆ ಕೆ. ಗೋವಿಂದರಾಜು ಅವರ ಹೆಸರು ನಾಮನಿರ್ದೇಶನಗೊಂಡಿತ್ತು. ಕತಾರ್ನ ಶೇಕ್ ಸೌದ್ ಅಲಿ ಅವರಿಂದ ತೆರವಾದ ಹುದ್ದೆಯನ್ನು ಕನ್ನಡಿಗ ಗೋವಿಂದರಾಜು ಅಲಂಕರಿಸಿದ್ದಾರೆ. ಫಿಬಾ ಏಷ್ಯಾದಡಿ 45 ಸದಸ್ಯ ರಾಷ್ಟ್ರಗಳ ಫೆಡರೇಶನ್ಗಳಿವೆ.
ಕೆ. ಗೋವಿಂದರಾಜು ಅವರು 2013ರಿಂದ 2018 ರವರೆಗೆ ಅಧಿಕಾರವಧಿಯಲ್ಲಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ಗೋವಿಂದರಾಜು ಅವರು ಪ್ರಸ್ತುತ ಭಾರತೀಯ ಒಲಿಂಪಿಕ್ ಅಸೋಸಿಯೇಷನ್ನ ಉಪಾಧ್ಯಕ್ಷರಾಗಿ ಮತ್ತು ಬಾಸ್ಕೆಟ್ಬಾಲ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಲ್ಲದೇ ಕರ್ನಾಟಕ ವಿಧಾನ ಪರಿಷತ್ನ ಕಾಂಗ್ರೆಸ್ ಸದಸ್ಯರಾಗಿದ್ದಾರೆ.
ಫಿಬಾ ಏಷ್ಯಾ ಅಧ್ಯಕ್ಷರಾದ ಗೋವಿಂದರಾಜು ಅಭಿನಂದಿಸಿದ ಸಿದ್ದರಾಮಯ್ಯ
ಕೆ. ಗೋವಿಂದರಾಜು ಅವರು ಫಿಬಾ ಏಷ್ಯಾ ಅಧ್ಯಕ್ಷರಾಗಿ ಆಯ್ಕೆಯಾಗಿರುವುದಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತೋಷ ವ್ಯಕ್ತಪಡಿಸಿದ್ದಾರೆ.
"ಫಿಬಾ ಏಷ್ಯಾದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕೆ. ಗೋವಿಂದರಾಜು ಅವರಿಗೆ ಅಭಿನಂದನೆಗಳು. ಮೊದಲ ಬಾರಿಗೆ ಕನ್ನಡಿಗನೊಬ್ಬ ಫಿಬಾ ಏಷ್ಯಾದ ಅಧ್ಯಕ್ಷ ಸ್ಥಾನ ಅಲಂಕರಿಸಿರುವುದು ನಾಡಿಗೆ ಹೆಮ್ಮೆಯ ಸಂಗತಿ," ಎಂದು ಟ್ವೀಟ್ ಮೂಲಕ ಅಭಿನಂದಿಸಿದ್ದಾರೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications