Vijay Hazare Trophy: ಮತ್ತೆ ಮಯಾಂಕ್ ಶತಕ; ನಾಗಾಲ್ಯಾಂಡ್ ವಿರುದ್ಧ ಗೆದ್ದು ಕ್ವಾರ್ಟರ್ ಫೈನಲ್ ತಲುಪಿದ ಕರ್ನಾಟಕ
ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕದ ಗೆಲುವಿನ ಓಟ ಮುಂದುವರೆದಿದೆ. ಭಾನುವಾರ ನಡೆದ ಲೀಗ್ ಹಂತದ ಕೊನೆಯ ಸುತ್ತಿನ ಪಂದ್ಯದಲ್ಲಿ ನಾಗಾಲ್ಯಾಂಡ್ ವಿರುದ್ಧ 9 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ಕ್ವಾರ್ಟರ್ ಫೈನಲ್ ತಲುಪಿದೆ. ನಾಯಕ ಮಯಾಂಕ್ ಅಗರ್ವಾಲ್ ತಮ್ಮ ಉತ್ತಮ ಫಾರ್ಮ್ ಮುಂದುವರೆಸಿದ್ದು ನಾಲ್ಕನೇ ಶತಕ ಸಿಡಿಸಿದರು.
ಅಹಮದಾಬಾದ್ನ ಗುಜರಾತ್ ಕಾಲೇಜ್ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಟಾಸ್ ಸೋತು ಬ್ಯಾಟಿಂಗ್ಗೆ ಇಳಿದ ನಾಗಾಲ್ಯಾಂಡ್ ಕರ್ನಾಟಕದ ಶಿಸ್ತಿನ ಬೌಲಿಂಗ್ ದಾಳಿಯ ಮುಂದೆ ರನ್ ಗಳಿಸಲು ಪರದಾಡಿತು. ಚೇತನ್ ಬಿಶ್ಟ್ 77 ರನ್ ಮತ್ತು ನಾಯಕ ಆರ್ ಜೋನಾಥನ್ 51 ರನ್ ಗಳಿಸಿದ್ದು ಬಿಟ್ಟರೆ ಉಳಿದ ಆಟಗಾರರಿಂದ ಉತ್ತಮ ಆಟ ಬರಲಿಲ್ಲ.

ಕರ್ನಾಟಕದ ಪರವಾಗಿ ಶ್ರೇಯಸ್ ಗೋಪಾಲ್ 4 ವಿಕೆಟ್ ಪಡೆಯುವ ಮೂಲಕ ನಾಗಾಲ್ಯಾಂಡ್ಗೆ ಶಾಕ್ ನೀಡಿದರು. ಅಭಿಲಾಶ್ ಶೆಟ್ಟಿ 2 ವಿಕೆಟ್ ಪಡೆದರೆ, ವಾಸುಕಿ ಕೌಶಿಕ್, ಹಾರ್ದಿಕ್ ರಾಜ್, ವಿದ್ಯಾಧರ್ ಪಾಟೀಲ್ ಮತ್ತು ನಿಕಿನ್ ಜೋಸ್ ತಲಾ ಒಂದು ವಿಕೆಟ್ ಪಡೆದರು.
ನಾಲ್ಕನೇ ಶತಕ ಸಿಡಿಸಿದ ಮಯಾಂಕ್
ವಿಜಯ್ ಹಜಾರೆ ಟ್ರೋಫಿ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿರುವ ನಾಯಕ ಮಯಾಂಕ್ ಅಗರ್ವಾಲ್ ಮತ್ತೊಮ್ಮೆ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು. ನಿಕಿನ್ ಜೋಸ್ 1 ರನ್ ಗಳಿಸಿ ಔಟಾದ ಬಳಿಕ ನಾಗಾಲ್ಯಾಂಡ್ಗೆ ಎರಡನೇ ವಿಕೆಟ್ ಪಡೆಯಲು ನಾಯಕ ಮಯಾಂಕ್ ಅಗರ್ವಾಲ್ ಮತ್ತು ಅನೀಶ್ ಅವಕಾಶವನ್ನೇ ನೀಡಲಿಲ್ಲ.
ಎರಡನೇ ವಿಕೆಟ್ಗೆ ಈ ಜೋಡಿ ಅಜೇಯ 197 ರನ್ ಕಲೆಹಾಕುವ ಮೂಲಕ ರಾಜ್ಯಕ್ಕೆ 9 ವಿಕೆಟ್ಗಳ ಭರ್ಜರಿ ಗೆಲುವು ತಂದುಕೊಟ್ಟರು. ನಾಯಕ ಮಯಾಂಕ್ ಅಗರ್ವಾಲ್ 119 ಎಸೆತಗಳಲ್ಲಿ 9 ಬೌಂಡರಿ 4 ಸಿಕ್ಸರ್ ಸಹಿತ 116 ರನ್ ಗಳಿಸಿದರು. ಅನೀಶ್ 95 ಎಸೆತಗಳಲ್ಲಿ ಅಜೇಯ 82 ರನ್ ಗಳಿಸಿ ಮಿಂಚಿದರು.
ಈ ಗೆಲುವಿನ ಮೂಲಕ ಸಿ ಗುಂಪಿನಲ್ಲಿ ಕರ್ನಾಟಕ 7 ಪಂದ್ಯಗಳಲ್ಲಿ 6 ರಲ್ಲಿ ಗೆದ್ದು 24 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆಯುವ ಮೂಲಕ ಕ್ವಾರ್ಟರ್ ಫೈನಲ್ ಪ್ರವೇಶಿಸಿತು. ಪಂಜಾಬ್ ಸಿ ಗುಂಪಿನಲ್ಲಿ ಮೊದಲನೇ ಸ್ಥಾನದಲ್ಲಿದ್ದು ಕ್ವಾರ್ಟರ್ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ. ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ಉತ್ತಮ ಪ್ರದರ್ಶನ ನೀಡುತ್ತಿದ್ದು ಪ್ರಶಸ್ತಿ ಗೆಲ್ಲುವ ಭರವಸೆ ಮೂಡಿಸಿದೆ.
-
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ












Click it and Unblock the Notifications