Vijay Hazare Trophy: ರವಿಚಂದ್ರನ್ ಭರ್ಜರಿ ಶತಕ ಪುದುಚೆರಿ ವಿರುದ್ಧ ಗೆದ್ದ ಕರ್ನಾಟಕ
ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ತನ್ನ ಗೆಲುವಿನ ಓಟವನ್ನು ಮುಂದುವರೆಸಿದೆ. ಮೊದಲ ಪಂದ್ಯದಲ್ಲಿ ಮುಂಬೈ ವಿರುದ್ಧ 383 ರನ್ಗಳ ಬೃಹತ್ ಮೊತ್ತವನ್ನು ಚೇಸ್ ಮಾಡಿ ಭರ್ಜರಿ ಗೆಲುವು ಸಾಧಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಪುದುಚೆರಿ ವಿರುದ್ಧ ಗೆಲುವು ಸಾಧಿಸಿದೆ. ಸತತ ಎರಡು ಪಂದ್ಯಗಳನ್ನು ಗೆದ್ದಿರುವ ಕರ್ನಾಟಕ ಅಂಕಪಟ್ಟಿಯಲ್ಲಿ ಮೇಲೇರಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಪುದುಚೆರಿ ಕೇವಲ 31 ರನ್ ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ವಿದ್ಯಾಧರ್ ಪಾಟೀಲ್ ಪ್ರಮುಖ ನಾಲ್ಕು ವಿಕೆಟ್ ಪಡೆದು ಪುದುಚೆರಿಗೆ ಆಘಾತ ನೀಡಿದ್ದರು.

ಆದರೆ ಅಮನ್ ಖಾನ್ ಮತ್ತು ಕೆಬಿ ಅರುಣ್ ಕಾರ್ತಿಕ್ ತಾಳ್ಮೆಯ ಬ್ಯಾಟಿಂಗ್ ಮಾಡುವ ಮೂಲಕ ಪುದುಚೆರಿಗೆ ಆಸರೆಯಾದರು. ಈ ಜೋಡಿ 6 ವಿಕೆಟ್ಗೆ 86 ರನ್ ಕಲೆಹಾಕಿತು. ಅಮನ್ ಖಾನ್ 65 ಎಸೆತಗಳಲ್ಲಿ 45 ರನ್ ಗಳಿಸಿ ಔಟಾದರು. ಬಳಿಕ ಬಂದ ಅಂಕಿತ್ ಶರ್ಮಾ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ನಾಯಕ ಅರುಣ್ ಕಾರ್ತಿಕ್ 71 ರನ್ ಗಳಿಸುವ ಮೂಲಕ ತಂಡಕ್ಕೆ ಆಸರೆಯಾದರು. ಸಾಗರ್ ಉದೇಶಿ 21 ರನ್ ಗಳಿಸಿದರೆ, ಗೌರವ್ ಯಾದವ್ 14 ರನ್ ಗಳಿಸಿದರು. ಅಂತಿಮವಾಗಿ ಪುದುಚೆರಿ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 211 ರನ್ ಕಲೆಹಾಕಿತು. ವಿದ್ಯಾಧರ್ ಪಾಟೀಲ್ 4 ವಿಕೆಟ್ ಪಡೆದರೆ, ಶ್ರೇಯಸ್ ಗೋಪಾಲ್ 2 ವಿಕೆಟ್ ಪಡೆದರು. ವಾಸುಕಿ ಕೌಶಿಕ್ ಮತ್ತು ವಿಜಯ್ ಕುಮಾರ್ ವೈಶಾಖ್ ತಲಾ ಒಂದು ವಿಕೆಟ್ ಪಡೆದರು.
ಸ್ಮರಣ್ ಅಜೇಯ ಶತಕ
212 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಕರ್ನಾಟಕ ಉತ್ತಮ ಆರಂಭ ಪಡೆಯಲಿಲ್ಲ. ನಿಕಿನ್ ಜೋಸ್ 10 ರನ್ ಗಳಿಸಿ ಔಟಾದರೆ, ನಾಯಕ ಮಯಾಂಕ್ ಅಗರ್ವಾಲ್ 18 ರನ್ ಗಳಿಸಿ ಔಟಾದರು. ಅನೀಶ್ ಕೆವಿ 15 ರನ್ ಗಳಿಸಿ ಪೆವಿಲಿಯನ್ ಸೇರಿದರೆ ಮುಂಬೈ ವಿರುದ್ಧ ಶತಕ ಸಿಡಿಸಿದ್ದ ಶ್ರೀಜಿತ್ 1 ರನ್ ಮಾತ್ರ ಗಳಿಸಿ ಔಟಾದರು.
ರವಿಚಂದ್ರನ್ ಸ್ಮರಣ್ ಮಾತ್ರ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. 87 ಎಸೆತಗಳಲ್ಲಿ 10 ಬೌಂಡರಿ 3 ಭರ್ಜರಿ ಸಿಕ್ಸರ್ ಸಹಿತ ಅಜೇಯ 100 ರನ್ ಗಳಿಸುವ ಮೂಲಕ ಕರ್ನಾಟಕದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು.
40.5 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 214 ರನ್ ಗಳಿಸಿದ ಕರ್ನಾಟಕ ಪಂದ್ಯಾವಳಿಯ ಎರಡನೇ ಗೆಲುವು ಸಾಧಿಸಿತು, ಈ ಗೆಲುವಿನ ಮೂಲಕ 8 ಪಾಯಿಂಟ್ಗಳೊಂದಿಗೆ ಕರ್ನಾಟಕ ಸಿ ಗುಂಪಿನ ಅಂಕಪಟ್ಟಿಯಲ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದೆ.
-
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್












Click it and Unblock the Notifications