IAS Transfer: ಮತ್ತೆ 21 ಐಎಎಸ್ ಅಧಿಕಾರಿಗಳು ವರ್ಗಾವಣೆ! ಏನಿದು ಮೇಜರ್ ಸರ್ಜರಿ..? ಯಾರ್ಯಾರು ಎಲ್ಲಿಗೆ?
ಬೆಂಗಳೂರು,ಜುಲೈ 05: ಲೋಕಸಭೆ ಚುನಾವಣೆ ಮುಗಿದ ಬಳಿಕ ಕರ್ನಾಟಕ ಸರ್ಕಾರದ ಆಡಳಿತ ವರ್ಗದಲ್ಲಿ ಬಹಳ ದೊಡ್ಡ ಬದಲಾವಣೆ ನಡೆಯುತ್ತಿದೆ. ಸಿದ್ದರಾಮಯ್ಯ ಸರ್ಕಾರ 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಇದೀಗ, ಮತ್ತೆ ಕರ್ನಾಟಕ ಸರ್ಕಾರ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಸರ್ಕಾರ ಆಡಳಿತ ವರ್ಗದಲ್ಲಿ ಮೇಜರ್ ಸರ್ಜರಿ ಮಾಡುತ್ತಿದ್ದು, ಕರ್ನಾಟಕ ಸರ್ಕಾರ 21 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮುಡಾ ಹಗರಣ ಬಯಲು ಮಾಡಿದ ಮೈಸೂರು ಜಿಲಾಧಿಕಾರಿ ಕೆವಿ ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.

ಕೆವಿ ರಾಜೇಂದ್ರ ಸೇರಿದಂತೆ 21 ಐಎಎಸ್ (IAS) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಅವರನ್ನು ಪ್ರವಾಸೋದ್ಯಮ ನಿರ್ದೇಶಕರಾಗಿ ಬೆಂಗಳೂರಿಗೆ ವರ್ಗಾವಣೆ ಮಾಡಲಾಗಿದೆ. ಮೈಸೂರು ಜಿಲ್ಲಾಧಿಕಾರಿಯಾಗಿ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಇನ್ನು, ನೂತನ ಜಾಗಗಳಿಗೆ ಕೂಡಲೇ ರಿಪೋರ್ಟ್ ಮಾಡಿಕೊಳ್ಳುವಂತೆ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಹಾಯಕ ಕಾರ್ಯದರ್ಶಿ ಯುಕೇಶ್ ಕುಮಾರ್ ಎಸ್. ನಿರ್ದೇಶಿಸಿದ್ದಾರೆ.
ವರ್ಗಾವಣೆಯಾದ ಅಧಿಕಾರಿಗಳು
* ಡಾ ರಾಮ್ ಪ್ರಸಾತ್ ಮನೋಹರ್ ವಿ.: ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಕಾರ್ಯದರ್ಶಿ, ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ, ಬೆಂಗಳೂರು.
* ನಿತೇಶ್ ಪಾಟೀಲ್: ನಿರ್ದೇಶಕರು ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಇಲಾಖೆ, ಬೆಂಗಳೂರು.
* ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತೆ ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು
* ಜ್ಯೋತಿ ಕೆ: ಆಯುಕ್ತೆ ಜವಳಿ ಅಭಿವೃದ್ಧಿ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕರು, ಬೆಂಗಳೂರು.
* ಶ್ರೀಧರ ಸಿಎನ್: ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಬೆಂಗಳೂರು.
* ರಾಮ್ ಪ್ರಸಾತ್ ಮನೋಹರ್: ವ್ಯವಸ್ಥಾಪಕರು ನಿರ್ದೇಶಕರು, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಬೆಂಗಳೂರು.
* ಚಂದ್ರಶೇಖರ ನಾಯಕ ಎಲ್: ಆಯುಕ್ತರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ (ಜಾರಿ), ಬೆಂಗಳೂರು.
* ವಿಜಯಮಹಾಂತೇಶ ಬಿ ದಾನಮ್ಮನವರ್: ಉಪ ಆಯುಕ್ತ, ಹಾವೇರಿ ಜಿಲ್ಲೆ
* ಗೋವಿಂದ ರೆಡ್ಡಿ: ಉಪ ಆಯುಕ್ತ, ಬೀದರ್
* ರಘುನಂದನ್ ಮೂರ್ತಿ: ಆಯುಕ್ತರು ಖಜಾನೆಗಳು ಮತ್ತು ಲೆಕ್ಕಪತ್ರ ಇಲಾಖೆ, ಬೆಂಗಳೂರು.
* ಡಾ. ಗಂಗಾಧರಸ್ವಾಮಿ ಜಿ ಎಂ: ಉಪ ಆಯುಕ್ತ , ದಾವಣಗೆರೆ ಜಿಲ್ಲೆ
* ನಿತೀಶ್ ಕೆ: ಉಪ ಆಯುಕ್ತ, ರಾಯಚೂರು ಜಿಲ್ಲೆ
* ಮೊಹಮ್ಮದ್ ರೋಶನ್: ಉಪ ಆಯುಕ್ತ, ಬೆಳಗಾವಿ ಜಿಲ್ಲೆ
* ಶಿಲ್ಪಾ ಶರ್ಮಾ: ಉಪ ಆಯುಕ್ತೆ, ಬೀದರ್ ಜಿಲ್ಲೆ
* ಡಾ ದಿಲೀಶ್ ಸಸಿ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಸಿಟಿಜನ್ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ (EDCS), ಸಿಬ್ಬಂದಿ ಇಲಾಖೆ ಮತ್ತು ಆಡಳಿತಾತ್ಮಕ ಸುಧಾರಣೆಗಳು (ಇ-ಆಡಳಿತ) ಕೇಂದ್ರ, ಬೆಂಗಳೂರು.
* ಲೋಖಂಡೆ ಸ್ನೇಹಲ್ ಸುಧಾಕರ್: ನಿರ್ದೇಶಕ, ಕರ್ನಾಟಕ ವಿದ್ಯುತ್ ವ್ಯವಸ್ಥಾಪಕ ಕಾರ್ಖಾನೆ ಲಿಮಿಟೆಡ್
* ಶ್ರೀರೂಪ: ಆಯುಕ್ತೆ, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಬೆಂಗಳೂರು, ನಿರ್ದೇಶರು ಕರ್ನಾಟಕ ರಾಜ್ಯ ರೇಷ್ಮೆ ಕೃಷಿ ಸಂಶೋಧನೆ ಅಭಿವೃದ್ಧಿ ಸಂಸ್ಥೆ
* ಗಿಟ್ಟೆ ಮಾಧವ್ ವಿಠ್ಠಲ್ ರಾವ್: ಪ್ರಧಾನ ವ್ಯವಸ್ಥಾಪಕರು, (ಪುನರ್ವಸತಿ ಮತ್ತು ಪುನರ್ವಸತಿ), ಬಾಗಲಕೋಟೆ.
* ಹೇಮಂತ್ ಎನ್: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಜಿಲ್ಲಾ ಪಂಚಾಯತ್, ಶಿವಮೊಗ್ಗ ನೊಂಗ್ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ: ಮುಖ್ಯ ಕಾರ್ಯನಿರ್ವಾಹಕ, ವಿಜಯನಗರ ಜಿಲ್ಲೆ ಜಿಲ್ಲಾ ಪಂಚಾಯತ್ ಇಲಾಖೆ.












Click it and Unblock the Notifications