Ranji Trophy: ಕರ್ನಾಟಕದ ವಿರುದ್ಧ ಹರಿಯಾಣ ಸಮಬಲದ ಹೋರಾಟ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಹರಿಯಾಣ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ಮೊದಲ ಇನ್ನಿಂಗ್ಸ್ನಲ್ಲಿ 304 ರನ್ಗಳಿಗೆ ಆಲೌಟ್ ಆಗಿದೆ. ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಆರಂಭಿಸಿದ ಹರಿಯಾಣ ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 232 ರನ್ ಗಳಿಸಿದೆ.
ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 267 ರನ್ ಗಳಿಸಿದ್ದ ಕರ್ನಾಟಕ, ಎರಡನೇ ದಿನ ಬೇಗನೆ ವಿಕೆಟ್ ಕಳೆದುಕೊಂಡಿತು. 101 ಓವರ್ ಗಳಲ್ಲಿ 304 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಯಶೋವರ್ಧನ್ ಪರಂತಾಪ್ (35 ರನ್), ಕೆಎಲ್ ಶ್ರೀಜಿತ್ (37 ರನ್) ಔಟ್ ಆದ ಬಳಿಕ ಕರ್ನಾಟಕ ಬೇಗನೆ ವಿಕೆಟ್ ಕಳೆದುಕೊಂಡಿತು. ಅನ್ಷುಲ್ ಕಾಂಬೋಜ್ ಮತ್ತು ಅನುಜ್ ಥಕ್ರಾಲ್ ತಲಾ 4 ವಿಕೆಟ್ ಪಡೆದರು.

ಹರಿಯಾಣ ಉತ್ತಮ ಆರಂಭ
ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಹರಿಯಾಣ ಕರ್ನಾಟಕ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ್ದು ಉತ್ತಮ ಆರಂಭ ಪಡೆದುಕೊಂಡಿತು. ಲಕ್ಷ್ಯ ಸುಮನ್ ದಲಾಲ್ ಮತ್ತು ಅಂಕಿತ್ ಕುಮಾರ್ ಮೊದಲ ವಿಕೆಟ್ಗೆ 74 ರನ್ ಗಳಿಸಿದರು. ಲಕ್ಷ್ಯ ಸುಮನ್ 22 ರನ್ ಗಳಿಸಿ ಔಟಾದರು.
ಬಳಿಕ ಜೊತೆಯಾದ ಅಂಕಿತ್ ಕುಮಾರ್ ಮತ್ತು ಯುವರಾಜ್ ಸಿಂಗ್ ಮತ್ತೊಂದು ಉತ್ತಮ ಜೊತೆಯಾಟ ಆರಂಭಿಸಿದರು. ಎರಡನೇ ವಿಕೆಟ್ಗೆ ಈ ಜೋಡಿ 78 ರನ್ ಕಲೆಹಾಕಿತು. 33 ರನ್ ಗಳಿಸಿದ ಯುವರಾಜ್ ಸಿಂಗ್ ಔಟಾದರು. ಬಳಿಕ ಬಂದ ಹೆಚ್ ಜೆ ರಾಣಾ 5 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ಅಂಕಿತ್ ಕುಮಾರ್ ಶತಕ ಗಳಿಸುವ ಮೂಲಕ ಹರಿಯಾಣಕ್ಕೆ ಆಸರೆಯಾದರು 154 ಎಸೆತಗಳಲ್ಲಿ 19 ಬೌಂಡರಿ ಸಹಿತ 118 ರನ್ ಗಳಿಸಿದರು.
ನಿಶಾಂತ್ ಸಿಂಧು ಅಜೇಯ 35 ರನ್ ಗಳಿಸಿದ್ದು ವಿಕೆಟ್ ಕಾಯ್ದುಕೊಂಡಿದ್ದಾರೆ. ಧೀರು ಸಿಂಗ್ 8 ರನ್ ಗಳಿಸಿ ಔಟಾದರೆ, ಆರ್ ಪಿ ಶರ್ಮಾ ಅಜೇಯ 9 ರನ್ ಗಳಿಸಿದ್ದಾರೆ. ಯಶೋವರ್ಧನ್ ಪರಂತಾಪ್ 2 ವಿಕೆಟ್ ಪಡೆದರೆ, ಪ್ರಸಿದ್ಧ್ ಕೃಷ್ಣ, ಹಾರ್ದಿಕ್ ರಾಜ್ ಮತ್ತು ವಾಸುಕಿ ಕೌಶಿಕ್ ತಲಾ ಒಂದು ವಿಕೆಟ್ ಪಡೆದರು.
ಕ್ವಾರ್ಟರ್ ಫೈನಲ್ ಗೆಲ್ಲಲು ಕರ್ನಾಟಕ ಈ ಪಂದ್ಯವನ್ನು ದೊಡ್ಡ ಅಂತರದಲ್ಲಿ ಗೆಲ್ಲಬೇಕಿದೆ. ಆದರೆ ಸದ್ಯ ಹರಿಯಾಣ ಕೂಡ ಉತ್ತಮ ಸ್ಥಿತಿಯಲ್ಲಿದ್ದು ಪಂದ್ಯದ ಫಲಿತಾಂಶ ಅತಂತ್ರವಾಗಿದೆ. ಮೂರನೇ ದಿನ ಕರ್ನಾಟಕ ಬೇಗನೆ ಹರಿಯಾಣವನ್ನು ಆಲೌಟ್ ಮಾಡಿ ಇನ್ನಿಂಗ್ಸ್ ಮುನ್ನಡೆ ಪಡೆದರೆ ದೊಡ್ಡ ಗೆಲುವು ಸಾಧಿಸಲು ಯೋಜಿಸಬಹುದು.
-
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ











Click it and Unblock the Notifications