Ranji Trophy: ತ್ರಿಪುರಾ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡಕ್ಕೆ ಮಯಾಂಕ್, ವೈಶಾಖ್ ಆಸರೆ
ತ್ರಿಪುರಾ ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ತಂಡ ಮೊದಲನೇ ದಿನದಾಟ 8 ವಿಕೆಟ್ ಕಳೆದುಕೊಂಡು 241 ಕಲೆ ಹಾಕುವ ಮೂಲಕ ಸವಾಲಿನ ಮೊತ್ತ ಕಲೆಹಾಕಿದೆ. ಅಗರ್ತಲಾದ ಮಹಾರಾಜ ವೀರ್ ವಿಕ್ರಮ್ ಕಾಲೇಜು ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಕರ್ನಾಟಕ ತ್ರಿಪುರಾ ತಂಡವನ್ನು ಎದುರಿಸುತ್ತಿದೆ.
ಟಾಸ್ ಗೆದ್ದ ತ್ರಿಪುರಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಬ್ಯಾಟಿಂಗ್ ಆರಂಭಿಸಿದ ಕರ್ನಾಟಕ ಆರಂಭದಲ್ಲೇ ಆಘಾತ ಅನುಭವಿಸಿತು. ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ 1 ರನ್ ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಬಂದ ಅನೀಶ್ ಕೂಡ 1 ರನ್ ಗಳಿಸಿ ಔಟಾದರು.

ನಾಯಕ ಮಯಾಂಕ್ ಅಗರ್ವಾಲ್ 51 ರನ್ ಗಳಿಸುವ ಮೂಲಕ ಕರ್ನಾಟಕ ತಂಡಕ್ಕೆ ಆಸರೆಯಾದರು. ನಿಕಿನ್ ಜೋಸ್ 4 ರನ್ ಗಳಿಸಿ ಔಟಾದರೆ, ಕಿಶನ್ ಬೆದರೆ 61 ರನ್ ಗಳಿಸುವ ಮೂಲಕ ನಾಯಕನಿಗೆ ಜೊತೆಯಾದರು. ಶ್ರೀನಿವಾಸ್ ಶರತ್ 25, ಹಾರ್ದಿಕ್ ರಾಜ್ 9 ರನ್ ಗಳಿಸಿದರು.
ವೈಶಾಕ್ ಅರ್ಧಶತಕ
164 ರನ್ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ಕರ್ನಾಟಕ ತಂಡಕ್ಕೆ ವೈಶಾಕ್ ವಿಜಯ್ ಕುಮಾರ್ ಆಸರೆಯಾದರು. 61 ಎಸೆತಗಳಲ್ಲಿ 7 ಬೌಂಡರಿ ಸಹಿತ ಅಜೇಯ 51 ರನ್ ಗಳಿಸಿರುವ ಅವರು ಶಶಿ ಕುಮಾರ್ ಅವರ ಜೊತೆ ಉತ್ತಮ ಜೊತೆಯಾಟ ಕಲೆ ಹಾಕಿದರು. ಶಶಿ ಕುಮಾರ್ ಉಪಯುಕ್ತ 19 ರನ್ ಗಳಿಸಿದರು.
ವಿಧ್ವತ್ ಕಾವೇರಪ್ಪ ಅಜೇಯ 4 ರನ್ ಗಳಿಸಿದ್ದು ಎರಡನೇ ದಿನಕ್ಕೆ ಆಟವನ್ನು ಕಾಯ್ದುಕೊಂಡಿದ್ದಾರೆ. ಮೊದಲ ದಿನದಾಟದ ಅಂತ್ಯಕ್ಕೆ ಕರ್ನಾಟಕ 78 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 241 ರನ್ ಗಳಿಸಿದೆ.
ತ್ರಿಪುರ ಉತ್ತಮ ಬೌಲಿಂಗ್ ಮಾಡುವ ಮೂಲಕ ಕರ್ನಾಟಕ ತಂಡದ ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಯಿತು. ಎಂಬಿ ಮುರಾ ಸಿಂಗ್ ಮತ್ತು ಎ.ಕೆ. ಸರ್ಕಾರ್ ತಲಾ ಎರಡು ವಿಕೆಟ್ ಪಡೆದರು. ರಾಣಾ ದತ್ತಾ 3 ವಿಕೆಟ್ ಪಡೆದು ಮಿಂಚಿದರೆ, ಬಿಬಿ ದೇಬನಾಥ್ ಒಂದು ವಿಕೆಟ್ ಪಡೆದುಕೊಂಡರು.
ಈ ಬಾರಿಯ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಆಡಿರುವ ಮೂರು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಗೆದ್ದು, ಒಂದು ಪಂದ್ಯ ಸೋತಿರುವ ಕರ್ನಾಟಕ. ಗೋವಾ ವಿರುದ್ಧದ ಪಂದ್ಯವನ್ನು ಡ್ರಾ ಮಾಡಿಕೊಂಡಿತ್ತು. ಈ ಪಂದ್ಯ ಕರ್ನಾಟಕ ತಂಡ ಮುಂದಿನ ಹಂತಕ್ಕೆ ತಲುಪಲು ಮುಖ್ಯವಾಗಿದ್ದು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.
-
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications