Vijay Hazare Trophy: ವಿಜಯ್ ಹಜಾರೆ ಟ್ರೋಫಿ ಫೈನಲ್ನಲ್ಲಿ ಕನ್ನಡಿಗ ಕರುಣ್ Vs ಕರ್ನಾಟಕ ಹಣಾಹಣಿ
ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯು ಕೊನೆಯ ಹಂತಕ್ಕೆ ಬಂದಿದೆ ಜನವರಿ 18 ಶನಿವಾರದಂದು ಫೈನಲ್ ಪಂದ್ಯ ನಡೆಯಲಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಹರಿಯಾಣ ತಂಡದ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ 5ನೇ ಬಾರಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದ್ದು, ಮಹಾರಾಷ್ಟ್ರ ವಿರುದ್ಧ ಸುಲಭ ಗೆಲುವು ಸಾಧಿಸಿರುವ ವಿದರ್ಭ ಎರಡನೇ ತಂಡವಾಗಿ ಫೈನಲ್ಗೆ ಲಗ್ಗೆಯಿಟ್ಟಿದೆ.
ಕರ್ನಾಟಕ ತಂಡದಲ್ಲಿ ಅವಕಾಶ ಸಿಗದ ಕಾರಣ ವಿದರ್ಭ ತಂಡಕ್ಕೆ ಸೇರಿದ ಕರುಣ್ ನಾಯರ್, ನಾಯಕತ್ವ ವಹಿಸಿಕೊಂಡಿದ್ದು ತಂಡವನ್ನು ಫೈನಲ್ಗೆ ಮುನ್ನಡೆಸಿದ್ದಾರೆ. ಪಂದ್ಯಾವಳಿಯಲ್ಲಿ ಐದು ಶತಕ ಬಾರಿಸಿರುವ ಕರುಣ್ ನಾಯರ್ ಭರ್ಜರಿ ಫಾರ್ಮ್ನಲ್ಲಿದ್ದು ತಮ್ಮ ಮಾಜಿ ತಂಡಕ್ಕೆ ಸವಾಲಾಕಲು ಸಜ್ಜಾಗಿದ್ದಾರೆ.

ಬಲಿಷ್ಠ ತಂಡಗಳು ಮುಖಾಮುಖಿ
ಕರ್ನಾಟಕ ಮತ್ತು ವಿದರ್ಭ ಪಂದ್ಯಾವಳಿಯಲ್ಲಿ ಬಲಿಷ್ಠ ತಂಡಗಳಾಗಿದ್ದು ಬ್ಯಾಟಿಂಗ್, ಬೌಲಿಂಗ್ ಎರಡೂ ವಿಭಾಗದಲ್ಲಿ ಬಲಿಷ್ಠವಾಗಿದೆ. ಫೈನಲ್ನಲ್ಲಿ ಪ್ರಶಸ್ತಿಗಾಗಿ ಎರಡೂ ತಂಡಗಳು ರೋಚಕ ಹೋರಾಟ ನೀಡಬಹುದು ಎಂದು ನಿರೀಕ್ಷೆ ಮಾಡಲಾಗಿದೆ. ಶನಿವಾರ ನಡೆಯಲಿರುವ ಪಂದ್ಯದ ಮೇಲೆ ಬಿಸಿಸಿಐ ಆಯ್ಕೆಗಾರರು ಕಣ್ಣಿಟ್ಟಿದ್ದು ಭಾರತ ತಂಡಕ್ಕೆ ವಾಪಸಾತಿ ಮಾಡಲು ಹಲವು ಆಟಗಾರರಿಗೆ ಇದು ಉತ್ತಮ ಅವಕಾಶವಾಗಿದ್ದು ಎಲ್ಲರೂ ವೈಯಕ್ತಿಕವಾಗಿಯೂ ಉತ್ತಮ ಪ್ರದರ್ಶನ ನೀಡುವತ್ತ ಗಮನ ಹರಿಸಿದ್ದಾರೆ.
ಮಯಾಂಕ್ Vs ಕರುಣ್ ನಾಯರ್
ಈ ಪಂದ್ಯಾವಳಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಕರುಣ್ ನಾಯರ್ ಮೊದಲ ಸ್ಥಾನದಲ್ಲಿದ್ದರೆ, ಕರ್ನಾಟಕ ತಂಡದ ನಾಯಕ ಮಯಾಂಕ್ ಅಗರ್ವಾಲ್ ಎರಡನೇ ಸ್ಥಾನದಲ್ಲಿದ್ದಾರೆ. ಎರಡೂ ತಂಡಗಳಲ್ಲಿ ಬಲಿಷ್ಠ ಬ್ಯಾಟಿಂಗ್ ಪಡೆಯೇ ಇದ್ದು, ಫೈನಲ್ನಲ್ಲಿ ದೊಡ್ಡ ಮೊತ್ತ ಕಲೆಹಾಕಬಹುದು ಎಂದು ನಿರೀಕ್ಷೆ ಮಾಡಲಾಗಿದೆ.
ಮಯಾಂಕ್ ಅಗರ್ವಾಲ್, ದೇವದತ್ ಪಡಿಕ್ಕಲ್, ಅಭಿನವ್ ಮನೋಹರ್, ಅನೀಶ್ ಕೆವಿ, ಸ್ಮರಣ್ ರವಿಚಂದ್ರನ್ ಕರ್ನಾಟಕದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ಧ್ರುವ್ ಶೋರೆ, ಯಶ್ ರಾಥೋಡ್, ಕರುಣ್ ನಾಯರ್, ಜಿತೇಶ್ ಶರ್ಮಾ ವಿದರ್ಭ ತಂಡದ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ.
ಎರಡೂ ತಂಡಗಳಲ್ಲಿ ಬೌಲಿಂಗ್ ಕೂಡ ಉತ್ತಮವಾಗಿದೆ, ಎರಡೂ ತಂಡಗಳಿಗೆ ಹೋಲಿಕೆ ಮಾಡಿದರೆ ಕರ್ನಾಟಕದ ಬೌಲಿಂಗ್ ಸ್ವಲ್ಪ ಹೆಚ್ಚು ಬಲಿಷ್ಠವಾಗಿದ್ದು ಪ್ರಸಿದ್ಧ್ ಕೃಷ್ಣ, ಅಭಿಲಾಶ್ ಶೆಟ್ಟಿ, ಶ್ರೇಯಸ್ ಗೋಪಾಲ್, ವಾಸುಕಿ ಕೌಶಿಕ್ರಂತಹ ಅನುಭವಿ ವೇಗಿಗಳಿದ್ದಾರೆ.
ಶನಿವಾರ ಮಧ್ಯಾಹ್ನ 1.30ಕ್ಕೆ ಫೈನಲ್ ಪಂದ್ಯ ಆರಂಭವಾಗಲಿದೆ. ವಡೋದರಾದ ಕೋತಂಬಿ ಕ್ರೀಡಾಂಗಣದಲ್ಲಿ ಪಂದ್ಯ ನಡೆಯಲಿದ್ದು, ಜಿಯೋ ಸಿನಿಮಾದಲ್ಲಿ ನೇರಪ್ರಸಾರವನ್ನು ನೋಡಬಹುದಾಗಿದೆ.
ಸಂಭಾವ್ಯ ಆಡುವ ಬಳಗ
ಕರ್ನಾಟಕ ; ಮಯಾಂಕ್ ಅಗರವಾಲ್ (ನಾಯಕ), ದೇವದತ್ ಪಡಿಕ್ಕಲ್, ಅನೀಶ್ ಕೆವಿ, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಅಭಿನವ್ ಮನೋಹರ್, ಹಾರ್ದಿಕ್ ರಾಜ್, ಶ್ರೇಯಸ್ ಗೋಪಾಲ್, ಪ್ರಸಿದ್ಧ್ ಕೃಷ್ಣ, ವಾಸುಕಿ ಕೌಶಿಕ್, ಅಭಿಲಾಷ್ ಶೆಟ್ಟಿ.
ವಿದರ್ಭ ; ಧ್ರುವ ಶೋರೆ, ಯಶ್ ರಾಥೋಡ್, ಕರುಣ್ ನಾಯರ್ (ನಾಯಕ), ಅಪೂರ್ವ್ ವಾಂಖಡೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಶುಭಂ ದುಬೆ, ಹರ್ಷ ದುಬೆ, ನಚಿಕೇತ್ ಭೂತೆ, ಪಾರ್ಥ್ ರೇಖಡೆ, ಯಶ್ ಠಾಕೂರ್, ದರ್ಶನ್ ನಲ್ಕಂಡೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications