CK Nayudu Trophy: ವಿದರ್ಭ ವಿರುದ್ಧ 278 ರನ್ಗಳ ಭರ್ಜರಿ ಗೆಲುವು ; ಫೈನಲ್ಗೆ ಲಗ್ಗೆಯಿಟ್ಟ ಕರ್ನಾಟಕ
ನಾಗ್ಪುರದ ವಿಸಿಎ ಕಲಮ್ನ ಕ್ರೀಡಾಂಗಣದಲ್ಲಿ ನಡೆದ ಕರ್ನಲ್ ಸಿಕೆ ನಾಯುಡು ಟ್ರೋಫಿ ಪಂದ್ಯಾವಳಿಯ ಸೆಮಿಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ ಕರ್ನಾಟಕ ತಂಡ ಫೈನಲ್ಗೆ ಲಗ್ಗೆಯಿಟ್ಟಿದೆ.
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ವಿದರ್ಭ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತು. ಆದರೆ ಸಿಕೆ ನಾಯುಡು ಟ್ರೋಫಿ ಟೂರ್ನಿಯಲ್ಲಿ ಕರ್ನಾಟಕ ತಂಡದ ಆಟಗಾರರು ಈ ತಪ್ಪು ಮಾಡಲಿಲ್ಲ.

ಟಾಸ್ ಗೆದ್ದ ಕರ್ನಾಟಕ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲ ಇನ್ನಿಂಗ್ಸ್ನಲ್ಲಿ ಕರ್ನಾಟಕ 466 ರನ್ಗಳಿಗೆ ಆಲೌಟ್ ಆಯಿತು. ಅನೀಶ್ ಕೆ.ವಿ. 143 ರನ್ ಗಳಿಸಿದರೆ, ಸಮರನ್ 194 ರನ್ ಗಳಿಸಿದರು. ಇವರಿಬ್ಬರ ಅಮೋಘ ಶತಕ ಕರ್ನಾಟಕ ತಂಡ ದೊಡ್ಡ ಮೊತ್ತ ಕಲೆಹಾಕಲು ಕಾರಣವಾಯಿತು. ಇವರಿಬ್ಬರ ಜೊತೆಗೆ ಯಶೋವರ್ಧನ್ ಅಜೇಯ 54 ರನ್ ಗಳಿಸಿ ಕೊನೆ ಹಂತದಲ್ಲಿ ತಂಡಕ್ಕೆ ನೆರವಾದರು.
73 ರನ್ಗಳಿಗೆ ಆಲೌಟ್ ಆದ ವಿದರ್ಭ
ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ವಿದರ್ಭ ಕೇವಲ 73 ರನ್ಗಳಿಗೆ ಆಲೌಟ್ ಆಯಿತು. ಎಂಡಿ ಫೈಯಾಝ್ 17 ರನ್ ಗಳಿಸಿದ್ದೇ ತಂಡದ ಪರ ಗಳಿಸಿದ ಗರಿಷ್ಠ ಸ್ಕೋರ್ ಆಗಿದೆ.
ಕರ್ನಾಟಕದ ಪರ ಮಾರಕ ಬೌಲಿಂಗ್ ಮಾಡಿದ ಮೊಹ್ಸಿನ್ ಖಾನ್ 5 ವಿಕೆಟ್ ಪಡೆದರೆ, ಪರಾಸ್ ಆರ್ಯ 4 ವಿಕೆಟ್ ಪಡೆದುಕೊಂಡರು. ಯಶೋವರ್ಧನ್ ಒಂದು ವಿಕೆಟ್ ಪಡೆದರು.
ಬೃಹತ್ ಮುನ್ನಡೆ ಪಡೆದ ಕರ್ನಾಟಕ
ಮೊದಲ ಇನ್ನಿಂಗ್ಸ್ನಲ್ಲಿ 393 ರನ್ಗಳ ಬೃಹತ್ ಮುನ್ನಡೆ ಪಡೆದುಕೊಂಡ ಕರ್ನಾಟಕ ಎರಡನೇ ಇನ್ನಿಂಗ್ಸ್ನಲ್ಲಿ 141 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಈ ಮೂಲಕ ವಿದರ್ಭ ತಂಡಕ್ಕೆ 535 ರನ್ಗಳ ಬೃಹತ್ ಗುರಿ ನೀಡಿತು.
ಎರಡನೇ ಇನ್ನಿಂಗ್ಸ್ನಲ್ಲಿ ಪ್ರಕರ್ ಚತುರ್ವೇದಿ 26 ರನ್ ಗಳಿಸಿದರೆ, ಕೃತಿಕ್ ಕೃಷ್ಣ ಮತ್ತು ಅನೀಶ್ ಕೆವಿ ತಲಾ 21 ರನ್ ಗಳಿಸಿದರು. ವಿದರ್ಭ ಪರವಾಗಿ ಪ್ರವೀಣ್ 5 ವಿಕೆಟ್ ಪಡೆದರು.
256 ರನ್ಗಳಿಗೆ ಆಲೌಟ್ ಆದ ವಿದರ್ಭ
535 ರನ್ಗಳ ಬೃಹತ್ ಮೊತ್ತ ಬೆನ್ನತ್ತಿದ ವಿದರ್ಭ ತಂಡ 256 ರನ್ಗಳಿಗೆ ಆಲೌಟ್ ಆಗುವ ಮೂಲಕ 278 ರನ್ಗಳಿಂದ ಸೋಲೊಪ್ಪಿಕೊಂಡಿತು. ಪರಸ್ ಆರ್ಯ 6 ವಿಕೆಟ್ ಪಡೆದು ವಿದರ್ಭ ತಂಡಕ್ಕೆ ಆಘಾತ ನೀಡಿದರು. ಮೊಹ್ಸಿನ್ ಖಾನ್ ಮತ್ತು ಧೀರಜ್ ಗೌಡ ತಲಾ ಎರಡು ವಿಕೆಟ್ ಪಡೆದರು.
ಸಿಕೆ ನಾಯ್ಡು ಟ್ರೋಫಿ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಉತ್ತರ ಪ್ರದೇಶ ಮತ್ತು ಮುಂಬೈ ಸೆಣೆಸುತ್ತಿದ್ದು, ಈ ಪಂದ್ಯದಲ್ಲಿ ಗೆದ್ದ ತಂಡದ ವಿರುದ್ಧ ಕರ್ನಾಟಕ ಫೈನಲ್ ಪಂದ್ಯದಲ್ಲಿ ಸೆಣೆಸಲಿದೆ.
-
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ











Click it and Unblock the Notifications