Vijay Hazare Trophy: 45 ಎಸೆತಗಳಲ್ಲೇ ಮಯಾಂಕ್ ಶತಕ; ಅರುಣಾಚಲ ಪ್ರದೇಶ ವಿರುದ್ಧ ಗೆದ್ದು ಬೀಗಿದ ಕರ್ನಾಟಕ
ವಿಜಯ್ ಹಜಾರೆ ಟ್ರೋಫಿ ಸರಣಿಯಲ್ಲಿ ಕರ್ನಾಟಕ ಗೆಲುವಿನ ಓಟವನ್ನು ಮುಂದುವರೆಸಿದೆ. ಶನಿವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಅರುಣಾಚಲ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿದೆ. ಆರಂಭಿಕರಾಗಿ ಕಣಕ್ಕಿಳಿದ ಅಭಿನವ್ ಮನೋಹರ್ ಮತ್ತು ಮಯಾಂಕ್ ಅಗರ್ವಾಲ್ ಭರ್ಜರಿ ಅರ್ಧಶತಕ ಸಿಡಿಸಿ ಮಿಂಚಿದರು.
ಟಾಸ್ ಗೆದ್ದ ಕರ್ನಾಟಕ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಅರುಣಾಚಲ ಪ್ರದೇಶ ಕರ್ನಾಟಕದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. 43.2 ಓವರ್ ಗಳಲ್ಲಿ 166 ರನ್ ಗಳಿಸುಷ್ಟರಲ್ಲಿ ಆಲೌಟ್ ಆಯಿತು. ಅಭಿನವ್ ಸಿಂಗ್ ಅಜೇಯ 71 ರನ್ ಸಿಡಿಸುವ ಮೂಲಕ ಅರುಣಾಚಲ ಪ್ರದೇಶ 150 ರನ್ಗಳ ಗಡಿ ದಾಟಲು ಕಾರಣವಾದರು. ರಾಜೇಂದರ್ ಸಿಂಗ್ 30 ರನ್, ಹಾರ್ದಿಕ್ ವರ್ಮಾ 38 ರನ್ ಗಳಿಸಿದ್ದು ಬಿಟ್ಟರೆ ಉಳಿದ ಯಾವ ಬ್ಯಾಟರ್ ಕೂಡ ಎರಡಂಕಿ ರನ್ ಗಳಿಸಲಿಲ್ಲ.

ವಾಸುಕಿ ಕೌಶಿಕ್ 4 ವಿಕೆಟ್ ಪಡೆದರೆ, ಹಾರ್ದಿಕ್ ರಾಜ್ ಕೂಡ 4 ವಿಕೆಟ್ ಪಡೆಯುವ ಮೂಲಕ ಅರುಣಾಚಲ ಪ್ರದೇಶದ ಬ್ಯಾಟಿಂಗ್ ಪಡೆಯನ್ನು ಕಾಡಿದರು. ಶ್ರೇಯಸ್ ಗೋಪಾಲ್ ಮತ್ತು ಮಯಾಂಕ್ ಅಗರ್ವಾಲ್ ತಲಾ ಒಂದು ವಿಕೆಟ್ ಪಡೆದುಕೊಂಡರು.
ಅಭಿನವ್, ಮಯಾಂಕ್ ಅಬ್ಬರದ ಬ್ಯಾಟಿಂಗ್
167 ರನ್ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಕರ್ನಾಟಕ ಕೇವಲ ಓವರ್ ಗಳಲ್ಲಿ ಯಾವುದೇ ವಿಕೆಟ್ ಕಳೆದುಕೊಳ್ಳದೆ ರನ್ ಗಳಿಸುವ ಮೂಲಕ 10 ವಿಕೆಟ್ಗಳ ಭರ್ಜರಿ ಗೆಲುವು ಸಾಧಿಸಿತು. ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಅಭಿನವ್ ಮನೋಹರ್ ಆರಂಭದಲ್ಲಿ ಅಬ್ಬರಿಸಿದರೆ, ಬಳಿಕ ಮಯಾಂಕ್ ಅಗರ್ವಾಲ್ ಸ್ಫೋಟಕ ಬ್ಯಾಟಿಂಗ್ ಮಾಡಿದರು.
ಅಭಿನವ್ ಮನೋಹರ್ 41 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 66 ರನ್ ಗಳಿಸಿದರೆ, ನಾಯಕ ಮಯಾಂಕ್ ಅಗರ್ವಾಲ್ 45 ಎಸೆತಗಳಲ್ಲಿ 7 ಬೌಂಡರಿ 7 ಸಿಕ್ಸರ್ ಸಹಿತ ಅಜೇಯ 100 ರನ್ ಗಳಿಸುವ ಮೂಲಕ ಸತತ ಎರಡನೇ ಶತಕ ಸಿಡಿಸಿ ಸಂಭ್ರಮಿಸಿದರು. ಪಂಜಾಬ್ ವಿರುದ್ಧ ಕೂಡ ಅಜೇಯ ಶತಕ ಸಿಡಿಸಿದ್ದ ಮಯಾಂಕ್ ಕರ್ನಾಟಕ 1 ವಿಕೆಟ್ಗಳ ರೋಚಕ ಗೆಲುವು ಸಾಧಿಸಲು ಸಹಾಯ ಮಾಡಿದ್ದರು.
-
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ












Click it and Unblock the Notifications