Karun Nair: ಆಂಗ್ಲರ ನೆಲದಲ್ಲಿ ಕನ್ನಡಿಗನ ಅಬ್ಬರದ ದ್ವಿಶತಕ
ಕರುಣ್ ನಾಯರ್ ಟೆಸ್ಟ್ ಕ್ರಿಕೆಟ್ನಲ್ಲಿ ಭಾರತ ತಂಡಕ್ಕಾಗಿ ತ್ರಿಶತಕ ಗಳಿಸಿರುವ ಎರಡನೇ ಆಟಗಾರ. ವಿರೇಂದ್ರ ಸೆಹ್ವಾಗ್ ಬಿಟ್ಟರೆ ಟೆಸ್ಟ್ ಕ್ರಿಕೆಟ್ನಲ್ಲಿ ತ್ರಿಶತಕ ಗಳಿಸಿದ ಎರಡನೇ ಭಾರತೀಯ ಬ್ಯಾಟರ್ ಆದರೂ, ಭಾರತ ತಂಡದಲ್ಲಿ ಅವರಿಗೆ ಹೆಚ್ಚಿನ ಅವಕಾಶಗಳು ಸಿಗಲಿಲ್ಲ.
ಈ ಬಾರಿ ಐಪಿಎಲ್ ಹರಾಜಿನಲ್ಲಿ ಕೂಡ ಕರುಣ್ ನಾಯರ್ ಯಾವುದೇ ತಂಡಕ್ಕೆ ಮಾರಾಟವಾಗದೆ ಉಳಿದುಕೊಂಡರು. ಐಪಿಎಲ್ನಲ್ಲಿ ಅವಕಾಶ ಸಿಗದ ಕಾರಣ ಕರುಣ್, ಇಂಗ್ಲೆಂಡ್ನತ್ತ ಮುಖಮಾಡಿದ್ದರು. ಕೌಂಟಿ ಚಾಂಪಿಯನ್ಶಿಪ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿರುವ ಅವರು, ಸದ್ಯ ದ್ವಿಶತಕ ಬಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಕೌಂಟಿ ಚಾಂಪಿಯನ್ಶಿಪ್ ಎರಡನೇ ಡಿವಿಷನ್ 2024 ಪಂದ್ಯಾವಳಿಯಲ್ಲಿ ನಾರ್ಥಾಂಪ್ಟನ್ಶೈರ್ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಸೋಮವಾರ ಮುಕ್ತಾಯವಾದ ಪಂದ್ಯದಲ್ಲಿ ಅವರು, ಗ್ಲಾಮರ್ ಗನ್ ತಂಡದ ವಿರುದ್ಧ ಭರ್ಜರಿ ದ್ವಿಶತಕ ಗಳಿಸಿದರು.
ಟಾಸ್ ಗೆದ್ದ ನಾರ್ಥಾಂಪ್ಟನ್ಶೈರ್ ಮೊದಲು ಬೌಲಿಂಗ್ ಮಾಡಿತು. ಮೊದಲು ಬ್ಯಾಟಿಂಗ್ ಮಾಡಿದ ಗ್ಲಾಮರ್ ಗನ್ ಮೊದಲ ಇನ್ನಿಂಗ್ಸ್ನಲ್ಲಿ 271 ರನ್ಗಳಿಗೆ ಆಲೌಟ್ ಆಯಿತು. ಸ್ಲಿಪ್ನಲ್ಲಿ ಕರುಣ್ ನಾಯರ್ ಅದ್ಭುತ ಕ್ಯಾಚ್ ಕೂಡ ಪಡೆದುಕೊಂಡಿದ್ದ ವಿಡಿಯೋ ವೈರಲ್ ಆಗಿತ್ತು.
ಅಜೇಯ ದ್ವಿಶತಕ
ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ನಾರ್ಥಾಂಪ್ಟನ್ಶೈರ್ ಮೊದಲ ಇನ್ನಿಂಗ್ಸ್ನಲ್ಲಿ 6 ವಿಕೆಟ್ ನಷ್ಟಕ್ಕೆ 605 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ರಿಕಾರ್ಡೋ ವಾಸ್ಕೊನ್ಸೆಲಾಸ್ 182 ರನ್ ಗಳಿಸಿದರೆ, ಕರುಣ್ ನಾಯರ್253 ಎಸೆತಗಳಲ್ಲಿ 21 ಬೌಂಟರಿ 2 ಸಿಕ್ಸರ್ ಸಹಿತ ಅಜೇಯ 202 ರನ್ ಗಳಿಸಿ ಮಿಂಚಿದರು.
ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಗ್ಲಾಮರ್ ಗನ್ 3 ವಿಕೆಟ್ ಕಳೆದುಕೊಂಡು 104 ರನ್ ಗಳಿಸುವ ಮೂಲಕ ಪಂದ್ಯ ಡ್ರಾನಲ್ಲಿ ಅಂತ್ಯವಾಯಿತು. ಈ ವರ್ಷ ಕೌಂಟಿ ಕ್ರಿಕೆಟ್ನಲ್ಲಿ ಮೂರು ಪಂದ್ಯಗಳನ್ನಾಡಿರುವ ಕರುಣ್ ನಾಯರ್ 4 ಇನ್ನಿಂಗ್ಸ್ಗಳಲ್ಲಿ 101 ರನ್ ಸರಾಸರಿಯಲ್ಲಿ 303 ರನ್ ಕಲೆಹಾಕಿದ್ದಾರೆ.
ವಿದರ್ಭ ಪರ ಕಣಕ್ಕೆ
ರಣಜಿಯಲ್ಲಿ ಕರ್ನಾಟಕ ತಂಡದ ಪರವಾಗಿ ಆಡುತ್ತಿದ್ದ ಕರುಣ್ ನಾಯರ್, 2023-24 ರ ಸಾಲಿನಲ್ಲಿ ವಿದರ್ಭ ತಂಡವನ್ನು ಪ್ರತಿನಿಧಿಸಿದರು. ಕರ್ನಾಟಕ ತಂಡದಲ್ಲಿ ಅವಕಾಶ ಸಿಗದ ಕಾರಣ ಅವರು ವಿದರ್ಭ ಪರವಾಗಿ ಕಣಕ್ಕಿಳಿದರು. ರಣಜಿಯಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು, ವಿದರ್ಭ ತಂಡ ಈ ಬಾರಿ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಫೈನಲ್ ತಲುಪಿತ್ತು, ಆದರೆ ಫೈನಲ್ನಲ್ಲಿ ಮುಂಬೈ ವಿರುದ್ಧ ಸೋತು ರನ್ನರ್ ಅಪ್ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿತು.
-
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ











Click it and Unblock the Notifications