Karun Nair: ವಿಜಯ್ ಹಜಾರೆ ಟ್ರೋಫಿಯಲ್ಲಿ ವಿಶ್ವದಾಖಲೆ ಬರೆದ ಕನ್ನಡಿಗ ಕರುಣ್ ನಾಯರ್
ವಿಜಯ್ ಹಜಾರೆ ಟ್ರೋಫಿ ಪಂದ್ಯಾವಳಿಯಲ್ಲಿ ಕನ್ನಡಿಗ ಕರುಣ್ ನಾಯರ್ ವಿಶ್ವದಾಖಲೆ ಬರೆದಿದ್ದಾರೆ. ಕರ್ನಾಟಕ ತೊರೆದು ವಿದರ್ಭ ತಂಡಕ್ಕಾಗಿ ಆಡುತ್ತಿರುವ ಕರುಣ್ ನಾಯರ್ ಲಿಸ್ಟ್ ಎ ಕ್ರಿಕೆಟ್ನಲ್ಲಿ ಹೆಚ್ಚು ರನ್ ಗಳಿಸಿ ಹೊಸ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಇಂದು (ಶುಕ್ರವಾರ, ಜನವರಿ 3) ನಡೆದ ಉತ್ತರ ಪ್ರದೇಶ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿದ ಅವರು ಈ ದಾಖಲೆ ಬರೆದರು.
ಸತತ ಮೂರನೇ ಶತಕ ಸಿಡಿಸಿದ ಅವರು ಈ ದಾಖಲೆ ಮಾಡಿದರು. ಉತ್ತರ ಪ್ರದೇಶ ನಿಡಿದ್ದ 308 ರನ್ಗಳ ಗುರಿಯನ್ನು ಬೆನ್ನಟ್ಟಿದ ಸಂದರ್ಭದಲ್ಲಿ ಕರುಣ್ ನಾಯರ್ 112 ರನ್ ಗಳಿಸಿದರು. ಆರಂಭಿಕ ಬ್ಯಾಟರ್ ಯಶ್ ರಾಥೋಡ್ ಕೂಡ ಶತಕ ಸಿಡಿಸಿದರು. ಕರುಣ್ ನಾಯರ್ 70 ರನ್ಗಳನ್ನು ಗಳಿಸಿದ್ದಾಗ ಹೊಸ ದಾಖಲೆ ನಿರ್ಮಾಣವಾಯಿತು. ಲಿಸ್ಟ್ ಎ ಕ್ರಿಕೆಟ್ನಲ್ಲಿ ಔಟಾಗದೆ ಒಟ್ಟಾರೆ 500 ರನ್ ಗಳಿಸಿ ಈ ಸಾಧನೆ ಮಾಡಿದ ಭಾರತದ ಮೊದಲ ಬ್ಯಾಟರ್ ಎನಿಸಿಕೊಂಡರು.

ಕರ್ನಾಟಕ ತೊರೆದು ವಿದರ್ಭ ಸೇರಿರುವ ಅವರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಅಜೇಯ 112 ರನ್ ಗಳಿಸಿ ಪಂದ್ಯಾವಳಿಯನ್ನು ಆರಂಭಿಸಿದ ಅವರು, ಬಳಿಕ ಛತ್ತೀಸ್ಗಢದ ವಿರುದ್ಧ ಅಜೇಯ 44 ರನ್ ಗಳಿಸಿದರು. ಬಳಿಕ ಚಂಡೀಗಢ ವಿರುದ್ಧ ಅಜೇಯ 163 ರನ್ ಮತ್ತು ತಮಿಳುನಾಡು ವಿರುದ್ಧ ಅಜೇಯ 111 ರನ್ ಗಳಿಸಿದ್ದರು.
ಉತ್ತರ ಪ್ರದೇಶ ವಿರುದ್ಧ ಶತಕ ಗಳಿಸಿದ ಅವರು 527 ರನ್ಗಳ ದಾಖಲೆಯನ್ನು ಹೊಂದಿದ್ದ ನ್ಯೂಜಿಲೆಂಡ್ನ ಜೇಮ್ಸ್ ಫ್ರಾಂಕ್ಲಿನ್ ಅವರ ದಾಖಲೆ ಮುರಿದರು. ಲಿಸ್ಟ್ ಎ ಕ್ರಿಕೆಟ್ನಲ್ಲಿ ಔಟಾಗದೆ 542 ರನ್ ಗಳಿಸಿ ಈ ಸಾಧನೆ ಮಾಡಿದ ಮೊದಲ ಆಟಗಾರ ಎನಿಸಿಕೊಂಡರು.
ಡೆಲ್ಲಿ ಕ್ಯಾಪಿಟಲ್ಸ್ಗೆ ಹರಾಜು
ಐಪಿಎಲ್ 2025ರ ಮೆಗಾ ಹರಾಜಿನಲ್ಲಿ ಕರುಣ್ ನಾಯರ್ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಹರಾಜಾದರು. ಕರುಣ್ ನಾಯರ್ ತಮ್ಮ ಮೂಲ ಬೆಲೆ 50 ಲಕ್ಷ ರೂಪಾಯಿಗೆ ಡೆಲ್ಲಿ ಕ್ಯಾಪಿಟಲ್ಸ್ ಪಾಲಾದರು, ಯಾವುದೇ ತಂಡ ಅವರನ್ನು ಖರೀದಿಸಲು ಆಸಕ್ತಿ ತೋರಿಸದ ಕಾರಣ ಡೆಲ್ಲಿ ಕ್ಯಾಪಿಟಲ್ಸ್ ಅವರನ್ನು ಮೂಲ ಬೆಲೆಗೆ ಖರೀದಿಸಿತು.
ಲಿಸ್ಟ್ ಎ ಕ್ರಿಕೆಟ್ನಲ್ಲಿ ಔಟಾಗದೆ ಅತಿ ಹೆಚ್ಚು ರನ್ ಗಳಿಸಿದ ಆಟಗಾರರು
ಕರುಣ್ ನಾಯರ್ - 542 ರನ್
ಜೇಮ್ಸ್ ಫ್ರಾಂಕ್ಲಿನ್ - 527 ರನ್
ಜೋಶುವಾ ವ್ಯಾನ್ ಹೀಡ್ರೇನ್- 512 ರನ್
ಫಖರ್ ಜಮಾನ್ - 455 ರನ್
ತೌಫೀಕ್ ಉಮರ್ - 422 ರನ್
-
ಮಾರ್ಚ್ 20ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply











Click it and Unblock the Notifications