Ranji Trophy: 74 ವರ್ಷಗಳ ಬಳಿಕ ರಣಜಿ ಟ್ರೋಫಿ ಫೈನಲ್ ತಲುಪಿ ಇತಿಹಾಸ ನಿರ್ಮಿಸಿದ ಕೇರಳ
ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಕೇರಳ ತಂಡ ಹೊಸ ಇತಿಹಾಸ ನಿರ್ಮಿಸಿದೆ. 74 ವರ್ಷಗಳ ಬಳಿಕ ಕೇರಳ ರಣಜಿ ಟ್ರೋಫಿಯಲ್ಲಿ ಫೈನಲ್ ತಲುಪಿದ ಸಾಧನೆ ಮಾಡಿದೆ. ಪ್ರತಿ ವರ್ಷ ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಆಡುತ್ತಿದ್ದ ಕೇರಳ ಈ ಬಾರಿ ಎಲ್ಲರ ಲೆಕ್ಕಾಚಾರಗಳನ್ನು ಉಲ್ಟಾ ಮಾಡಿದ್ದು ಬಲಿಷ್ಠ ತಂಡಗಳನ್ನೇ ಮಣಿಸಿ ಫೈನಲ್ ಪ್ರವೇಶಿಸಿದೆ.
ಶುಕ್ರವಾರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ನಲ್ಲಿ ಎರಡು ರನ್ಗಳ ರೋಚಕ ಮುನ್ನಡೆ ಸಾಧಿಸಿದ ಕೇರಳ ಹೊಸ ಇತಿಹಾಸ ನಿರ್ಮಿಸಿತು. ಸೆಮಿಫೈನಲ್ ಪಂದ್ಯ ಡ್ರಾನಲ್ಲಿ ಅಂತ್ಯವಾದರೂ ಮೊದಲ ಇನ್ನಿಂಗ್ಸ್ನಲ್ಲಿ ಎರಡು ರನ್ ಮುನ್ನಡೆ ಪಡೆದ ಕೇರಳ ಫೈನಲ್ಗೆ ಅರ್ಹತೆ ಪಡೆದುಕೊಂಡಿದೆ.

1951-52ರಲ್ಲಿ ಕೇರಳ ರಣಜಿ ಟ್ರೋಫಿ ಆಡಲು ಆರಂಭಿಸಿತ್ತು, 74 ವರ್ಷಗಳ ಸುದೀರ್ಘ ಕಾಯುವಿಕೆ ಬಳಿಕ ಮೊಲದ ಬಾರಿ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಗುಜರಾತ್ಗೆ ಫೈನಲ್ ತಲುಪುವ ಅವಕಾಶವಿದ್ದರೂ ಕೊನೆಯ ಕ್ಷಣದಲ್ಲಿ 3 ರನ್ಗಳ ಹಿನ್ನಡೆ ಸಾಧಿಸುವ ಮೂಲಕ ಪಂದ್ಯಾವಳಿಯಿಂದ ಹೊರಬಿದ್ದಿದೆ.
ಗುಜರಾತ್ನ ನಂ. 10 ಬ್ಯಾಟ್ಸ್ಮನ್ ಅರ್ಜನ್ ನಾಗವಾಸ್ವಾಲ್ಲಾ ಸ್ಲಾಗ್-ಸ್ವೀಪ್ ಮಾಡಲು ಪ್ರಯತ್ನಿಸಿದಾಗ, ಸಿಲ್ಲಿ ಪಾಯಿಂಟ್ನಲ್ಲಿ ಸಲ್ಮಾನ್ ನಿಜಾರ್ ಅವರ ಹೆಲ್ಮೆಟ್ನಿಂದ ಚೆಂಡು ಬೌನ್ಸ್ ಆದ ನಂತರ ನಾಯಕ ಸಚಿನ್ ಬೇಬಿ ಅದನ್ನು ಮೊದಲ ಸ್ಲಿಪ್ನಲ್ಲಿ ಕ್ಯಾಚ್ ಹಿಡಿದಾಗ ಕೇರಳ ಮೊದಲ ಇನ್ನಿಂಗ್ಸ್ನಲ್ಲಿ 2 ರನ್ ಮುನ್ನಡೆ ಪಡೆದುಕೊಂಡಿತು.
ಡ್ರಾನಲ್ಲಿ ಮುಗಿದ ಪಂದ್ಯ
ಟಾಸ್ ಗೆದ್ದ ಕೇರಳ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಎಂ ಅಜರುದ್ದಿನ್ ಅವರ 177 ರನ್ಗಳ ಅಮೋಘ ಇನ್ನಿಂಗ್ಸ್ ನೆರವಿನಿಂದ ಮೊದಲ ಇನ್ನಿಂಗ್ಸ್ನಲ್ಲಿ 457 ರನ್ಗಳನ್ನು ಕಲೆಹಾಕಿತು. ನಾಯಕ ಸಚಿನ್ ಬೇಬಿ 69 ರನ್ ಗಳಿಸಿದರೆ, ಸಲ್ಮಾನ್ ನಿಝಾರ್ 52 ರನ್ ಗಳಿಸಿದರು.
ಬಳಿಕ ಮೊದಲ ಇನ್ನಿಂಗ್ಸ್ ಆರಂಭಿಸಿದ ಗುಜರಾತ್ ಕೂಡ ದಿಟ್ಟ ಹೋರಾಟ ನೀಡಿತು. ಪ್ರಿಯಾಂಕ್ ಪಾಂಚಾಲ್ 148 ರನ್ ಗಳಿಸಿದರೆ, ಆರ್ಯ ದೇಸಾಯಿ 73 ರನ್ ಗಳಿಸಿದರೆ, ಜಯಮೀತ್ ಪಟೇಲ್ 79 ರನ್ ಗಳಿಸಿದರು. ಕೇರಳದ ಸ್ಪಿನ್ನರ್ಗಳಾದ ಆದಿತ್ಯ ಸರ್ವಾಟೆ ಮತ್ತು ಜಲಜ್ ಸಕ್ಸೇನಾ ತಲಾ 4 ವಿಕೆಟ್ ಪಡೆದು ಗುಜರಾತ್ಗೆ ಆಘಾತ ನೀಡಿದರು. ಮೊದಲ ಇನ್ನಿಂಗ್ಸ್ ಸ್ಕೋರ್ ಸಮಬಲಗೊಳಿಸಲು ಎರಡು ರನ್ ಬೇಕಿದ್ದಾಗ ಅರ್ಜನ್ ನಾಗವಾಸ್ವಾಲ್ಲಾ ಅವರು ಹೊಡೆದ ಚೆಂಡು ಸಲ್ಮಾನ್ ನಿಜಾರ್ ಅವರ ಹೆಲ್ಮೆಟ್ಗೆ ಬಡಿದು ಮೇಲೆ ಎಗರಿತು, ಸಚಿನ್ ಬೇಬಿ ತಕ್ಷಣವೇ ಅದನ್ನು ಕ್ಯಾಚ್ ಹಿಡಿಯುವ ಮೂಲಕ ಗುಜರಾತ್ ಆಲೌಟ್ ಆಯಿತು.
ಕ್ವಾರ್ಟರ್ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರವನ್ನು ಒಂದು ರನ್ನಿಂದ ಸೋಲಿಸಿದ ಕೇರಳ, ತನ್ನ ಎರಡನೇ ರಣಜಿ ಟ್ರೋಫಿ ಸೆಮಿಫೈನಲ್ನಲ್ಲಿ, ಈಗ ಇತಿಹಾಸ ನಿರ್ಮಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications