ರಾಷ್ಟ್ರಮಟ್ಟದ ಖೋ ಖೋ ಆಟಗಾರ ನಿಧನ, ತೀರ್ಥಹಳ್ಳಿಯಲ್ಲಿ ಅಂತ್ಯಸಂಸ್ಕಾರ
ಶಿವಮೊಗ್ಗ, ಆಗಸ್ಟ್, 09: ಮೆದುಳು ಜ್ವರದಿಂದ ಬಳಲುತ್ತಿದ್ದ ರಾಷ್ಟ್ರಮಟ್ಟದ ಖೋ ಖೋ ಆಟಗಾರ ವಿನಯ್ ಸೀಬನಕೆರೆ ಮೃತಪಟ್ಟಿದ್ದು, ಅಂತ್ಯಸಂಸ್ಕಾರ ತೀರ್ಥಹಳ್ಳಿಯಲ್ಲಿ ನೆರವೇರಿತು.
ತೀರ್ಥಹಳ್ಳಿ ತಾಲೂಕಿನ ಸೀಬನಕೆರೆಯ ವಿನಯ್ ಹಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ನ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಆಗದೇ ಸಾವನ್ನಪ್ಪಿದ್ದಾರೆ.
ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದ್ದರು: ವಿನಯ್ ಸೀಬನಕೆರೆ ಅವರು ತೀರ್ಥಹಳ್ಳಿಯ ಏಕಲವ್ಯ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದರು. ಖೋ ಖೋ ಆಟದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹೆಸರು ತುಂಬಾ ಹೆಸರು ಮಾಡಿದವರಾಗಿದ್ದರು. ಖೋ ಖೋ ಸ್ಫರ್ಧೆಯಲ್ಲಿ ರಾಜ್ಯವನ್ನು ಪ್ರತಿನಿಧಿಸಿ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದರು.

ಇತ್ತೀಚೆಗಷ್ಟೇ ಉತ್ತರ ಪ್ರದೇಶದಲ್ಲಿ ನಡೆದ ಖೋ ಖೋ ಪಂದ್ಯಾವಳಿಯಲ್ಲಿ ಭಾಗವಹಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದರು. ಕರ್ನಾಟಕ ಸರ್ಕಾರ ವಿನಯ್ ಸೀಬನಕೆರೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಿತ್ತು.
ತೀರ್ಥಹಳ್ಳಿಯಲ್ಲಿ ಅಂತ್ಯ ಸಂಸ್ಕಾರ: ವಿನಯ್ ಸೀಬನಕೆರೆ ಅವರ ಅಂತ್ಯಸಂಸ್ಕಾರ ಮಂಗಳವಾರ ತೀರ್ಥಹಳ್ಳಿಯಲ್ಲಿ ನೆರೆವೇರಿತು. ಇದಕ್ಕೂ ಮೊದಲು ತೀರ್ಥಹಳ್ಳಿ ಪಟ್ಟಣದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಸಲಾಯಿತು. ವಿನಯ್ ಅವರ ಕುಟುಂಬಸ್ಥರು, ಹಿತೈಷಿಗಳು, ಸ್ನೇಹಿತರು, ಸಾರ್ವಜನಿಕರು ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ವಿನಯ್ ಕಳೆದುಕೊಂಡ ಕುಟುಂಬಸ್ಥರ ಆಕ್ರಂದ್ರನ ಮುಗಿಲು ಮುಟ್ಟಿತ್ತು.
ಖೋ ಖೋ ಆಟದಲ್ಲಿ ತಮ್ಮದೇ ಆದ ಚಾಪು ಮೂಡಿಸಿ ಯುವ ಆಟಗಾರರಿಗೂ ಸ್ಫೂರ್ತಿ ಆಗಿದ್ದರು. ಭಾರತದ ಖೋ ಖೋ ತಂಡದ ಪ್ರಮುಖ ಆಟಗಾರ, ಕರ್ನಾಟಕ ರತ್ನ ಪ್ರಶಸ್ತಿ ಪುರಸ್ಕೃತ, ತೀರ್ಥಹಳ್ಳಿಯ ವಿನಯ್ ಅವರ ಅಕಾಲಿಕ ಸಾವು ತೀವ್ರ ದುಃಖ ತಂದಿದೆ. ಹುಮ್ಮನಸ್ಸಿನ ಆಟಗಾರರಾಗಿದ್ದ ಅವರು ತೀರ್ಥಹಳ್ಳಿ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಕೀರ್ತಿ ತಂದಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications