ಮಹಾರಾಜ ಟಿ-20 ಕ್ರಿಕೆಟ್ ಟೂರ್ನಿ ಕಪ್ ಅನಾವರಣಗೊಳಿಸಿದ ಕಿಚ್ಚ ಸುದೀಪ್
ಮೈಸೂರು, ಆಗಸ್ಟ್, 04: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ಆಯೋಜಿಸಿರುವ ಮಹಾರಾಜ ಟ್ರೋಫಿ ಟಿ-20 ಕ್ರಿಕೆಟ್ ಟೂರ್ನಿಯ ಕಪ್ ಅನ್ನು ಗುರುವಾರ ನಟ ಕಿಚ್ಚ ಸುದೀಪ್ ಅನಾವರಣಗೊಳಿಸಿದರು. ಜೊತೆಗೆ ಪ್ರಶಸ್ತಿಗಾಗಿ ಕಾದಾಡುವ 6 ತಂಡಗಳ ನಾಯಕರ ಹೆಸರನ್ನು ಪ್ರಕಟಿಸಲಾಯಿತು.
ಆಗಸ್ಟ್ 7ರಿಂದ 26ರವರೆಗೆ ಮೈಸೂರು ಹಾಗೂ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳು ನಡೆಯಲಿವೆ. ಕೊರೊನಾ ಕಾರಣದಿಂದ ಎರಡು ವರ್ಷ ಈ ಪಂದ್ಯಾವಳಿ ನಡೆದಿರಲಿಲ್ಲ. ಈ ಟೂರ್ನಿಗೆ ನಟ ಕಿಚ್ಚ ಸುದೀಪ್ ರಾಯಭಾರಿಯಾಗಿದ್ದಾರೆ. ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಶಿವಮೊಗ್ಗ, ರಾಯಚೂರು ಹಾಗೂ ಮಂಗಳೂರು ಹೆಸರಿನಲ್ಲಿ 6 ತಂಡಗಳು ಕಾದಾಟಕ್ಕೆ ಸಜ್ಜಾಗಿವೆ.
ಆಗಸ್ಟ್ 7ರಂದು ಮೈಸೂರಿನ ಗ್ಲೇಡ್ಸ್ ಮೈದಾನದಲ್ಲಿ ಟೂರ್ನಿಗೆ ಚಾಲನೆ ಆಗಲಿದ್ದು, ಒಟ್ಟು 18 ಪಂದ್ಯಗಳು ಮೊದಲ ಹಂತದಲ್ಲಿ ನಡೆಯಲಿವೆ. ಬಳಿಕ ಫೈನಲ್ ಸೇರಿದಂತೆ 16 ಪಂದ್ಯಗಳು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ.

ಕೆಎಸ್ಸಿಎ ಅಧ್ಯಕ್ಷ ರೋಜರ್ ಬಿನ್ನಿ ಈ ಬಗ್ಗೆ ಮಾತನಾಡಿ, ಪ್ರಾಂಚೈಸಿಗಳ ಬದಲಿಗೆ ಪ್ರಾಯೋಜಕತ್ವದಡಿ ಟೂರ್ನಿ ಆಯೋಜಿಸಲಾಗುತ್ತಿದೆ. ಸ್ವತಃ ಕ್ರಿಕೆಟ್ನಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ನಟ ಸುದೀಪ್ ಅವರನ್ನು ಟೂರ್ನಿ ಬ್ರಾಂಡ್ ರಾಯಭಾರಿ ಎಂದು ಘೋಷಿಸಲು ಹೆಮ್ಮೆಆಗುತ್ತಿದೆ ಎಂದು ಹೇಳಿದರು.
ನಂತರ ಕೆಎಸ್ಸಿಎ ಖಜಾಂಚಿ ವಿನಯ್ ಮೃತ್ಯುಂಜಯ ಮಾತನಾಡಿ, "ಮಹಾರಾಜ ಟ್ರೋಫಿ ಟಿ-20 ಟೂರ್ನಿಯ ಟೈಟಲ್ ಪ್ರಾಯೋಜಕತ್ವವನ್ನು ಶ್ರೀರಾಮ್ ಗ್ರೂಪ್ ವಹಿಸಲಿದೆ. ಈ ಋತು ಸೇರಿದಂತೆ ಒಟ್ಟು ಮೂರು ಋತುಗಳಿಗೆ ಶ್ರೀರಾಮ್ ಗ್ರೂಪ್ ಟೈಟಲ್ ಪ್ರಾಯೋಜಕತ್ವ ವಹಿಸಲಿದೆ. 3 ವಾರಗಳ ಕಾಲ ನಡೆಯುವ ಟಿ-20 ಕ್ರಿಕೆಟ್ ಹಬ್ಬ ಸ್ಟಾರ್ ಸ್ಪೋರ್ಟ್ಸ್ 2 ಮತ್ತು ಸ್ಟಾರ್ ಸ್ಪೋರ್ಟ್ಸ್ ಕನ್ನಡದಲ್ಲಿ ನೇರ ಪ್ರಸಾರ ಆಗಲಿದೆ. ಹೆಚ್ಚಿನ ಪ್ರಮಾಣದ ಬಳಕೆಗಾಗಿ ಫ್ಯಾನ್ಕೋಡ್ ಆಪ್ನಲ್ಲಿಯೂ ವೀಕ್ಷಿಸಬಹುದು," ಎಂದರು.

ಕರ್ನಾಟಕ ಸ್ಟಾರ್ ಆಟಗಾರರಾದ ಮಯಾಂಕ್ ಅಗರ್ವಾಲ್, ಮನೀಷ್ ಪಾಂಡೆ, ಜೆ.ಸುಚಿತ್, ದೇವದತ್ ಪಡಿಕಲ್, ಶ್ರೇಯಸ್ ಗೋಪಾಲ್, ಕೆ.ಗೌತಮ್, ಕರುಣ್ ನಾಯರ್, ಅಭಿನವ್ ಮನೋಹರ್, ಕೆಸಿ ಕಾರ್ಯಪ್ಪ, ಪ್ರವೀಣ್ ದುಬೆ ಹಾಗೂ ಅಭಿಮನ್ಯು ಮಿಥುನ್ ಟೂರ್ನಿಯಲ್ಲಿ ಪಾಲ್ಗೊಳ್ಳಲಿದ್ದಾರೆ.
-
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications