KKR vs LSG: ಏಪ್ರಿಲ್ 8ರಂದು ಮಂಗಳವಾರ ನಡೆಯಲಿವೆ ಎರಡು ಐಪಿಎಲ್ ಪಂದ್ಯಗಳು!
ಐಪಿಎಲ್ 2025ರ ಆವೃತ್ತಿಯ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) vs ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ನಡುವಿನ ಪಂದ್ಯವನ್ನು ಕೊನೆಗೂ ಮರುನಿಗದಿ ಮಾಡಲಾಗಿದೆ. ಕೋಲ್ಕತ್ತಾದಲ್ಲಿ ನಡೆಯಬೇಕಿದ್ದ ಈ ಪಂದ್ಯವನ್ನು ಬೇರೆ ಕ್ರೀಡಾಂಗಣಕ್ಕೆ ಸ್ಥಳಾಂತರ ಮಾಡಲಾಗುತ್ತದೆ ಎನ್ನಲಾಗಿತ್ತು, ಆದರೆ ಈಗ ಇದೇ ಅಂಗಳದಲ್ಲಿ ಪಂದ್ಯ ನಡೆಯಲಿದ್ದು, ದಿನಾಂಕವನ್ನು ಬದಲಿಸಲಾಗಿದೆ.
ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಪಂದ್ಯದ ಮರು ವೇಳಾಪಟ್ಟಿಯನ್ನು ಅಧಿಕೃತವಾಗಿ ದೃಢಪಡಿಸಿದೆ. ಏಪ್ರಿಲ್ 6 ರಂದು ನಡೆಯಬೇಕಿದ್ದ ಈ ಹೈವೋಲ್ಟೇಜ್ ಪಂದ್ಯ ಈಗ ಏಪ್ರಿಲ್ 8 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲೇ ನಡೆಯುವಂತೆ ನಿಗದಿ ಮಾಡಿದೆ.

ಪಂದ್ಯದ ದಿನಾಂಕ ಬದಲಾಗಿದ್ದೇಕೆ?
ಏಪ್ರಿಲ್ 6ರಂದು ದೇಶಾದ್ಯಂತ ರಾಮನವಮಿ ಆಚರಣೆ ಮಾಡಲಾಗುತ್ತದೆ. ಆದರೆ ಭದ್ರತೆಯ ಕಾರಣದಿಂದ ಪಂದ್ಯಕ್ಕೆ ಸೂಕ್ತ ಭದ್ರತೆ ಸಾಧ್ಯತೆ ಇಲ್ಲದ ಕಾರಣ ಪಂದ್ಯವನ್ನು ಮರನಿಗದಿ ಮಾಡಲಾಗಿದೆ. ರಾಮನವಮಿ ಉತ್ಸವಕ್ಕಾಗಿ ನಗರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಬೇಕಿರುವುದರಿಂದ, ಪಂದ್ಯದ ವೇಳೆ ಭದ್ರತೆ ಒದಗಿಸಲು ಸಾಧ್ಯವಿಲ್ಲ ಎಂದು ಕೋಲ್ಕತ್ತಾ ಪೊಲೀಸ್ ಬಂಗಾಳ ಕ್ರಿಕೆಟ್ ಮಂಡಳಿ (ಸಿಎಬಿ) ಮಾಹಿತಿ ನೀಡಿದರು.
ಬಂಗಾಳ ಕ್ರಿಕೆಟ್ ಮಂಡಳಿ ಮತ್ತು ಬಿಸಿಸಿಐ ನಡುವಿನ ಸಾಕಷ್ಟು ಚರ್ಚೆಯ ಬಳಿಕ ಪಂದ್ಯದ ಸ್ಥಳ ಬದಲಾವಣೆ ಮಾಡುವ ಬದಲಾಗಿ ಪಂದ್ಯದ ದಿನಾಂಕ ಬದಲಾವಣೆ ಮಾಡಲು ನಿರ್ಧರಿಸಲಾಯಿತು. ಏಪ್ರಿಲ್ 6 ರ ಬದಲು ಏಪ್ರಿಲ್ 8ರಂದು ಪಂದ್ಯವನ್ನು ನಡೆಸಲು ನಿರ್ಧರಿಸಲಾಗಿದೆ.
ಬಿಸಿಸಿಐ ಹೇಳಿಕೆಯಲ್ಲಿ ಏನಿದೆ?
"ಟಾಟಾ ಐಪಿಎಲ್ 2025 ರ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್ಎಸ್ಜಿ) ನಡುವಿನ ಪಂದ್ಯವನ್ನು ಏಪ್ರಿಲ್ 6, 2025 ರಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್ನಲ್ಲಿ ನಿಗದಿಪಡಿಸಲಾಗಿತ್ತು, ಆದರೆ ಏಪ್ರಿಲ್ 8, 2025 ರಂದು ಮಂಗಳವಾರ ಮಧ್ಯಾಹ್ನ 3:30 ಕ್ಕೆ ಮರು ನಿಗದಿಪಡಿಸಲಾಗಿದೆ. ಹಬ್ಬದ ಕಾರಣ ನಗರದಾದ್ಯಂತ ಸಿಬ್ಬಂದಿಯನ್ನು ನಿಯೋಜಿಸುವ ಬಗ್ಗೆ ಕೋಲ್ಕತ್ತಾ ಪೊಲೀಸರ ವಿನಂತಿಯನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ." ಎಂದು ಬಿಸಿಸಿಐ ಮಾಹಿತಿ ನೀಡಿದೆ.
ಏಪ್ರಿಲ್ 6 ರಂದು ಭಾನುವಾರ ಕೇವಲ ಒಂದು ಪಂದ್ಯ ಮಾತ್ರ ನಡೆಯಲಿದೆ. ಸಂಜೆ 7.30ಕ್ಕೆ ಸನ್ರೈಸರ್ಸ್ ಹೈದರಾಬಾದ್ vs ಗುಜರಾತ್ ಟೈಟಾನ್ಸ್ ಸೆಣೆಸಲಿವೆ. ಆದರೆ ಏಪ್ರಿಲ್ 8ರಂದು ಮಧ್ಯಾಹ್ನ ಕೆಕೆಆರ್ vs ಎಲ್ಎಸ್ಜಿ ನಡುವೆ ಪಂದ್ಯ ನಡೆಯಲಿದ್ದು, ಸಂಜೆ 7.30 ಕ್ಕೆ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) vs ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ಕೆ) ಮುಖಾಮುಖಿಯಾಗಲಿವೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications