KKR vs SRH: ಕೆಕೆಆರ್ ಗೆಲ್ಲುತ್ತದೆ ಎಂದು ₹2.07 ಕೋಟಿ ಬೆಟ್ಟಿಂಗ್ ಕಟ್ಟಿದ ಗಾಯಕ!
ಹಲವು ಗ್ರ್ಯಾಮಿ ಪ್ರಶಸ್ತಿಗಳನ್ನು ಗೆದ್ದಿರುವ ರಾಪರ್ ಡ್ರೇಕ್ ಭಾನುವಾರ ನಡೆಯಲಿರುವ ಐಪಿಎಲ್ 2024 ರ ಫೈನಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಗೆಲ್ಲುತ್ತದೆ ಎಂದು $250,000 (ಸುಮಾರು 2.07 ಕೋಟಿ ರೂ.) ಬೆಟ್ಟಿಂಗ್ ಕಟ್ಟಿದ್ದಾರೆ.
ಕೆನಡಾದ ಗಾಯಕ, ಪ್ರಪಂಚದಲ್ಲಿ ನಡೆಯುವ ವಿವಿಧ ಕ್ರೀಡಾಕೂಟಗಳಲ್ಲಿ ಸಾಮಾನ್ಯವಾಗಿ ಬೆಟ್ಟಿಂಗ್ ಕಟ್ಟುದ್ದಾರೆ. ಕೆಕೆಆರ್ ಮೇಲೆ ಬೆಟ್ಟಿಂಗ್ ಕಟ್ಟಿರುವ ರಶೀದಿಯನ್ನು ಅವರು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಡ್ರೇಕ್ ಯಾವುದೇ ಕ್ರಿಕೆಟ್ ಪಂದ್ಯದ ಮೇಲೆ ಬೆಟ್ ಕಟ್ಟಿದ್ದು ಇದೇ ಮೊದಲು. ರಾಪರ್ನ ಬೆಟ್ಟಿಂಗ್ ದಾಖಲೆಯ ಕುರಿತು ಬಳಕೆದಾರರು ಕಾಮೆಂಟ್ ಮಾಡಿದ್ದು ಪೋಸ್ಟ್ ತ್ವರಿತವಾಗಿ ವೈರಲ್ ಆಗಿದೆ.
ಡ್ರೇಕ್ 2022 ರಲ್ಲಿ ಇಸ್ರೇಲ್ ಅಡೆಸಾನ್ಯಾ ಮತ್ತು ಅಲೆಕ್ಸ್ ಪಿರೇರಾ ನಡುವಿನ ಯುಎಫ್ಸಿ ಹೋರಾಟದಲ್ಲಿ $2 ಮಿಲಿಯನ್ ಹಣವನ್ನು ಕಳೆದುಕೊಂಡಿದ್ದಾರೆ.
ಗೆಲ್ಲುವ ಫೇವರಿಟ್ ಕೆಕೆಆರ್
ಕೋಲ್ಕತ್ತಾ ನೈಟ್ ರೈಡರ್ಸ್ ಲೀಗ್ ಹಂತಗಳಲ್ಲಿ 19 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಕ್ವಾಲಿಫೈಯರ್ 1 ರಲ್ಲಿ ಸನ್ರೈಸರ್ಸ್ ಹೈದರಾಬಾದ್ ಅನ್ನು ಸೋಲಿಸಿ ಐಪಿಎಲ್ 2024 ರ ಫೈನಲ್ಗೆ ಪ್ರವೇಶಿಸಿದೆ.
ಐಪಿಎಲ್ ಎಲಿಮಿನೇಟರ್ನಲ್ಲಿ ರಾಜಸ್ಥಾನ ರಾಯಲ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಗೆದ್ದು ಕ್ವಾಲಿಫೈಯರ್ 2 ಹಂತಕ್ಕೆ ಪ್ರವೇಶಿಸಿತ್ತು. ಕೆಕೆಆರ್ ವಿರುದ್ಧ ಕ್ವಾಲಿಫೈಯರ್ 1 ರಲ್ಲಿ ಸೋತ ಸನ್ರೈಸರ್ಸ್ ಹೈದರಾಬಾದ್ ಬಳಿಕ ಚೆನ್ನೈನಲ್ಲಿ ನಡೆದ ಕ್ವಾಲಿಫೈಯರ್ 2 ರಲ್ಲಿ ಗೆದ್ದು ಫೈನಲ್ಗೆ ಪ್ರವೇಶಿಸಿದೆ.
ಬಲಿಷ್ಠ ಬ್ಯಾಟಿಂಗ್ ಮತ್ತು ಬೌಲಿಂಗ್ ಪಡೆಯನ್ನು ಹೊಂದಿರುವ ಕೆಕೆಆರ್ ಮೇಲ್ನೋಟಕ್ಕೆ ಬಲಿಷ್ಠವಾಗಿ ಕಾಣುತ್ತಿದ್ದರೂ, ಸನ್ರೈಸರ್ಸ್ ಹೈದರಾಬಾದ್ ಕೂಡ ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿದೆ. ಎರಡೂ ತಂಡಗಳು ಬಲಿಷ್ಠವಾಗಿದ್ದು ಭಾನುವಾರ ರೋಚಕ ಫೈನಲ್ ಪಂದ್ಯವನ್ನು ನಿರೀಕ್ಷೆ ಮಾಡಲಾಗಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ರಾತ್ರಿ 7.30ಕ್ಕೆ ಪಂದ್ಯ ಆರಂಭವಾಗಲಿದೆ.
-
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು












Click it and Unblock the Notifications