KKR vs SRH: ಸ್ಟಾರ್ಕ್ ಮಾರಕ ದಾಳಿ; 159 ರನ್ಗಳಿಗೆ ಸನ್ರೈಸರ್ಸ್ ಹೈದರಾಬಾದ್ ಆಲೌಟ್
ಮಂಗಳವಾರ ನಡೆಯುತ್ತಿರುವ ಐಪಿಎಲ್ 2024ರ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ 19.3 ಓವರ್ ಗಳಲ್ಲಿ 159 ರನ್ಗಳಿಗೆ ಆಲೌಟ್ ಆಗಿದೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಸನ್ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡಕ್ಕೆ ಸ್ಫೋಟಕ ಆರಂಭ ನೀಡುತ್ತಿದ್ದ ಟ್ರಾವಿಸ್ ಹೆಡ್ ಮತ್ತು ಅಭಿಷೇಕ್ ಶರ್ಮಾ ಮುಖ್ಯ ಪಂದ್ಯದಲ್ಲೇ ವೈಫಲ್ಯ ಕಂಡರು.

ಟ್ರಾವಿಸ್ ಹೆಡ್ ಕೇವಲ ಎರಡು ಎಸೆತಗಳಲ್ಲಿ ಯಾವುದೇ ರನ್ ಗಳಿಸದೆ ಔಟಾದರೆ, ಅಭಿಷೇಕ್ ಶರ್ಮಾ ಕೇವಲ ಮೂರು ರನ್ ಗಳಿಸಿ ಔಟಾದರು. ಐಪಿಎಲ್ನ ದುಬಾರಿ ಬೌಲರ್ ಪ್ರಮುಖ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು.
ಆರಂಭದಲ್ಲೇ ಮೂರು ವಿಕೆಟ್ ಪಡೆದು ಸನ್ರೈಸರ್ಸ್ ಹೈದರಾಬಾದ್ಗೆ ಆಘಾತ ನೀಡಿದರು. ರಾಹುಲ್ ತ್ರಿಪಾಠಿ 35 ಎಸೆತಗಳಲ್ಲಿ 55 ರನ್ ಗಳಿಸಿ ತಂಡಕ್ಕೆ ಆಸರೆಯಾದರು, ಹೆನ್ರಿಚ್ ಕ್ಲಾಸೆನ್ 21 ಎಸೆತಗಳಲ್ಲಿ 32 ರನ್ ಗಳಿಸಿದರು.
ನಿತೀಶ್ ರೆಡ್ಡಿ ಕೇವಲ 9 ರನ್ ಗಳಿಸಿದರೆ, ಶಹಬಾಜ್ ಅಹಮದ್ ಮತ್ತು ಸನ್ವೀರ್ ಸಿಂಗ್ ಮೊದಲ ಎಸೆತದಲ್ಲೇ ಗೋಲ್ಡನ್ ಡಕ್ ಆದರು. ಭುವನೇಶ್ವರ್ ಕುಮಾರ್ ಕೂಡ ಸೊನ್ನೆಗೆ ಔಟಾದರು.
ನಾಯಕ ಪಾಟ್ ಕಮ್ಮಿನ್ಸ್ ಕೊನೆಯಲ್ಲಿ 24 ಎಸೆತಗಳಲ್ಲಿ 30 ರನ್ ರನ್ ಗಳಿಸುವ ಮೂಲಕ ತಂಡದ ಸ್ಕೋರ್ 150ರ ಗಡಿ ದಾಟಲು ಸಹಾಯ ಮಾಡಿದರು. ಅಂತಿಮವಾಗಿ 159 ರನ್ಗಳಿಗೆ ಆಲೌಟ್ ಆಗಿದೆ. ಕೆಕೆಆರ್ ಫೈನಲ್ ತಲುಪಲು 160 ರನ್ ಗಳಿಸಬೇಕಿದೆ.
ಮಿಚೆಲ್ ಸ್ಟಾರ್ಕ್ ಮಾರಕ ದಾಳಿ
ಬರೋಬ್ಬರಿ ₹24.75 ಕೋಟಿಗೆ ಹರಾಜಾಗಿದ್ದ ಮಿಚೆಲ್ ಸ್ಟಾರ್ಕ್ ಮಹತ್ವದ ಪಂದ್ಯದಲ್ಲಿ ಮಿಂಚಿದರು. 4 ಓವರ್ ಗಳಲ್ಲಿ 34 ರನ್ ನೀಡಿ 3 ವಿಕೆಟ್ ಪಡೆದುಕೊಂಡರು. ವರುಣ್ ಚಕ್ರವರ್ತಿ 4 ಓವರ್ ಗಳಲ್ಲಿ 26 ರನ್ ನೀಡಿ ಎರಡು ವಿಕೆಟ್ ಪಡೆದರು.
ವೈಭವ್ ಅರೋರಾ, ಹರ್ಷಿತ್ ರಾಣಾ, ಸುನಿಲ್ ನರೇನ್ ಮತ್ತು ಆಂಡ್ರೆ ರಸೆಲ್ ತಲಾ ಒಂದು ವಿಕೆಟ್ ಪಡೆದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications