KL Rahul: ವಿರಾಟ್ ಕೊಹ್ಲಿ ದಾಖಲೆ ಮುರಿದ ಕೆಎಲ್ ರಾಹುಲ್
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕೆಎಲ್ ರಾಹುಲ್ ಗುಜರಾತ್ ಟೈಟಾನ್ಸ್ ವಿರುದ್ಧ ಅಮೋಘ ಶತಕ ಗಳಿಸಿದರು. ಆರಂಭಿಕರಾಗಿ ಕಣಕ್ಕಿಳಿದ ಅವರು 65 ಎಸೆತಗಳಲ್ಲಿ 14 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 112 ರನ್ ಗಳಿಸಿ ಮಿಂಚಿದರು. ಈ ಶತಕದ ಮೂಲಕ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಮುರಿದರು.
ಕೆಎಲ್ ರಾಹುಲ್ ಟಿ20 ಕ್ರಿಕೆಟ್ನಲ್ಲಿ 8,000 ರನ್ ಗಳಿಸುವ ಮೂಲಕ ಮತ್ತೊಂದು ದಾಖಲೆ ಬರೆದರು. ವಿರಾಟ್ ಕೊಹ್ಲಿ ಅವರಿಗಿಂತ ವೇಗವಾಗಿ ಟಿ20 ಕ್ರಿಕೆಟ್ನಲ್ಲಿ 8000 ರನ್ ಪೂರೈಸಿದ ಸಾಧನೆ ಮಾಡಿದರು. ಕೆಎಲ್ ರಾಹುಲ್ ತಮ್ಮ 237 ನೇ ಟಿ20 ಪಂದ್ಯದಲ್ಲಿ 224 ಇನ್ನಿಂಗ್ಸ್ಗಳಲ್ಲಿ 8000 ರನ್ ಗಳಿಸಿದರೆ, ವಿರಾಟ್ ಕೊಹ್ಲಿ ತಮ್ಮ 243 ನೇ ಇನ್ನಿಂಗ್ಸ್ನಲ್ಲಿ 8,000 ರನ್ ಗಳಿಸಿದ್ದ ಸಾಧನೆ ಮಾಡಿದ್ದರು. ಶಿಖರ್ ಧವನ್ 277 ಇನ್ನಿಂಗ್ಸ್ಗಳಲ್ಲಿ ಈ ಮೈಲಿಗಲ್ಲು ಸಾಧಿಸಿದ್ದರು.

5ನೇ ಐಪಿಎಲ್ ಶತಕ ಸಿಡಿಸಿದ ಕೆಎಲ್ ರಾಹುಲ್
ವಿರಾಟ್ ಕೊಹ್ಲಿ ಅವರ ದಾಖಲೆ ಮುರಿದ ಬಳಿಕ ಕೆಎಲ್ ರಾಹುಲ್ ತಮ್ಮ 5 ನೇ ಐಪಿಎಲ್ ಶತಕವನ್ನು ಬಾರಿಸಿದರು. ಡೆಲ್ಲಿ ಕ್ಯಾಪಿಟಲ್ಸ್ ಪರವಾಗಿ ಇದೇ ಮೊದಲ ಬಾರಿಗೆ ಆರಂಭಿಕರಾಗಿ ಕಣಕ್ಕಿಳಿದ ಅವರು 20 ನೇ ಓವರ್ನವರೆಗೆ ಅಜೇಯರಾಗಿ ಉಳಿದರು. ಕೇವಲ 65 ಎಸೆತಗಳಲ್ಲಿ 14 ಬೌಂಡರಿಗಳು ಮತ್ತು ನಾಲ್ಕು ಸಿಕ್ಸರ್ಗಳು ಸೇರಿವೆ. ಕೆಎಲ್ ರಾಹುಲ್ ಅವರ ಅಮೋಘ ಶತಕದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 3 ವಿಕೆಟ್ ಕಳೆದುಕೊಂಡು 199 ರನ್ ಕಲೆಹಾಕಿತು.
ಐಪಿಎಲ್ನಲ್ಲಿ ಅತಿ ಹೆಚ್ಚು ಶತಕ ಗಳಿಸಿದ ಆಟಗಾರರು
ವಿರಾಟ್ ಕೊಹ್ಲಿ - 8
ಜೋಸ್ ಬಟ್ಲರ್ - 7
ಕ್ರಿಸ್ ಗೇಲ್ - 6
ಕೆಎಲ್ ರಾಹುಲ್ - 5
ಶುಭ್ಮನ್ ಗಿಲ್ - 4
ಶೇನ್ ವ್ಯಾಟ್ಸನ್ - 4
ಡೇವಿಡ್ ವಾರ್ನರ್ - 4
ಯಾವುದೇ ಕ್ರಮಾಂಕವಾದರೂ ಸಿದ್ದ!
ಕೆಎಲ್ ರಾಹುಲ್ ಈ ಐಪಿಎಲ್ ಆವೃತ್ತಿಯಲ್ಲಿ ಹಲವು ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. ಯಾವುದೇ ಕ್ರಮಾಂಕದಲ್ಲಿ ಬ್ಯಾಟಿಂಗ್ಗೆ ಕಳಿಸಿದರೂ ತಾನು ರನ್ ಗಳಿಸುತ್ತೇನೆ ಎಂದು ಅವರು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ. ಈ ಮೂಲಕ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬ್ಯಾಟಿಂಗ್ನ ಆಧಾರಸ್ಥಂಭವಾಗಿದ್ದಾರೆ. 11 ಪಂದ್ಯಗಳಲ್ಲಿ 62.62 ಸರಾಸರಿ 148.04 ಸ್ಟ್ರೈಕ್ರೇಟ್ನಲ್ಲಿ 493 ರನ್ ಗಳಿಸಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications