Ranji Trophy: ಕೆಎಲ್ ರಾಹುಲ್ ವಿಫಲ; ರಾಜ್ಯಕ್ಕೆ ಮಯಾಂಕ್, ಪಡಿಕ್ಕಲ್ ಆಸರೆ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಪಂದ್ಯದಲ್ಲಿ ಕರ್ನಾಟಕ ಮೊದಲ ದಿನ ಸುಸ್ಥಿತಿಯಲ್ಲಿದೆ. ಐದು ವರ್ಷಗಳ ಬಳಿಕ ರಣಜಿ ಆಡಲು ಕರ್ನಾಟಕ ತಂಡಕ್ಕೆ ಮರಳಿದ ಕೆಎಲ್ ರಾಹುಲ್ ಉತ್ತಮ ಆರಂಭ ಪಡೆದರೂ ದೊಡ್ಡ ಮೊತ್ತ ಗಳಿಸುವಲ್ಲಿ ವಿಫಲವಾಗಿದ್ದಾರೆ. ಗುರುವಾರದಿಂದ ಆರಂಭವಾಗಿರುವ ಹರಿಯಾಣ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಮೊದಲ ಇನ್ನಿಂಗ್ಸ್ನಲ್ಲಿ 26 ರನ್ ಗಳಿಸಿ ಔಟಾಗಿದ್ದಾರೆ.
ಟಾಸ್ ಗೆದ್ದ ಹರಿಯಾಣ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ಸಾಧಾರಣ ಆರಂಭ ಪಡೆಯಿತು. ಅನೀಶ್ ಕೆವಿ 67 ಎಸೆತಗಳಲ್ಲಿ 17 ರನ್ ಗಳಿಸಿ ಔಟಾದರು. 45 ರನ್ ಗಳಿಸಿದ್ದಾಗಲೇ ಕರ್ನಾಟಕ ಮೊದಲ ವಿಕೆಟ್ ಕಳೆದುಕೊಂಡಿತು.

ಅನೀಶ್ ಔಟಾದ ಬಳಿಕ ಕೆಎಲ್ ರಾಹುಲ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದರು. ನಾಯಕ ಮಯಾಂಕ್ ಅಗರ್ವಾಲ್ ಜೊತೆಗೂಡಿದ ಅವರು ಎರಡನೇ ವಿಕೆಟ್ಗೆ 54 ರನ್ಗಳ ಜೊತೆಯಾಟ ನಡೆಸಿದರು. 37 ಎಸೆತಗಳಲ್ಲಿ 4 ಬೌಂಡರಿ ಸಹಿತ 26 ರನ್ ಗಳಿಸಿ ಲಯದಲ್ಲಿದ್ದ ಅವರು ಅನುಶ್ ಕಾಂಬೋಜ್ ಬೌಲಿಂಗ್ನಲ್ಲಿ ಆರ್ ಪಿ ಶರ್ಮಾ ಅವರಿಗೆ ಕ್ಯಾಚ್ ಕೊಟ್ಟು ಔಟಾದರು.
ಮಯಾಂಕ್, ಪಡಿಕ್ಕಲ್ ಆಸರೆ
ಬಳಿಕ ಜೊತೆಯಾದ ಮಯಾಂಕ್ ಅಗರ್ವಾಲ್ ಮತ್ತು ದೇವದತ್ ಪಡಿಕ್ಕಲ್ ಮೂರನೇ ವಿಕೆಟ್ಗೆ 62 ರನ್ಗಳನ್ನು ಕಲೆಹಾಕಿದರು. 149 ಎಸೆತಗಳಲ್ಲಿ 8 ಬೌಂಡರಿ 3 ಸಿಕ್ಸರ್ ಸಹಿತ 91 ರನ್ ಗಳಿಸಿದ್ದ ಮಯಾಂಕ್ ಅಗರ್ವಾಲ್ ಔಟಾಗುವ ಮೂಲಕ ಶತಕದಿಂದ ವಂಚಿತರಾದರು. ದೇವದತ್ ಪಡಿಕ್ಕಲ್ 93 ಎಸೆತಗಳಲ್ಲಿ 43 ರನ್ ಗಳಿಸಿದರು.
ಕಳೆದ ಪಂದ್ಯದಲ್ಲಿ ಭರ್ಜರಿ ದ್ವಿಶತಕ ಸಿಡಿಸುವ ಮೂಲಕ ಮಿಂಚಿದ್ದ ಸ್ಮರಣ್ ರವಿಚಂದ್ರನ್ 35 ರನ್ ಗಳಿಸಿ ಔಟಾದರು. ಕೆಎಲ್ ಶ್ರೀಜಿತ್ ಅಜೇಯ 18 ರನ್ ಗಳಿಸಿದ್ದರೆ, ಯಶೋವರ್ಧನ್ ಪರಂತಾಪ್ ಅಜೇಯ 27 ರನ್ ಗಳಿಸಿದ್ದು ಎರಡನೇ ದಿನಕ್ಕೆ ವಿಕೆಟ್ ಉಳಿಸಿಕೊಂಡಿದ್ದಾರೆ. ಕರ್ನಾಟಕ ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 267 ರನ್ ಗಳಿಸಿದ್ದು ದೊಡ್ಡ ಮೊತ್ತ ಕಲೆಹಾಕುವ ವಿಶ್ವಾಸದಲ್ಲಿದೆ.
ಮತ್ತೊಂದು ಕಡೆ ಕೇರಳ ಬಿಹಾರದ ವಿರುದ್ದ ಮೊದಲ ದಿನದಾಟದ ಅಂತ್ಯಕ್ಕೆ 9 ವಿಕೆಟ್ ಕಳೆದುಕೊಂಡು 302 ರನ್ ಗಳಿಸಿದೆ. ಕೇರಳ ಬಿಹಾರದ ವಿರುದ್ಧ ಗೆದ್ದರೆ ಕರ್ನಾಟಕದ ಕ್ವಾರ್ಟರ್ ಫೈನಲ್ ತಲುಪುವ ಅವಕಾಶ ಕೈತಪ್ಪಲಿದೆ. ಕೇರಳ ಬಿಹಾರ ನಡುವಿನ ಪಂದ್ಯ ಡ್ರಾಗೊಂಡು ಕರ್ನಾಟಕ ಏನಾದರೂ ಹರಿಯಾಣ ವಿರುದ್ಧ ದೊಡ್ಡ ಗೆಲುವು ಸಾಧಿಸಿದರೆ ಬೋನಸ್ ಪಾಯಿಂಟ್ ಸಹಿತ ಎರಡನೇ ಸ್ಥಾನಕ್ಕೆ ಬಂದರೆ ಮಾತ್ರ ಕ್ವಾರ್ಟರ್ ಫೈನಲ್ಗೆ ತಲುಪಬಹುದು.
-
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications