RCB: ಬೆಂಗಳೂರು ನನ್ನ ಮನೆ; ಆರ್ಸಿಬಿ ಸೇರುವ ಬಗ್ಗೆ ಮೌನ ಮುರಿದ ಕೆಎಲ್ ರಾಹುಲ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025ರ ಮೆಗಾ ಹರಾಜಿನಲ್ಲಿ ಪ್ರಮುಖ ಆಕರ್ಷಣೆಯಾಗಿರುವ ಆಟಗಾರರಲ್ಲಿ ಕೆಎಲ್ ರಾಹುಲ್ ಕೂಡ ಒಬ್ಬರು. ಕಳೆದ ಐಪಿಎಲ್ನಲ್ಲಿ ಎಲ್ಎಸ್ಜಿ ತಂಡದ ಮಾಲೀಕ ಸಂಜೀವ್ ಗೊಯೆಂಕಾ ಜೊತೆಗಿನ ಮನಸ್ತಾಪದ ಬಳಿಕ ಅವರು ತಂಡವನ್ನು ತೊರೆಯುತ್ತಾರೆ ಎಂದು ನಿರೀಕ್ಷೆ ಮಾಡಲಾಗಿತ್ತು. ನಿರೀಕ್ಷೆಯಂತೆ ಎಲ್ಎಸ್ಜಿ ಕೆಎಲ್ ರಾಹುಲ್ರನ್ನು ಬಿಡುಗಡೆ ಮಾಡಿದ್ದು, ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಕೆಎಲ್ ರಾಹುಲ್ ಮೆಗಾ ಹರಾಜಿಗೆ ಬರುತ್ತಿದ್ದಂತೆ ಅವರನ್ನು ತವರಿನ ತಂಡಕ್ಕೆ ಕರೆತನ್ನಿ ಎಂದು ಅಭಿಮಾನಿಗಳು ಆಗ್ರಹಿಸಿದ್ದಾರೆ. ಕರ್ನಾಟಕದ ಕೆಎಲ್ ರಾಹುಲ್ ಆರ್ ಸಿಬಿ ತಂಡಕ್ಕಾಗಿ ಆಡಿದವರು, ಬಳಿಕ ಪಂಜಾಬ್ ಕಿಂಗ್ಸ್ ಮತ್ತು ಎಲ್ಎಸ್ಜಿ ತಂಡವನ್ನು ಪ್ರತಿನಿಧಿಸಿದ್ದಾರೆ. ಇದೀಗ ಮತ್ತೆ ಅವರನ್ನು ಆರ್ ಸಿಬಿಗೆ ಬರಲಿ ಎಂದು ಅಭಿಮಾನಿಗಳು ಒತ್ತಾಯಿಸಿದ್ದಾರೆ.

ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿರುವ ಕೆಎಲ್ ರಾಹುಲ್ ಆರ್ ಸಿಬಿ ತಂಡಕ್ಕೆ ಮರಳುವ ಬಗ್ಗೆ ಆಸಕ್ತಿಕರ ವಿಚಾರ ಹಂಚಿಕೊಂಡಿದ್ದಾರೆ. ಈ ಮೂಲಕ ಅಭಿಮಾನಿಗಳ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
ಕೆಎಲ್ ರಾಹುಲ್ ಹೇಳಿದ್ದೇನು?
ಸ್ಟಾರ್ ಸ್ಪೋರ್ಟ್ಸ್ ಜೊತೆ ಮಾತನಾಡಿರುವ ಕೆಎಲ್ ರಾಹುಲ್, ನಾನು ಆರ್ಸಿಬಿಗೆ ಮರಳಲು ಇಷ್ಟಪಡುತ್ತೇನೆ ಎಂದು ಹೇಳಿದ್ದಾರೆ, ಆದರೆ ಐಪಿಎಲ್ ಹರಾಜಿನಲ್ಲಿ ಏನು ಬೇಕಾದರೂ ಆಗಬಹುದು, ಅದು ನಮ್ಮ ಕೈಯಲ್ಲಿ ಇರುವುದಿಲ್ಲ ಎಂದು ಹೇಳಿದ್ದಾರೆ.
ನಾನು ಆರ್ಸಿಬಿ ತಂಡದಲ್ಲಿ ಆಡಿದ್ದು ಹೆಚ್ಚು ಖುಷಿ ಕೊಟ್ಟಿದೆ, ಅದು ನನ್ನ ಮನೆ. ಮನೆಯಲ್ಲಿ ಎಷ್ಟು ಸಮಯ ಬೇಕಾದರೂ ಕಳೆಯಬಹುದು. ನನಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಗ್ಗೆ ಚನ್ನಾಗಿ ತಿಳಿದಿದೆ. ಅಲ್ಲಿ ಆಡುತ್ತಾ ಬೆಳೆದಿದ್ದೇನೆ. ಆದ್ದರಿಂದ ಆರ್ ಸಿಬಿ ತಂಡದಲ್ಲಿ ಆಡುವುದು ಯಾವಾಗಲೂ ಖುಷಿ ಕೊಡುತ್ತದೆ ಎಂದು ಹೇಳಿದ್ದಾರೆ.
ನೀವು ಆರ್ ಸಿಬಿಗೆ ವಾಪಸಾತಿ ಮಾಡಲು ಬಯಸುತ್ತೀರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಖಂಡಿತವಾಗಿಯೂ ಇಷ್ಟವಿದೆ. ಬೆಂಗಳೂರು ನನಗೆ ಮನೆಯಾಗಿದೆ, ಅಲ್ಲಿನ ಜನ ನನ್ನನ್ನು ಸ್ಥಳೀಯ ಕನ್ನಡಿಗ ಎಂದು ಇಷ್ಟಪಡುತ್ತಾರೆ. ತಂಡಕ್ಕೆ ಮರಳುವುದು ನಿಜಕ್ಕೂ ಖುಷಿಯಾಗುತ್ತದೆ, ಆದರೆ ಇದು ಹರಾಜು ಯಾವ ತಂಡಕ್ಕೆ ಬೇಕಾದರೂ ಹೋಗಬಹುದು ಎಂದಿದ್ದಾರೆ.
ಕೆಎಲ್ ರಾಹುಲ್ 2013ರಲ್ಲಿ ಮೊದಲ ಬಾರಿ ಆರ್ ಸಿಬಿ ತಂಡದ ಜೊತೆ ಐಪಿಎಲ್ ಪ್ರಯಾಣ ಆರಂಭಿಸಿದರು. ಬಳಿಕ ಎರಡು ವರ್ಷ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕಾಗಿ ಆಡಿದ ಅವರು, 2016ರಲ್ಲಿ ಮತ್ತೆ ಆರ್ ಸಿಬಿ ತಂಡಕ್ಕೆ ಸೇರಿದರು. 2018ರಲ್ಲಿ ಪಂಜಾಬ್ ಕಿಂಗ್ಸ್ ತಂಡ ಸೇರಿದ ಅವರು, 2021ರವರೆಗೂ ತಂಡದಲ್ಲಿದ್ದರು. 2022ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡಕ್ಕೆ ಸೇರಿದ ಅವರು ನಾಯಕನ ಜವಾಬ್ದಾರಿಯನ್ನು ನಿಭಾಯಿಸಿದ್ದಾರೆ.
-
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ












Click it and Unblock the Notifications