RCB: ರಿಷಬ್ ಪಂತ್ಗೆ ₹16 ಕೋಟಿ, ವಿಲ್ ಜ್ಯಾಕ್ಸ್ಗೆ ₹10.5 ಕೋಟಿ; ಆರ್ಸಿಬಿ ಸೇರಿದ್ಯಾರು?
ಐಪಿಎಲ್ 2025ರ ಮೆಗಾ ಹರಾಜಿಗೆ ಎಲ್ಲಾ 10 ಫ್ರಾಂಚೈಸಿಗಳು ತಯಾರಿ ಮಾಡಿಕೊಳ್ಳುತ್ತಿವೆ. ನವೆಂಬರ್ 24-25 ರಂದು ಜೆಡ್ಡಾದಲ್ಲಿ ಮೆಗಾ ಹರಾಜು ಪ್ರಕ್ರಿಯೆ ನಡೆಯಲಿದೆ. ರಿಷಬ್ ಪಂತ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಯುಜ್ವೇಂದ್ರ ಚಹಾಲ್, ಇಶಾನ್ ಕಿಶನ್ ಸೇರಿದಂತೆ ಹಲವು ಪ್ರಮುಖ ಆಟಗಾರರು ಈ ಬಾರಿ ಹರಾಜಿನ ಪ್ರಮುಖ ಆಕರ್ಷಣೆಯಾಗಿದ್ದಾರೆ.
ಮೆಗಾ ಹರಾಜಿಗೆ ಮೊದಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಅಭಿಮಾನಿಗಳಿಗಾಗಿ ಅಣಕು ಹರಾಜು ಪ್ರಕ್ರಿಯೆ ನಡಸಿದೆ. ಈಗಾಗಲೇ ಬೆಂಗಳೂರು, ಮೈಸೂರು ಮತ್ತು ಬೆಳಗಾವಿಯಲ್ಲಿ ಅಣಕು ಹರಾಜು ಪ್ರಕ್ರಿಯೆ ನಡೆದಿದೆ. ಎಲ್ಲಾ 10 ಫ್ರಾಂಚೈಸಿಗಳ ಅಭಿಮಾನಿಗಳ ತಂಡವನ್ನು ಮಾಡಿ, ಹರಾಜು ಪ್ರಕ್ರಿಯೆ ನಡೆಸಲಾಗಿದೆ ಎಲ್ಲಾ 10 ತಂಡಗಳು ಬಲಿಷ್ಠ ತಂಡವನ್ನು ಕಟ್ಟುವ ಮೂಲಕ ಅಭಿಮಾನಿಗಳು ಹರಾಜು ಪ್ರಕ್ರಿಯೆನ್ನು ಆನಂದಿಸಿದರು.

ರಿಷಬ್ ಪಂತ್ಗೆ ₹16 ಕೋಟಿ
ಅಣಕು ಹರಾಜಿನಲ್ಲಿ ಆರ್ ಸಿಬಿ ಅಭಿಮಾನಿಗಳ ತಂಡವು ರಿಷಬ್ ಪಂತ್ರನ್ನು ಬರೋಬ್ಬರಿ 16 ಕೋಟಿ ರೂಪಾಯಿ ನೀಡುವ ಮೂಲಕ ತಂಡಕ್ಕೆ ಸೇರಿಸಿಕೊಂಡರು. ರಿಷಬ್ ಪಂತ್ ಈ ಬಾರಿ ಮೆಗಾ ಹರಾಜಿನ ಪ್ರಮುಖ ಆಕರ್ಷಣೆಯಾಗಿದ್ದು ಯಾವ ತಂಡಕ್ಕೆ ಸೇರಿಕೊಳ್ಳುತ್ತಾರೆ ಎನ್ನುವ ಕುತೂಹಲ ಇದೆ. ಎಬಿ ಡಿವಿಲಿಯರ್ಸ್ ಕೂಡ ರಿಷಬ್ ಪಂತ್ ಈ ಬಾರಿ ಮೆಗಾ ಹರಾಜಿನ ದುಬಾರಿ ಆಟಗಾರನಾಗುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದಿದ್ದಾರೆ.
ರಿಷಬ್ ಪಂತ್ ಹೊರತುಪಡಿಸಿ ಆಲ್ರೌಂಡರ್ ವೆಂಕಟೇಶ್ ಅಯ್ಯರ್ 8 ಕೋಟಿ ರೂಪಾಯಿಗೆ ಆರ್ ಸಿಬಿ ಪಾಲಾದರು. ಕೃನಾಲ್ ಪಾಂಡ್ಯ 6.5 ಕೋಟಿ ರೂಪಾಯಿಗೆ ಹರಾಜಾದರು. ಅಚ್ಚರಿ ಎನ್ನುವಂತೆ ಇಂಗ್ಲೆಂಡ್ ವೇಗಿ ಜೋಫ್ರಾ ಆರ್ಚರ್ ಗಾಗಿ ಯಾವ ತಂಡದ ಅಭಿಮಾನಿಗಳು ಹೆಚ್ಚಿನ ಪೈಪೋಟಿ ನಡೆಸಿಲ್ಲ ಅವರನ್ನು ಆರ್ ಸಿಬಿ 2.5 ಕೋಟಿ ರೂಪಾಯಿಗೆ ಖರೀದಿ ಮಾಡಿದರು. ಜೋಶ್ ಹೇಜಲ್ವುಡ್ಗೆ 3 ಕೋಟಿ ರೂಪಾಯಿ ನೀಡಿ ಆರ್ ಸಿಬಿ ಖರೀದಿ ಮಾಡಿತು. ವೇಗದ ಬೌಲರ್ ಟಿ ನಟರಾಜನ್ ಖರೀದಿ ಮಾಡಲು ಎಲ್ಲಾ ತಂಡಗಳು ಪ್ರಯತ್ನ ಪಟ್ಟಿದ್ದರಿಂದ ಅವರು 10.5 ಕೋಟಿ ರೂಪಾಯಿಗೆ ಆರ್ ಸಿಬಿ ಪಾಲಾದರು.
ಉಳಿದಂತೆ ಶಫಾನೆ ರುದರ್ ಪೋರ್ಡ್ 1 ಕೋಟಿ ರೂಪಾಯಿ, ಆಲ್ರೌಂಡರ್ ವಿಲ್ ಜ್ಯಾಕ್ಸ್ಗೆ 10.5 ಕೋಟಿ ರೂಪಾಯಿ ನೀಡಿದರು. ವನಿಂದು ಹಸರಂಗ 4 ಕೋಟಿ ರೂಪಾಯಿಗೆ ಹರಾಜಾದರು.
ಅಣಕು ಹರಾಜಿನ ಬಳಿಕ ಆರ್ ಸಿಬಿ ತಂಡ
ವಿರಾಟ್ ಕೊಹ್ಲಿ, ರಜತ್ ಪಟಿದಾರ್, ವಿಲ್ ಜ್ಯಾಕ್ಸ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್, ಕೃನಾಲ್ ಪಾಂಡ್ಯ, ಯಶ್ ದಯಾಳ್, ಜೋಶ್ ಹೇಜಲ್ವುಡ್, ಜೋಫ್ರಾ ಆರ್ಚರ್, ಟಿ ನಟರಾಜನ್, ಶರ್ಫಾನೆ ರುದರ್ ಫೋರ್ಡ್, ಶ್ರೇಯಸ್ ಗೋಪಾಲ್, ನಮನ್ ದರ್.
-
ಐಪಿಎಲ್ನಲ್ಲಿ ಯಾರೂ ಕೊಳ್ಳದಿದ್ದರೂ ಅಯೋಧ್ಯೆಯಲ್ಲಿ ಅಬ್ಬರಿಸಿದ ಆರ್ಸಿಬಿ ಮಾಜಿ ಆಟಗಾರ; 195 ರನ್ ಚಚ್ಚಿದ ಸ್ವಸ್ತಿಕ್ ಚಿಕಾರ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications