ಕ್ರಿಕೆಟ್ ದಿಗ್ಗಜ ಅನಿಲ್ ಕುಂಬ್ಳೆ ಜೊತೆ ಜಗನ್ ಮಾತಾಡಿದ್ದೇನು?
ಅಮರಾವತಿ, ಜುಲೈ 5: ಟೀಂ ಇಂಡಿಯಾ ಮಾಜಿ ನಾಯಕ, ಕರ್ನಾಟಕದ ಹೆಮ್ಮೆಯ ಕ್ರೀಡಾಪಟು ಅನಿಲ್ ಕುಂಬ್ಳೆ ಇಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿರನ್ನು ಭೇಟಿ ಮಾಡಿ, ಮಾತುಕತೆ ನಡೆಸಿದರು.
ಕುಂಬ್ಳೆ ಕ್ರಿಕೆಟರ್ ಅಷ್ಟೇ ಅಲ್ಲದೆ ಕ್ರಿಕೆಟ್ ಸಂಬಂಧಿಸಿದ ಉದ್ಯಮದಲ್ಲಿ ಹಲವು ವರ್ಷಗಳಿಂದ ತೊಡಗಿಕೊಂಡಿದ್ದಾರೆ. ಕ್ರಿಕೆಟ್ ಆಟಕ್ಕೆ ಸಂಬಂಧಪಟ್ಟ ಸಾಫ್ಟ್ ವೇರ್ ವಿನ್ಯಾಸ, ಯುವಪ್ರತಿಭೆಗಳ ಆಯ್ಕೆಗೆ ಬೇಕಾದ ಹಿನ್ನೆಲೆ ಸಾಧನ, ತಂತ್ರಾಂಶಗಳನ್ನು ಕುಂಬ್ಳೆ ಒಡೆತನದ ಸಂಸ್ಥೆ ಒದಗಿಸುತ್ತದೆ.
ಸೌಹಾರ್ದ ಭೇಟಿ: ಆಂಧ್ರಪ್ರದೇಶ ಸಿಎಂ ಜಗನ್ ಹಾಗೂ ಅನಿಲ್ ಕುಂಬ್ಳೆ ಭೇಟಿ ಸೌಹಾರ್ದಯುತವಾಗಿತ್ತು, ಆಂಧ್ರದಲ್ಲಿ ಕ್ರೀಡಾ ವಿಶ್ವವಿದ್ಯಾಲಯ ಸ್ಥಾಪನೆ ಬಗ್ಗೆ ಇಬ್ಬರು ಚರ್ಚೆ ಮಾಡಿದರು ಎಂದು ತಿಳಿದು ಬಂದಿದೆ.

ಆಂಧ್ರದಲ್ಲಿ ಕ್ರೀಡಾ ವಿವಿ ಜೊತೆಗೆ ಕ್ರೀಡಾ ಉತ್ಪನ್ನ, ಸಾಧನಗಳನ್ನು ಉತ್ಪಾದಿಸುವ ಕಾರ್ಖಾನೆ ಸ್ಥಾಪನೆ ಬಗ್ಗೆ ಅನಿಲ್ ಕುಂಬ್ಳೆ ಸಲಹೆ ನೀಡಿದರು ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

''ಭಾರತದಲ್ಲಿ ಸದ್ಯ ಕ್ರೀಡಾ ಉತ್ಪನ್ನ, ಉಪಕರಣಗಳನ್ನು ಪಡೆಯಲು ಜಲಂಧರ್, ಮೀರತ್ ಕಡೆಗೆ ಮುಖ ಮಾಡಬೇಕಿದೆ, ಆಂಧ್ರದಲ್ಲಿ ಅಂಥದ್ದೊಂದು ಕಾರ್ಖಾನೆ ಸ್ಥಾಪಿಸಿದರೆ ಈ ಭಾಗದ ಎಲ್ಲಾ ಕ್ರೀಡಾ ಕ್ಷೇತ್ರದವರಿಗೆ ಉಪಯೋಗವಾಗಲಿದೆ'' ಎಂದು ಅನಿಲ್ ಕುಂಬ್ಳೆ ಸಲಹೆ ನೀಡಿದ್ದಾರೆ. ಜೊತೆಗೆ ಕ್ರೀಡಾ ವಿವಿ ಸ್ಥಾಪನೆ ಬಗ್ಗೆ ಅಗತ್ಯ ಸಲಹೆ, ಸೂಚನೆ, ಉಪಯುಕ್ತ ಮಾಹಿತಿ ಹಂಚಿಕೊಳ್ಳಲು ಸದಾ ಸಿದ್ಧ ಎಂದು ಜಗನ್ಗೆ ಭರವಸೆ ನೀಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ -
ಬೆಂಗಳೂರು ಏರ್ಪೋರ್ಟ್ಗೆ ಸತತ 4ನೇ ಬಾರಿಯೂ ವಿಶ್ವದ 'ಅತ್ಯುತ್ತಮ ಏರ್ಪೋರ್ಟ್'ಪ್ರಶಸ್ತಿ -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ












Click it and Unblock the Notifications